ಗುರುಗಳ ತತ್ವಾದರ್ಶ ಜೀವನದಲ್ಲಿ ಅಳವಡಿಸಿಕೊಳ್ಳಿ

KannadaprabhaNewsNetwork |  
Published : Sep 07, 2026, 03:00 AM IST
ಕಂಪ್ಲಿ ಪಟ್ಟಣದ ತಹಸೀಲ್ದಾರ್ ಕಚೇರಿ ಕಚೇರಿಯಲ್ಲಿ ನಡೆದ ಶಿಕ್ಷಕರ ದಿನಾಚರಣೆಯಲ್ಲಿ ತಹಸೀಲ್ದಾರ್ ಜೂಗಲ ಮಂಜುನಾಯಕ ಮಾತನಾಡಿದರು. | Kannada Prabha

ಸಾರಾಂಶ

ಶಿಕ್ಷಕರು ಸಮಾಜಕ್ಕೆ ಜ್ಞಾನ, ಮೌಲ್ಯ ಹಾಗೂ ಉತ್ತಮ ಬದುಕಿನ ಮಾರ್ಗ ತೋರಿಸುವ ಪ್ರಮುಖ ವ್ಯಕ್ತಿಗಳಾಗಿದ್ದಾರೆ

ಕಂಪ್ಲಿ: ಇಲ್ಲಿನ ತಹಸೀಲ್ದಾರ್ ಕಚೇರಿ ಸಭಾಂಗಣದಲ್ಲಿ ಡಾ.ಸರ್ವಪಲ್ಲಿ ರಾಧಾಕೃಷ್ಣನ್ ಜನ್ಮದಿನದ ಅಂಗವಾಗಿ ಶಿಕ್ಷಕರ ದಿನಾಚರಣೆ ಶನಿವಾರ ಆಚರಿಸಲಾಯಿತು.

ತಹಸೀಲ್ದಾರ್ ಜೂಗಲ ಮಂಜುನಾಯಕ ಮಾತನಾಡಿ, ಶಿಕ್ಷಕರು ಸಮಾಜಕ್ಕೆ ಜ್ಞಾನ, ಮೌಲ್ಯ ಹಾಗೂ ಉತ್ತಮ ಬದುಕಿನ ಮಾರ್ಗ ತೋರಿಸುವ ಪ್ರಮುಖ ವ್ಯಕ್ತಿಗಳಾಗಿದ್ದಾರೆ. ಶಿಕ್ಷಕರ ತತ್ವ, ಆದರ್ಶ ಹಾಗೂ ಮೌಲ್ಯ ನಿಜ ಜೀವನದಲ್ಲಿ ಅಳವಡಿಸಿಕೊಳ್ಳುವ ಮೂಲಕ ಅವರಿಗೆ ಗೌರವ ಸಲ್ಲಿಸಬೇಕು ಎಂದರು.

ವಿದ್ಯಾರ್ಥಿಗಳ ವ್ಯಕ್ತಿತ್ವ ನಿರ್ಮಾಣದಲ್ಲಿ ಶಿಕ್ಷಕರ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ಶಿಕ್ಷಣದ ಜತೆಗೆ ಶಿಸ್ತು, ಸಂಸ್ಕಾರ, ಮಾನವೀಯತೆ ಹಾಗೂ ಸಾಮಾಜಿಕ ಹೊಣೆಗಾರಿಕೆಯಂತಹ ಮೌಲ್ಯ ಬೆಳೆಸುವಲ್ಲಿ ಶಿಕ್ಷಕರು ಮಹತ್ವದ ಕೊಡುಗೆ ನೀಡುತ್ತಿದ್ದಾರೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಪ್ರಭಾರ ಉಪತಹಸೀಲ್ದಾರ್ ಎಸ್.ಡಿ.ರಮೇಶ್, ತಾಲೂಕು ಭೂಮಾಪಕ ಅನಿಲ್ ಆ್ಯಂತೋನಿ, ಆಹಾರ ನಿರೀಕ್ಷಕ ಬಿ.ವಿರೂಪಾಕ್ಷಗೌಡ, ಆರ್‌ಐ ಎಸ್. ಸುರೇಶ್, ಎಎಒ ಗಿರೀಶ್‌ಬಾಬು, ಮಹಾಂತೇಶ್, ತಾಲೂಕು ಸಿಬ್ಬಂದಿ ಮೌನೇಶ್, ಭೂಮಾಪಕ ಮೇಲ್ವಿಚಾರಕಿ ಶಾಂತಮ್ಮ ಸೇರಿದಂತೆ ತಹಸೀಲ್ ಕಚೇರಿ ಸಿಬ್ಬಂದಿ ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರಾಮಕೃಷ್ಣ ಮಿಷನ್: ಸ್ವಚ್ಛ ಮಂಗಳೂರು ಅಭಿಯಾನ - ಮಾಸಿಕ ಸ್ವಚ್ಛತಾ ಶ್ರಮದಾನ
ಕದ್ರಿ ಕೃಷ್ಣ ವೇಷ ಸ್ಪರ್ಧೆ: ರಾಷ್ಟ್ರೀಯ ಮಕ್ಕಳ ಉತ್ಸವ ಫಲಿತಾಂಶ