ಕನ್ನಡಪ್ರಭ ವಾರ್ತೆ ಮಂಡ್ಯ
ನಗರದ ಮಿಮ್ಸ್ ಆಸ್ಪತ್ರೆಯಿಂದ ಮೌನ ಪ್ರತಿಭಟನಾ ಮೆರವಣಿಗೆಯಲ್ಲಿ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿ ಮನವಿ ಸಲ್ಲಿಸಿದರು. ಕಾಲೇಜು ಪ್ರಕರಣದ ವಿಷಯವಾಗಿ ಆಡಳಿತ ಮಂಡಳಿ ಧೋರಣೆ, ಪೊಲೀಸರ ತನಿಖಾ ಕ್ರಮವನ್ನು ಖಂಡಿಸಿದರು.
ಭಾರತೀಯ ವೈದ್ಯಕೀಯ ಸಂಘದ ಅಧ್ಯಕ್ಷ ಡಾ.ಟಿ.ಎನ್.ಮರೀಗೌಡ ಮಾತನಾಡಿ, ಈ ಘಟನೆ ದೇಶದ ವೈದ್ಯಕೀಯ ಸಮೂಹವನ್ನೇ ಆಘಾತಕ್ಕೀಡು ಮಾಡಿದೆ. ಘಟನೆ ನಡೆದ ದಿನದಿಂದಲೇ ಕಾಲೇಜಿನ ವೈದ್ಯ ವಿದ್ಯಾರ್ಥಿಗಳು ಮುಷ್ಕರ ನಡೆಸುತ್ತಿದ್ದಾರೆ. ವೈದ್ಯೆ ಮೇಲೆ ನಡೆದಿರುವ ಅತ್ಯಾಚಾರ ಪ್ರಕರಣ, ಕೊಲೆ ಸಂಬಂಧ ಮೊದಲನೆಯ ದಿನವೇ ಕಾಲೇಜಿನ ಆಡಳಿತ ಮಂಡಳಿ ಹಾಗೂ ಪೊಲೀಸರು ಪ್ರಕರಣವನ್ನು ನಿಕೃಷ್ಟವಾಗಿ ತನಿಖೆ ನಡೆಸಿ, ಆ ಬಳಿಕ ತನಿಖೆಯನ್ನೇ ಸ್ಥಗಿತಗೊಳಿಸಿದ್ದಾರೆ ಎಂದು ಆರೋಪಿಸಿದರು.ಕೊಲ್ಕತ್ತ ಹೈಕೋರ್ಟ್ ಪೊಲೀಸರು ಪ್ರಕರಣದ ಬಗ್ಗೆ ನಡೆಸಿದ ತನಿಖೆಯ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿ ಸಿಬಿಐಗೆ ಪ್ರಕರಣವನ್ನು ವರ್ಗಾಯಿಸಿದೆ. ಆ ರಾಜ್ಯದ ಪೊಲೀಸ್ ಅಧಿಕಾರಿಗಳು ಸಾಕ್ಷ್ಯನಾಶಗೊಳಿಸಿರುವ ಸಾಧ್ಯತೆಗಳಿವೆ. ಆ.೧೫ರಂದು ದೊಡ್ಡ ಗುಂಪಿನಲ್ಲಿ ಜನರು ಆಸ್ಪತ್ರೆಯ ಆವರಣವನ್ನು ಪ್ರವೇಶಿಸಿ ದಾಂಧಲೆ ಎಬ್ಬಿಸಿದ್ದು ಮಾತ್ರವಲ್ಲದೆ, ಅಪರಾಧಿ ಓಡಾಡಿದ ಸ್ಥಳಗಳಲ್ಲಿ ಸಾಕ್ಷ್ಯಗಳನ್ನು ನಾಶಪಡಿಸಿರುವಂತೆ ತೋರುತ್ತಿದೆ. ಪ್ರತಿಭಟನೆ ನಡೆಸಿದ ಕಿರಿಯ ವೈದ್ಯಾಧಿಕಾರಿಗಳ ಮೇಲೂ ದಾಂಧಲೆ ನಡೆಸಿದವರು ದಾಳಿ ಮಾಡಿರುವುದನ್ನು ತೀವ್ರವಾಗಿ ಖಂಡಿಸಿದರು.
ವೈದ್ಯೆ ಮೇಲಿನ ಅತ್ಯಾಚಾರ, ಕೊಲೆ ಪ್ರಕರಣವನ್ನು ಸಿಬಿಐ ನಿಷ್ಪಕ್ಷಪಾತ ತನಿಖೆ ನಡೆಸಿ ಆರೋಪಿಗಳನ್ನು ಕಾನೂನು ಶಿಕ್ಷೆಗೆ ಗುರಿಪಡಿಸುವಂತೆ ಒತ್ತಾಯಿಸಿದರು. ಪ್ರತಿಭಟನೆಯಲ್ಲಿ ಡಾ.ಪಿ.ಎಂ.ಜಗದೀಶ್ಕುಮಾರ್, ಡಾ.ಗೋಪಾಲಕೃಷ್ಣ ಗುಪ್ತ, ಡಾ.ಎಂ.ವಿನಯ್, ಡಾ.ವಸುಮತಿ ಎಸ್.ರಾವ್, ಡಾ.ಎಂ.ಮಂಜುನಾಥ್, ಡಾ.ವಿ.ಎಲ್.ನಂದೀಶ್, ಡಾ.ಬಿ.ಡಿ..ಕೃಷ್ಣಪ್ಪ, ಡಾ.ಬಿ.ಕೆ.ಸುರೇಶ್, ಡಾ.ಕೆ.ಮೋಹನ್ಕುಮಾರ್, ಡಾ.ಬಿ..ಜೆ.ಕೀರ್ತಿ, ಡಾ.ಆರ್.ಜಾಹ್ನವಿ, ಡಾ.ಜೆ.ಬಿಂದಿಯಾ ಇತರರಿದ್ದರು.