ಧಾರವಾಡ:
ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಎಸ್ಸಿ-ಎಸ್ಟಿ ಹಾಗೂ ಹಿಂದುಳಿದ ವರ್ಗಗಳ ಜನರಿಗೆ ಸಂವಿಧಾನ ಬದ್ಧವಾಗಿ ಬರಬೇಕಾದ ಮೀಸಲಾತಿಯನ್ನು ಕೇಂದ್ರ ಹಾಗೂ ರಾಜ್ಯ ಸರ್ಕಾರ ಕಸಿದುಕೊಳ್ಳುತ್ತಿವೆ. ಬರೀ ಚುನಾವಣೆ ಸಮಯದಲ್ಲಿ ಮೀಸಲಾತಿ ಕೊಡುತ್ತೇವೆಂದು ಹೇಳಿಕೆ ನೀಡಿ, ಜಾರಿಗೆ ತರದೇ ಜನರಿಗೆ ಮೋಸ ಮಾಡುತ್ತಿವೆ. 2022ರಲ್ಲಿ ಬಸವರಾಜ ಬೊಮ್ಮಾಯಿ ಸರ್ಕಾರ ಮೀಸಲಾತಿ ಹೆಚ್ಚಿಸಿ ಕಾನೂನು ಮಾಡಿತ್ತು. ಆದರೆ, ಅದನ್ನು ಜಾರಿಗೆ ತರುವ ನಿಟ್ಟಿನಲ್ಲಿ ಕೇಂದ್ರವಾಗಲಿ ಅಥವಾ ರಾಜ್ಯ ಸರ್ಕಾರವಾಗಲಿ ಮುತುವರ್ಜಿ ವಹಿಸುತ್ತಿಲ್ಲ ಎಂದು ಕಿಡಿಕಾರಿದರು.
ಸಾಮಾಜಿಕ ನ್ಯಾಯಕ್ಕೆ ಗ್ರಹಣ:ನಮ್ಮ ಸಮಾಜದಲ್ಲಿ ಸಾಮಾಜಿಕ ನ್ಯಾಯಕ್ಕೆ ಗ್ರಹಣ ಹಿಡಿದಿದೆ. ಇದಕ್ಕೆ ನೇರ ಕಾರಣ ಪ್ರಧಾನಿ ನರೇಂದ್ರ ಮೋದಿ ಎಂದು ಆರೋಪಿಸಿದ ಅವರು, ಮೀಸಲಾತಿ ವಿಚಾರವಾಗಿ ಮುಖ್ಯಮಂತ್ರಿಗಳು ಬರೀ ಕೇಂದ್ರಕ್ಕೆ ಪತ್ರ ಬರೆದರೆ ಸಾಲದು. ಸರ್ವ ಪಕ್ಷಗಳ ಸಭೆ ಕರೆದು ಚರ್ಚಿಸಿ ದೆಹಲಿಗೆ ಹೋಗಿ ಕುಳಿತು ಕಾನೂನನ್ನು ಪರಿಚ್ಛೇದ 9ಕ್ಕೆ ಸೇರ್ಪಡೆ ಮಾಡಬೇಕು. ಮುಖ್ಯಮಂತ್ರಿ ಹಾಗೂ ಉಪ ಮುಖ್ಯಮಂತ್ರಿಗಳು ಈ ಇಚ್ಛಾಶಕ್ತಿ ಏತಕ್ಕೆ ತೋರುತ್ತಿಲ್ಲ ತಿಳಿಯುತ್ತಿಲ್ಲ. ಇದೇ ರೀತಿ ಕಾಲಹರಣ ಮಾಡಿದರೆ ಎಸ್ಸಿ-ಎಸ್ಟಿ ಹಾಗೂ ಹಿಂದುಳಿದ ಜನಾಂಗ ಕಟ್ಟಿಕೊಂಡು ಬೀದಿಗೆ ಇಳಿದು ಹೋರಾಟ ಮಾಡಬೇಕಾಗುತ್ತದೆ ಎಂದು ಉಗ್ರಪ್ಪ ಎಚ್ಚರಿಸಿದರು.
ಮುಖ್ಯಮಂತ್ರಿ ಬದಲಾವಣೆ ವಿಚಾರವಾಗಿ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಉಗ್ರಪ್ಪ, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಭಿನ್ನಾಭಿಪ್ರಾಯ ಸಾಮಾನ್ಯ. ಮುಖ್ಯಮಂತ್ರಿ ಸ್ಥಾನಬೇಕು ಎನ್ನುವ ಅಪೇಕ್ಷೆ ತಪ್ಪೇನಿಲ್ಲ. ಬಿಜೆಪಿಯ ಈ ಹಿಂದಿನ ಅವಧಿಯಲ್ಲಿ ಮೂವರು ಮುಖ್ಯಮಂತ್ರಿಗಳಾಗಿರುವ ಉದಾಹರಣೆ ಇದೆ. ಅದೇನೆ ಇದ್ದರೂ ಪಕ್ಷದ ಹೈಕಮಾಂಡ್ ಈ ಗೊಂದಲಕ್ಕೆ ತೆರೆ ಎಳೆಯುವ ಕೆಲಸ ಮಾತ್ರ ಮಾಡಬೇಕಿದೆ ಎಂದರು.
ಮೀಸಲಾತಿಗೆ ಮಾಟ-ಮಂತ್ರ...
22ಡಿಡಬ್ಲೂಡಿ1