ಹುಬ್ಬಳ್ಳಿ:
ರಾಜ್ಯ ಸರ್ಕಾರ ಮೇ 22ರಂದು ಅಂತಿಮ ಕನಿಷ್ಠ ವೇತನ ಅಧಿಸೂಚನೆ ಹೊರಡಿಸಿರುವುದು ಸ್ವಾಗತಾರ್ಹ. ಇದು ಬೆಲೆ ಏರಿಕೆ ಸೇರಿದಂತೆ ಆರ್ಥಿಕ ಸಂಕಷ್ಟಕ್ಕೀಡಾಗಿದ್ದ ಲಕ್ಷಾಂತರ ಕಾರ್ವಿುಕರಿಗೆ ಸಹಾಯಕವಾಗಲಿದೆ. ಪರಿಷ್ಕೃತ ಕನಿಷ್ಠ ವೇತನ ಜಾರಿಗೆ ಯಾವುದೇ ಕಾಲಮಿತಿ ನಿಗದಿ ಮಾಡಿಲ್ಲ. ಇಂದಿನ ಬೆಲೆ ಏರಿಕೆ ಮತ್ತು ಹೆಚ್ಚುತ್ತಿರುವ ಜೀವನ ವೆಚ್ಚ ನಿರ್ವಹಣೆಗೆ ₹36,000 ಕನಿಷ್ಠ ವೇತನ ನಿಗದಿಪಡಿಸುವಂತೆ ಒತ್ತಾಯಿಸಿದರು.
ಪರಿಷ್ಕೃತ ಕನಿಷ್ಠ ವೇತನ ಅಧಿಸೂಚನೆಯಿಂದ ಹೊರಗಿಟ್ಟಿರುವ ಗಾರ್ವೆಂಟ್ಸ್, ಪ್ಲಾಂಟೇಷನ್, ಬೀಡಿ, ಕೈಮಗ್ಗ ಮುಂತಾದ 19 ಉದ್ದಿಮೆಗಳಲ್ಲಿಯ ಕಾರ್ವಿುಕರಿಗೆ ಅನ್ಯಾಯವಾಗಲಿದ್ದು. ಇವರಿಗೂ ಜಾರಿ ಮಾಡಬೇಕು. ಕಾರ್ವಿುಕ ಸಂಹಿತೆಗಳಿಗೆ ಕಾರ್ವಿುಕರ ಪರ ತಿದ್ದುಪಡಿ ತಂದು ನಿಯಮ ರೂಪಿಸಬೇಕು. ಅಂಗನವಾಡಿ, ಬಿಸಿಯೂಟ, ಆಶಾ ಮುಂತಾದ ಸ್ಕೀಮ್ ನೌಕರರು ಹಾಗೂ ಸ್ವಚ್ಛವಾಹಿನಿ ನೌಕರರನ್ನು ಕನಿಷ್ಠ ವೇತನ ವ್ಯಾಪ್ತಿಗೆ ತರಬೇಕು. ಕಾಯಂಯೇತರ ಕಾರ್ಮಿಕರ ಕಾಯಂಗೆ ಕಾನೂನು ರೂಪಿಸಬೇಕೆಂದು ಮನವಿಯಲ್ಲಿ ಒತ್ತಾಯಿಸಿದೆ. ಬಳಿಕ ಪ್ರತಿಭಟನಾಕಾರರು ತಹಸೀಲ್ದಾರ್ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು.ಈ ವೇಳೆ ಸಿಐಟಿಯು ರಾಜ್ಯ ಕಾರ್ಯದರ್ಶಿ ಮಹೇಶ ಪತ್ತಾರ, ಜಿಲ್ಲಾಧ್ಯಕ್ಷ ಬಿ.ಐ. ಈಳಿಗೇರ, ಮುಖಂಡರಾದ ಬಸವಣ್ಣೆಪ್ಪ ನೀರಲಗಿ, ಗುರುಸಿದ್ದಪ್ಪ ಅಂಬಿಗೇರ, ನಾರಾಯಣ ಆರೇರ, ಮಂಜುನಾಥ ಹುಜರಾತಿ, ಶೋಭಾ ಮೂಲಿಮನಿ, ನೀಲವ್ವ ಕುರುಬರ, ಶಕುಂತಲಾ ಘಾಡಿ, ಮಂಜುನಾಥ ದೊಡಮನಿ, ಮಹೇಶ ಹುಲಗೋಡ, ಗಾಳೆಪ್ಪ ಮುತ್ಯಾಳ ಸೇರಿದಂತೆ ಹಲವರಿದ್ದರು.