ನೀರಿನ ಯೋಜನೆಗೆ ತಕ್ಷಣ ವಿದ್ಯುತ್ ಸಂಪರ್ಕ: ಸ್ಪೀಕರ್‌ ಖಾದರ್‌ ಸೂಚನೆ

KannadaprabhaNewsNetwork |  
Published : May 08, 2026, 02:45 AM IST
ಯು.ಟಿ.ಖಾದರ್‌ ಅಧಿಕಾರಿಗಳ ಸಭೆ ನಡೆಸಿದರು | Kannada Prabha

ಸಾರಾಂಶ

ಕುಡಿಯುವ ನೀರಿನ ಯೋಜನೆಗಳಿಗೆ ವಿಳಂಬವಿಲ್ಲದೇ ವಿದ್ಯುತ್ ಸಂಪರ್ಕ ನೀಡಲು ವಿಧಾನಸಭಾ ಸ್ಪೀಕರ್ ಯು.ಟಿ.ಖಾದರ್ ಸೂಚಿಸಿದ್ದಾರೆ.

ಮಂಗಳೂರು: ಕುಡಿಯುವ ನೀರಿನ ಯೋಜನೆಗಳಿಗೆ ವಿಳಂಬವಿಲ್ಲದೇ ವಿದ್ಯುತ್ ಸಂಪರ್ಕ ನೀಡಲು ವಿಧಾನಸಭಾ ಸ್ಪೀಕರ್ ಯು.ಟಿ.ಖಾದರ್ ಸೂಚಿಸಿದ್ದಾರೆ.

ಅವರು ಗುರುವಾರ ಪ್ರಜಾ ಸೌಧದಲ್ಲಿ ಉಳ್ಳಾಲ ತಾಲೂಕು ಬರ ನಿರ್ವಹಣೆ ಮತ್ತು ಪ್ರಾಕೃತಿಕ ವಿಕೋಪ ಮುಂಜಾಗ್ರತಾ ಕ್ರಮಗಳ ಬಗ್ಗೆ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಹಲವೆಡೆ ಟ್ಯಾಂಕ್ ನಿರ್ಮಿಸಿ ಬೋರ್‌ವೆಲ್ ಕೊರೆಯಲಾಗಿದ್ದರೂ ವಿದ್ಯುತ್ ಸಂಪರ್ಕ ವಿಳಂಬವಾಗಿ ನೀರು ಪೂರೈಕೆಗೆ ತೊಂದರೆಯಾಗುತ್ತಿವೆ. ಡೆಪಾಸಿಟ್ ಮೊತ್ತಕ್ಕೆ ಕಾಯದೆ, ವಿದ್ಯುತ್ ಸಂಪರ್ಕ ನೀಡಲು ಈಗಾಗಲೇ ಸರಕಾರ ಸೂಚಿಸಿದೆ. ಮುಂದೆ ಗ್ರಾಮ ಪಂಚಾಯತ್‌ಗೆ ಅನುದಾನ ಬಂದಾಗ ಈ ಮೊತ್ತವನ್ನು ಹೊಂದಾಣಿಕೆ ಮಾಡುವಂತೆ ಅವರು ತಿಳಿಸಿದರು.ಕುಡಿಯುವ ನೀರಿನ ಯೋಜನೆ ರೂಪಿಸುವಾಗ ಸ್ಥಳೀಯ ಸಮಸ್ಯೆಗಳನ್ನು ಅರಿತು ಅದಕ್ಕೆ ತಕ್ಕಂತೆ ಅನುಷ್ಠಾನಗೊಳಿಸಬೇಕು. ಮುಂದಿನ 30 ವರ್ಷದ ನೀರಿನ ಬೇಡಿಕೆ ಪೂರೈಸಲು ಯೋಜನೆ ಸಹಕಾರಿಯಾಗಬೇಕು. ಅಗತ್ಯ ಬಿದ್ದರೆ ವಿಶೇಷ ಅನುದಾನಕ್ಕೆ ಪ್ರಯತ್ನಿಸಲಾಗುವುದು ಎಂದು ಖಾದರ್ ತಿಳಿಸಿದರು.

