ಮುಂಡಗೋಡ: ಅಕ್ರಮವಾಗಿ ಮಣ್ಣು ಅಗೆದು ಸಾಗಿಸುತ್ತಿದ್ದ ಟ್ರ್ಯಾಕ್ಟರ್ ಮತ್ತು ಜೆಸಿಬಿಯನ್ನು ಅರಣ್ಯ ಇಲಾಖೆ ಅಧಿಕಾರಿಗಳು ವಶಕ್ಕೆ ಪಡೆದ ಘಟನೆ ತಾಲೂಕಿನ ಇಂದೂರ ಅರಣ್ಯ ವಲಯದಲ್ಲಿ ಭಾನುವಾರ ನಡೆದಿದೆ.
ಉಪ ವಲಯ ಅರಣ್ಯಾಧಿಕಾರಿ ಶ್ರೀಕಾಂತ್ ವೆರ್ಣೇಕರ್, ಗಸ್ತು ಅರಣ್ಯ ಪಾಲಕ ನಾರಾಯಣ ಸಿಂಗ್ ರಜಪೂತ್ ಹಾಗೂ ಈರಪ್ಪ ಉಗ್ನಿಕೇರಿ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು. ಹುಚ್ಚುನಾಯಿ ಕಚ್ಚಿ ಮೂವರು ಮಕ್ಕಳಿಗೆ ಗಾಯ
ಮುಂಡಗೋಡ: ಮನೆ ಅಂಗಳದಲ್ಲಿ ಆಟವಾಡುತ್ತಿದ್ದ ಮೂವರು ಮಕ್ಕಳಿಗೆ ಹುಚ್ಚುನಾಯಿ ಕಚ್ಚಿ ಗಾಯಗೊಳಿಸಿದ ಘಟನೆ ಪಟ್ಟಣದಲ್ಲಿ ಭಾನುವಾರ ನಡೆದಿದೆ.ಪಟ್ಟಣದ ಕಿಲ್ಲೇ ಓಣಿಯ ಶಾದಾಬ್ ಸಮೀರ್ ನಿಗೋಣಿ (೫), ಅಸ್ಲಾನ್ (೩) ಹಾಗೂ ಲಮಾಣಿ ತಾಂಡಾ ನಿವಾಸಿ ಅನನ್ಯ ಲಮಾಣಿ (೨) ಈ ಮೂವರು ಮಕ್ಕಳಿಗೆ ಹುಚ್ಚುನಾಯಿ ಕಚ್ಚಿ ಗಾಯಗೊಳಿಸಿದೆ.ಶಾದಾಬ್ ನಿಗೋಣಿಗೆ ತಲೆ, ಕಣ್ಣು, ಕೈ ಹೀಗೆ ಹಲವು ಭಾಗಗಳಲ್ಲಿ ಕಚ್ಚಿದೆ. ಅನನ್ಯ ಲಮಾಣಿಗೆ ಕೈಗೆ ಕಚ್ಚಿ ತೀವ್ರವಾಗಿ ಗಾಯಗೊಳಿಸಿದೆ. ಇವರಿಗೆ ತಾಲೂಕು ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗೆ ಹುಬ್ಬಳ್ಳಿ ಕಿಮ್ಸ್ ತೆರಳುವಂತೆ ಸೂಚಿಸಲಾಗಿದೆ. ಇನ್ನೋರ್ವ ಬಾಲಕ ಅಸ್ಲಾನ್ಗೆ ಸಣ್ಣ ಪ್ರಮಾಣದಲ್ಲಿ ಗಾಯವಾಗಿದ್ದರಿಂದ ಇಲ್ಲಿಯ ಆಸ್ಪತ್ರೆಯಲ್ಲಿಯೇ ಚಿಕಿತ್ಸೆ ನೀಡಲಾಗುತ್ತಿದೆ.ಪಟ್ಟಣದಲ್ಲಿ ಬೀದಿನಾಯಿಗಳ ಹಾವಳಿ ಹೆಚ್ಚಿದ್ದು, ಸಾರ್ವಜನಿಕರು ಧೈರ್ಯದಿಂದ ತಿರುಗುವುದು ಕಷ್ಟಸಾಧ್ಯವಾಗಿದೆ. ತಕ್ಷಣ ಪಪಂನವರು ಬೀದಿನಾಯಿಗಳನ್ನು ಹಿಡಿದು ಸ್ಥಳಾಂತರ ಮಾಡಬೇಕೆಂದು ಸ್ಥಳೀಯರು ಆಗ್ರಹಿಸಿದ್ದಾರೆ.ಹೃದಯಾಘಾತದಿಂದ ಪ್ರವಾಸಿಗ ಸಾವು