-ಭೋವಿ ಗುರುಪೀಠದಲ್ಲಿ ನಡೆದ ಪೂರ್ವ ಸಿದ್ದತಾ ಸಭೆಯಲ್ಲಿ ತೀರ್ಮಾನ । ರಾಷ್ಟ್ರೀಯ ಕಾರ್ಯಕ್ರಮವಾಗಿ ಆಚರಣೆಗೆ ಒಲವು
ಭೋವಿ ಗುರುಪೀಠದ ಜಗದ್ಗುರು ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿಯವರು ಗುರುಪೀಠಕ್ಕೆ ಧೀಕ್ಷೆ ಪಡೆದು 25 ವರ್ಷ ಸಂದ ಹಿನ್ನಲೆ ಜುಲೈ 20ರಂದು ಧೀಕ್ಷಾ ರಜತ ಮಹೋತ್ಸವ ಆಚರಿಸಲು ತೀರ್ಮಾನಿಸಲಾಗಿದೆ. ಬೋವಿ ಗುರುಪೀಠದಲ್ಲಿ ನಡೆದ ಸಭೆಯಲ್ಲಿ ಕಾರ್ಯಕ್ರಮಕ್ಕೆ ರಾಷ್ಟೀಯ ಸ್ವರೂಪ ನೀಡಬೇಕು, ಸಮಾಜ ಸಂಘಟನೆಗೆ ಸಮಾವೇಶವನ್ನು ಸಮರ್ಥವಾಗಿ ಬಳಸಿಕೊಳ್ಳುವ ನಿರ್ಣಯಕ್ಕೆ ಬರಲಾಯಿತು.
ಪೂರ್ವ ಭಾವಿ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಭೋವಿ ಅಭಿವೃದ್ದಿ ನಿಗಮದ ಅಧ್ಯಕ್ಷ ಎಸ್.ರವಿಕುಮಾರ್, ಪಕ್ಷಾತೀತವಾಗಿ ಸಮಾಜ ಸಂಘಟಿಸುವ ತುರ್ತು ಅನಿವಾರ್ಯವಿದೆ. ದೀಕ್ಷಾ ರಜತ್ ಮಹೋತ್ಸವವನ್ನು 25 ಬಗೆಯ ಕಿರು ಕಾರ್ಯಕ್ರಮಗಳನ್ನು ಸಂಘಟಿಸಿ ಅರ್ಥಪೂರ್ಣಗೊಳಿಸೋಣ. ಶ್ರೀಗಳು ತಾಲೂಕು, ಜಿಲ್ಲಾ, ರಾಜ್ಯ, ರಾಷ್ಟ್ರಮಟ್ಟದಲ್ಲಿ ಸಮಾಜ ಸಂಘಟನೆಯಾಗಲು ಕಾರಣೀಭೂತರಾಗಿ ದ್ದಾರೆ. ವಿದ್ಯಾವಂತರು ಸಂಘಟನೆಗೆ ಸಮಯ ನೀಡಬೇಕು ಹಾಗೂ ಸಂಘಟನೆಯ ಭಾಗವಾಗಿ ನಿಲ್ಲಬೇಕು ಎಂದರು.ಅಧಿಕಾರಿಗಳು ವೃತ್ತಿಗಂಟಿಕೊಳ್ಳದೆ, ಸ್ವಾರ್ಥಿಗಳಾಗದೇ, ಭೋವಿ ಸಮಾಜದ ಅಭಿವೃದ್ಧಿಗಾಗಿ ನಿಸ್ವಾರ್ಥಿಗಳಾಗಬೇಕು. ಆದಾಯದಲ್ಲಿ ಸ್ವಲ್ಪ ಕುಟುಂಬಕ್ಕೆ, ಸ್ವಲ್ಪ ಸಮಾಜಕ್ಕೆ ಎನ್ನುವ ಭಾವ ಬರಬೇಕು. ರಾಜಕೀಯ ಶಕ್ತಿ ಹೆಚ್ಚಿಸಿಕೊಳ್ಳಬೇಕು. ಇದಕ್ಕೆ ಸಮಾಜದ ಶ್ರೀಗಳು ದಿಕ್ಸೂಚಿಯಾಗಿ ಸಾಗುತ್ತಿದ್ದಾರೆ. ಕಟ್ಟ ಕಡೆಯ ಭೋವಿ ವ್ಯಕ್ತಿಯನ್ನು ಮುಖ್ಯ ವಾಹಿನಿಗೆ ತರುವ ಉದ್ದೇಶವನ್ನುಭೋವಿ ಅಭಿವೃದ್ದಿ ನಿಗಮ ಹೊಂದಿದೆ ಎಂದು ತಿಳಿಸಿದರು.