ಕುಡಿಯುವ ನೀರು ನಿರ್ವಹಣೆಗೆ ಅವಶ್ಯಕತೆಯಂತೆ ಅನುದಾನ ನೀಡಲಾಗುತ್ತಿದೆ. ಪೈಪ್ ಮೂಲಕ ನೀರು ಪೂರೈಕೆ ಸಾಧ್ಯವಾಗದಿದ್ದರೆ ಟ್ಯಾಂಕರ್ ಮೂಲಕ ನೀರು ಪೂರೈಸಬೇಕು. ಗ್ರಾಮ ಪಂಚಾಯತ್ ಅನುದಾನದೊಂದಿಗೆ ಟಾಸ್ಕ್ ಫೋರ್ಸ್ ನಿಂದಲೂ ಅನುದಾನ ನೀಡಲಾಗುವುದು ಎಂದು ಸ್ಪೀಕರ್ ಹೇಳಿದರು.

ಮುಂಬರುವ ಮಳೆಗಾಲದಲ್ಲಿ ನೀರಿನ ಸರಾಗ ಹರಿವಿಗೆ ತೊಂದರೆಯಾಗುವ ಪ್ರದೇಶಗಳನ್ನು ಮೊದಲೇ ಗುರುತಿಸಬೇಕು. ಎಲ್ಲಾ ಚರಂಡಿಗಳ ಹೂಳೆತ್ತಲು ಕ್ರಮ ವಹಿಸಬೇಕು. ಕಳೆದ ವರ್ಷ ಪ್ರಾಕೃತಿಕ ದುರಂತಗಳು ನಡೆದ ಪ್ರದೇಶಗಳಲ್ಲಿ ಮುನ್ನೆಚ್ಚರಿಕೆ ವಹಿಸಬೇಕು. ದುರಂತಗಳು ನಡೆದರೆ ಸ್ಥಳೀಯ ಅಧಿಕಾರಿಗಳು ತಕ್ಷಣವೇ ಭೇಟಿ ನೀಡಬೇಕು ಎಂದು ಸ್ಪೀಕರ್ ಸೂಚಿಸಿದರು.ದ.ಕ. ಜಿಲ್ಲಾ ಪಂಚಾಯತ್ ಸಿಇಒ ವಿನಾಯಕ್ ಕಾರ್ಭರಿ ಮಾತನಾಡಿ, ಜಿಲ್ಲೆಯಲ್ಲಿ ಬರ ನಿರ್ವಹಣೆ ಮತ್ತು ಕುಡಿಯುವ ನೀರಿನ ಪೂರೈಕೆಗೆ ಒಂದು ಕೋಟಿ ರು. ಹೆಚ್ಚುವರಿ ಅನುದಾನ ಬಿಡುಗಡೆ ಮಾಡಿದೆ. ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ ಸುಮಾರು 12 ಲಕ್ಷ ರು. ಅನುದಾನ ಇದೆ ಎಂದರು. ಮೂಡಾ ಅಧ್ಯಕ್ಷ ಸದಾಶಿವ, ಉಪವಿಭಾಗಾಧಿಕಾರಿ ಮೀನಾಕ್ಷಿ ಆರ್ಯ ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಗುಳೇದಗುಡ್ಡ ಪುರಸಭೆ : ₹7.22 ಲಕ್ಷ ಉಳಿತಾಯ ಬಜೆಟ್ ಅಂಗೀಕಾರ
ನಾಗೂರು ಕೆರೆ ನಿರ್ಮಾಣವಾಗುತ್ತಾ? ಜವಳಿ ಪಾರ್ಕ್‌ ಬರುತ್ತಾ?