ಗೋ ಅಕ್ರಮ ಸಾಗಾಟ ಪತ್ತೆ: ಐದು ದನ ವಶ, ನಾಲ್ವರ ಬಂಧನ

KannadaprabhaNewsNetwork |  
Published : Oct 05, 2024, 01:40 AM IST
111 | Kannada Prabha

ಸಾರಾಂಶ

ವಾಹನದಲ್ಲಿ ಇದ್ದವರ ಬಳಿ ದನಗಳ ಸಾಗಾಟಕ್ಕೆ ಯಾವುದೇ ಪರವಾನಗಿ ಇರಲಿಲ್ಲ. ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಕನ್ನಡಪ್ರಭ ವಾರ್ತೆ ಬೆಳ್ತಂಗಡಿ

ಮಲವಂತಿಗೆಯಲ್ಲಿ ಅಕ್ರಮವಾಗಿ ನಡೆಯುತ್ತಿದ್ದ ಗೋ ಸಾಗಾಟವನ್ನು ಸ್ಥಳೀಯರ ಸಹಕಾರದೊಂದಿಗೆ ಪತ್ತೆ ಹಚ್ಚಿದ ಬೆಳ್ತಂಗಡಿ ಪೊಲೀಸರು ಎರಡು ಪಿಕಪ್ ವಾಹನಗಳನ್ನು ಹಾಗೂ ಐದು ದನಗಳನ್ನು ವಶಪಡಿಸಿಕೊಂಡು ನಾಲ್ಕು ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ.

ಬಂಧಿತ ಆರೋಪಿಗಳು ಚಿಬಿದ್ರೆ ಗ್ರಾಮದ ಪೆರಿಯಡ್ಕ ನಿವಾಸಿ ಯತೀಂದ್ರ(24), ತೋಟತ್ತಾಡಿ ಗ್ರಾಮದ ಬೆಂದ್ರಾಳ ನಿವಾಸಿ ಅರವಿಂದ(30), ಚಾರ್ಮಾಡಿ ಗ್ರಾಮದ ನಿವಾಸಿ ಉಸ್ಮಾನ್ ( 36), ಚಿಬಿದ್ರೆ ಗ್ರಾಮದ ನಿವಾಸಿ ಆರಿಫ್ (27) ಎಂಬವರಾಗಿದ್ದಾರೆ.

ಮಲವಂತಿಗೆ ಗ್ರಾಮದ ಎಳನೀರು ದಿಡುಪೆ ರಸ್ತೆಯಲ್ಲಿ ಅಕ್ರಮವಾಗಿ ಪಿಕಪ್ ವಾಹನದಲ್ಲಿ ದನಗಳನ್ನು ಸಾಗಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿಯ ಆಧಾರದಲ್ಲಿ ಗುರುವಾರ ರಾತ್ರಿ ಬೆಳ್ತಂಗಡಿ ಪೊಲೀಸರು ಮಲವಂತಿಗೆ ಗ್ರಾಮದ ಕಜಕೆ ಎಂಬಲ್ಲಿ ಪಿಕಪ್ ವಾಹನಗಳನ್ನು ತಡೆದು ಪರಿಶೀಲನೆ ನಡೆಸಿದರು. ಎರಡು ಪಿಕಪ್ ವಾಹನಗಳಲ್ಲಿ ಐದು ದನಗಳನ್ನು ಸಾಗಾಟ ಮಾಡುತ್ತಿರುವುದು ಕಂಡು ಬಂದಿದೆ. ವಾಹನದಲ್ಲಿ ಇದ್ದವರ ಬಳಿ ದನಗಳ ಸಾಗಾಟಕ್ಕೆ ಯಾವುದೇ ಪರವಾನಗಿ ಇರಲಿಲ್ಲ. ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಯುವ ಪೀಳಿಗೆ ಪೋಷಕಾಂಶಗಳ ಕೊರತೆ
ಪುಟ 2ಕ್ಕೆ ಬಾಟಮ್....ಗುರುವಂದನಾ, ಸ್ನೇಹ ಸಮ್ಮಿಲನ ಕಾರ್ಯಕ್ರಮ