ಕನ್ನಡಪ್ರಭ ವಾರ್ತೆ ಸೋಮವಾರಪೇಟೆ
ಶಿಕ್ಷಕರ ಕಲ್ಯಾಣನಿಧಿ ಮತ್ತು ವಿದ್ಯಾರ್ಥಿಗಳ ಕ್ಷೇಮಾಭಿವೃದ್ದಿ ನಿಧಿ ಹಾಗೂ ಶಿಕ್ಷಕರ ದಿನಾಚರಣೆ ಸಮಿತಿ ವತಿಯಿಂದ ಪಟ್ಟಣದ ಒಕ್ಕಲಿಗರ ಸಮುದಾಯ ಭವನದಲ್ಲಿ ಸೋಮವಾರ ಆಯೋಜಿಸಲಾಗಿದ್ದ ಶಿಕ್ಷಕರ ದಿನಾಚರಣೆ ಮತ್ತು ನಿವೃತ್ತ ಶಿಕ್ಷಕರಿಗೆ ಸನ್ಮಾನ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ ನೀಡಲು ಆಧುನಿಕ ತಂತ್ರಜ್ಞಾನ ಬೇಕು. ಇದಕ್ಕೆ ಪೂರಕವಾಗಿ ಮುಂದಿನ ದಿನಗಳಲ್ಲಿ ಸರ್ಕಾರಿ ಶಾಲಾ ಮಕ್ಕಳಿಗೆ ಟ್ಯಾಬ್ ನೀಡುವ ಮೂಲಕ ಇನ್ನಷ್ಟು ಪರಿಣಾಮಕಾರಿ ಭೋದನೆ ದೊರಕಲಿ ಎಂಬ ಚಿಂತನೆ ನಡೆಸಲಾಗಿದೆ. ಶಿಕ್ಷಕರು ವಿದ್ಯಾರ್ಥಿಗಳಲ್ಲಿ ಪ್ರೀತಿ ವಿಶ್ವಾಸ ಹಾಗೂ ಅವರಲ್ಲಿ ಸಂತಸದ ಕಲಿಕೆಗೆ ಪ್ರೇರೇಪಿಸಲು ವಿಶೇಷ ಗಮನ ಹರಿಸಬೇಕು. ಮೌಲ್ಯ ಮತ್ತು ಶಿಕ್ಷಣವು ಒಂದು ನಾಣ್ಯದ ಎರಡು ಮುಖಗಳು. ಇಂತಹ ಶಿಕ್ಷಣದ ಅವಶ್ಯಕತೆ ಇಂದಿನ ಮಕ್ಕಳಿಗೆ ಅಗತ್ಯವಿದೆ ಎಂದರು.ಮುಖ್ಯ ಭಾಷಣಕಾರರಾಗಿ ಪಾಲ್ಗೊಂಡಿದ್ದ ಹಳೆಬೀಡು ಎಸ್ ಜಿ ಆರ್ ಪದವಿ ಪೂರ್ವ ಕಾಲೇಜಿನ ಅರ್ಥಶಾಸ್ತ್ರ ಉಪನ್ಯಾಸಕ ಜಿ.ಎನ್. ಸಿದ್ದೇಶ್ ಮಾತನಾಡಿ, ಇಂದು ಸ್ವಾಸ್ಥ್ಯ ಸಮಾಜ ನಿರ್ಮಾಣವಾಗಬೇಕಾದರೆ ಉತ್ತಮ ಮೌಲ್ಯಗಳಿಂದ ಮಾತ್ರ ಸಾಧ್ಯ. ಶಿಕ್ಷಕರು ಮೌಲ್ಯಯುತ ಶಿಕ್ಷಣ ನೀಡಿದರೆ ಮಾತ್ರ ಮಕ್ಕಳು ಸಮಾಜದಲ್ಲಿ ಉತ್ತಮ ನಾಗರಿಕರಾಗಿ ರೂಪುಗೊಳ್ಳಲು ಸಾಧ್ಯ. ಶಿಕ್ಷಕನಾದವನಿಗೆ ಸಂವೇದನಾಶೀಲತೆ, ಸಮಯಪಾಲನೆ, ವಸ್ತ್ರ ಸಂಹಿತೆ ಅಗತ್ಯ. ಇದರೊಂದಿಗೆ ಸಹನೆ ಮತ್ತು ತಾಳ್ಮೆಯೂ ಮುಖ್ಯ. ನಕಾರಾತ್ಮಕ ಚಿಂತನೆಗಳನ್ನು ದೂರವಿರಿಸಿ ಸಕಾರಾತ್ಮಕವಾಗಿ ಮಕ್ಕಳ ಬೆಳವಣಿಗೆಯತ್ತ ಗಮನಹರಿಸಬೇಕೆಂದು ಕಿವಿಮಾತು ಹೇಳಿದರು.
ಪ್ರೌಢಶಾಲಾ ಮತ್ತು ಪ್ರಾಥಮಿಕ ಶಾಲೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತರಾದ ಶಿಕ್ಷಕರನ್ನು ಸನ್ಮಾನಿಸಲಾಯಿತು.