ಕನ್ನಡಪ್ರಭ ವಾರ್ತೆ, ಹನೂರು
ಎಸ್ಪಿ ಕವಿತಾ ಮಾತನಾಡಿ, ಶಾಂತಿ ಮತ್ತು ಸೌಹಾರ್ದತೆಯಿಂದ ಗಣಪತಿ ವಿಸರ್ಜನೆ ನಡೆಸಬೇಕು ಎಂಬ ಉದ್ದೇಶದಿಂದ ಎಲ್ಲಾ ಸಿದ್ಧತೆ ಮಾಡಿಕೊಳ್ಳಲಾಗಿದೆ. ನಿಗದಿಗಿಂತ ಹೆಚ್ಚಿನ ಶಬ್ದ ಉಂಟು ಮಾಡುವ ಧ್ವನಿ ವರ್ಧಕ ಬಳಕೆಯಿಂದ ಶಬ್ದ ಮಾಲಿನ್ಯ ಉಂಟಾಗುವ ಜೊತೆಗೆ ವೃದ್ಧರು, ಪುಟ್ಟಮಕ್ಕಳ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ. ಮೆರವಣಿಗೆಯಲ್ಲಿ ಪಾಲ್ಗೊಂಡಿರುವ ಯುವಕರ ಮೇಲು ಸಹ ತೊಂದರೆಯನ್ನುಂಟು ಮಾಡುತ್ತದೆ. ಸಾಮಾನ್ಯ ಧ್ವನಿವರ್ಧಕ ಹಾಗೂ ಸಾಂಪ್ರದಾಯಕ ವಾದ್ಯ ಬಳಸಬೇಕು ಎಂದು ತಿಳಿಸಿದರು.
ಗಣಪತಿ ವಿಸರ್ಜನೆ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಬಂದೋಬಸ್ತ್ ಗಾಗಿ ಲಭ್ಯವಿರುವ ಪೊಲೀಸರ ಜೊತೆಗೆ ಗೃಹ ರಕ್ಷಕ ದಳ, ಕೆಎಸ್ಆರ್ಪಿ ತುಕಡಿಯನ್ನು ಹೆಚ್ಚುವರಿಯಾಗಿ ಪಡೆದುಕೊಳ್ಳಲಾಗಿದೆ. ಚಾಮರಾಜನಗರ ಜಿಲ್ಲೆಯಲ್ಲಿ ಕಳೆದ ಬಾರಿ 1124 ಗಣಪತಿಗಳನ್ನು ಪ್ರತಿಷ್ಠಾಪನೆ ಮಾಡಲಾಗಿತ್ತು. ಈ ಬಾರಿ 1,196 ಗಣಪತಿಗಳನ್ನು ಜಿಲ್ಲೆಯಲ್ಲಿ ಪ್ರತಿಷ್ಠಾಪನೆ ಮಾಡಲಾಗಿದೆ.ರಸ್ತೆ ಸಂಚಾರ ನಿಯಮ ಪಾಲಿಸಿ: ಮಲೆ ಮಾದೇಶ್ವರ ಬೆಟ್ಟ ಸೇರಿದಂತೆ ವಿವಿಧ ರಸ್ತೆಗಳು ಉತ್ತಮವಾಗಿದ್ದು ವಾಹನ ಸವಾರರು ರಸ್ತೆ ಸಂಚಾರ ನಿಯಮವನ್ನು ಪಾಲಿಸುವುದರ ಮೂಲಕ ಅಪಘಾತಗಳನ್ನು ತಡೆಯಲು ಸಂಚಾರಿ ನಿಯಮಗಳನ್ನು ಪಾಲಿಸಬೇಕಾಗಿದೆ. ಈಗಾಗಿ ಅತಿ ವೇಗವಾಗಿ ಓಡಾಡುವ ವಾಹನ ಸವಾರರು ಸೀಟ್ ಬೆಲ್ಟ್ ಕಡ್ಡಾಯವಾಗಿ ಧರಿಸಬೇಕು. ದ್ವಿಚಕ್ರ ವಾಹನ ಸವಾರರು ಹೆಲ್ಮೆಟ್ ಧರಿಸಬೇಕು ಎಂದು ಎಸ್ಪಿ ತಿಳಿಸಿದರು.
200 ಕ್ಕೂ ಹೆಚ್ಚು ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.