ಲಕ್ಷ್ಮೇಶ್ವರ: ಸಮೀಪದ ಪು.ಬಡ್ನಿ ಗ್ರಾಮದಲ್ಲಿ ಬುಧವಾರ ರಾತ್ರಿ ಓರ್ವ ಯುವಕನನ್ನು ಭೀಕರವಾಗಿ ಕೊಲೆ ಮಾಡಿರುವ ಘಟನೆ ನಡೆದಿದೆ. ಕೊಲೆಯಾದ ಯುವಕನನ್ನು ಈರಣ್ಣ ಷಣ್ಮುಖಪ್ಪ ಅಗಸಿಬಾಗಿಲ(೩೪) ಎಂದು ಗುರುತಿಸಲಾಗಿದ್ದು, ಅನೈತಿಕ ಸಂಬಂಧ ಶಂಕೆ ಹಿನ್ನೆಲೆ ಬುಧವಾರ ರಾತ್ರಿ ಯುವಕನ ಮನೆಯಂಗಳದಲ್ಲಿಯೇ ಬಡಿಗೆ ಹಾಗೂ ಕಟ್ಟಿಗೆ ಮಣಿಯಿಂದ ಭೀಕರವಾಗಿ ಹಲ್ಲೆ ಮಾಡಿ ಕೊಲೆ ಮಾಡಲಾಗಿದೆ.
ಬುಧವಾರ ರಾತ್ರಿ ೯ ಗಂಟೆ ಸುಮಾರಿಗೆ ಅನೈತಿಕ ಸಂಬಂಧ ಹೊಂದಿದ್ದ ಮಹಿಳೆಯ ಗಂಡ ಹಾಗೂ ಆತನ ಸಂಬಂಧಿಕರು ಮೃತ ಯುವಕ ಈರಣ್ಣನ ಮನೆಗೆ ತೆರಳಿ ಜಗಳ ಆರಂಭಿಸಿದ್ದಾರೆ. ಅವಾಚ್ಯ ಶಬ್ದಗಳಿಂದ ನಿಂದಿಸುತ್ತಾ ಮನೆಯಲ್ಲಿಯೇ ಇದ್ದ ಕಟ್ಟಿಗೆ ಮಣಿ, ಕಬ್ಬಿಣದ ರಾಡು ಮತ್ತು ಬಡಿಗೆಯಿಂದ ಹಲ್ಲೆ ನಡೆಸಿದ್ದು, ಈ ವೇಳೆ ತೀವ್ರವಾಗಿ ಗಾಯಗೊಂಡ ಯುವಕ ಈರಣ್ಣ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ ಎಂದು ಆರೋಪಿಸಲಾಗಿದೆ. ಕೊಲೆ ಮಾಡಿದ ವ್ಯಕ್ತಿಗಳು ಲಕ್ಷ್ಮೇಶ್ವರ ಪೊಲೀಸ್ ಠಾಣೆಗೆ ತೆರಳಿ ಶರಣಾಗಿದ್ದಾರೆ.
ವಿಷಯ ಅರಿತ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲಿಸಿ, ದೂರು ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳನ್ನು ಬಂಧಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಸ್ಥಳಕ್ಕೆ ಎಸ್ಪಿ ಹಾಗೂ ಡಿವೈಎಸ್ಪಿ, ಸಿಪಿಐ, ಪಿಎಸ್ಐ, ಕ್ರೈಂ ವಿಭಾಗದ ಪಿಎಸ್ಐ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಮಾಲೀಕರ ಚಿನ್ನ ಕದ್ದ ಮನೆಗೆಲಸದ ಮಹಿಳೆ ಬಂಧನಗದಗ: ಬರೋಬ್ಬರಿ 12 ವರ್ಷಗಳಿಂದ ಮನೆಕೆಲಸ ಮಾಡಿಕೊಂಡು ಮನೆ ಮಾಲೀಕರ ವಿಶ್ವಾಸ ಗಳಿಸಿದ್ದ ಮಹಿಳೆಯೇ ಮನೆಯಲ್ಲಿದ್ದ ಲಕ್ಷಾಂತರ ರುಪಾಯಿ ಮೌಲ್ಯದ ಚಿನ್ನಾಭರಣ ಕಳವು ಮಾಡಿರುವ ಪ್ರಕರಣವನ್ನು ಮುಂಡರಗಿ ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ ಭೇದಿಸಿದ್ದಾರೆ.ಪ್ರಕರಣ ದಾಖಲಾದ ಕೇವಲ 8 ಗಂಟೆಗಳಲ್ಲಿ ಆರೋಪಿಯನ್ನು ಪತ್ತೆಹಚ್ಚಿ ಬಂಧಿಸಿರುವ ಪೊಲೀಸರು, ಆಕೆಯಿಂದ ₹14.80 ಲಕ್ಷ ಮೌಲ್ಯದ 185 ಗ್ರಾಂ ತೂಕದ ಬಂಗಾರದ ಆಭರಣಗಳನ್ನು ವಶಪಡಿಸಿಕೊಂಡಿದ್ದಾರೆ.ಮುಂಡರಗಿ ಪಟ್ಟಣದ ಅನ್ನದಾನೇಶ್ವರ ನಗರದ ನಿವಾಸಿ ಹಾಗೂ ಶಿಕ್ಷಣ ಇಲಾಖೆಯ ಎಫ್ಡಿಎ ಆಗಿರುವ ವಸಂತ ಮೊರಬ ಅವರ ಮನೆಯಲ್ಲಿ ಚಿನ್ನಾಭರಣ ಕಳವು ನಡೆದಿತ್ತು. ಈ ಕುರಿತು ಆ. 26ರಂದು ಮುಂಡರಗಿ ಪೊಲೀಸ್ ಠಾಣೆಯಲ್ಲಿ ಮನೆಕಳ್ಳತನ ಪ್ರಕರಣ ದಾಖಲಾಗಿತ್ತು. ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ಆರಂಭಿಸಿ, ಆರೋಪಿಯ ಪತ್ತೆಗೆ ಕಾರ್ಯಾಚರಣೆ ಕೈಗೊಂಡಿದ್ದರು.