ಭೋವಿ ಅಭಿವೃದ್ಧಿ ನಿಗಮ ಸುಲಿಗೆ ಕೇಂದ್ರವಲ್ಲ, ಸುಧಾರಣಾ ಕೇಂದ್ರವಾಗಿ ಪರಿವರ್ತಿಸುವೆ. ಸೌಲಭ್ಯ ಪಡೆಯದವರಿಗೆ ಸೌಲಭ್ಯ ಕಲ್ಪಿಸಲಾಗುವುದು, ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದಾಗ ಅಧ್ಯಕ್ಷರನ್ನು ನೇಮಕ ಮಾಡಲಿಲ್ಲ, ಅಧಿಕಾರಿಗಳ ದರ್ಪದಿಂದ ನಿಗಮದಲ್ಲಿ ಅವ್ಯವಸ್ಥೆಯಾಗಿದೆ. ಎಸ್.ಐಟಿ ತನಿಖೆಯಿಂದ ಸತ್ಯ ತಿಳಿಯುತ್ತದೆ ಎಂದರು.
ಸೂರಗೊಂಡನಹಳ್ಳಿ ಕೃಷ್ಣಮೂರ್ತಿ ಮಾತನಾಡಿ, ಸಂಕಷ್ಟದಲ್ಲಿರುವವರನ್ನು ಸಂತೈಸುವ ಸಂತರು ಜಗದ್ಗುರು ಶ್ರೀ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ. ಹೋರಾಟದ ಪಥದಲ್ಲಿರುವ ಗುರುಗಳಿಗೆ ರಕ್ಷ ಕವಚವಾಗಿ ಸಂಘ ಸಂಸ್ಥೆಯ ಮುಖಂಡರು ನಿಲ್ಲಬೇಕು. ಸಕುಟುಂಬ ಸಮೇತರಾಗಿ ದೀಕ್ಷಾ ಮಹೋತ್ಸವದಲ್ಲಿ ಭಾಗವಹಿಸಲು ಪ್ರೇರಣಾ ನೀಡುವ ಜಾಗೃತಿ ಯಾತ್ರೆ ಮಾಡೋಣ ಎಂದು ತಿಳಿಸಿದರು.
ಹೊಸದುರ್ಗ ಚಂದ್ರಪ್ಪ, ಹೊಳಲ್ಕೆರೆ ಮಾಸ್ಟರ್ ರಂಗಪ್ಪ, ಎಸ್.ಜೆಎಸ್ ವಿದ್ಯಾಸಂಸ್ಥೆಯ ನಿರ್ದೇಶಕ ವಿ.ಹನುಮಂತಪ್ಪ ಗೋಡೆಮನೆ, ಇ.ಮಂಜುನಾಥ, ಹೆಚ್.ಆಂಜನೇಯ, ಹೊಸದುರ್ಗದ ಸುಬ್ಬಯ್ಯ, ರಾಮಚಂದ್ರಪ್ಪ, ಮಂಜಪ್ಪ, ಎನ್.ಪಿ.ಭರತ್, ಚಂದ್ರಶೇಖರ್, ಉಮೇಶ್, ಭೂತಭೋವಿ, ಭೋವಿ ಗುರುಪೀಠದ ಸಿಇಓ ಗೌನಹಳ್ಳಿ ಗೋವಿಂದಪ್ಪ ಇದ್ದರು.
ಫೋಟೋ: 7 ಸಿಟಿಡಿ6
--------