ಕನ್ನಡಪ್ರಭ ವಾರ್ತೆ ಕೆ.ಎಂ.ದೊಡ್ಡಿ
ಡಾ.ಬಿ.ಆರ್ ಅಂಬೇಡ್ಕರ್ ಭವನದಲ್ಲಿ ನಡೆದ ಹೋಬಳಿ ಮಟ್ಟದ ಗ್ಯಾರಂಟಿ ಯೋಜನೆಗಳ ಅರಿವು ಹಾಗೂ ಕುಂದುಕೊರತೆ ಸಭೆ ಉದ್ಘಾಟಿಸಿ ಮಾತನಾಡಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರ ಕನಸಿನ ಪಂಚ ಗ್ಯಾರಂಟಿ ಯೋಜನೆಗಳು ರಾಜ್ಯದ ಅಭಿವೃದ್ಧಿಗೆ ಪೂರಕ ಹಾಗೂ ಮಹಿಳೆಯರ ಸಬಲೀಕರಣಕ್ಕೆ ಸಹಕಾರಿಯಾಗಿವೆ ಎಂದರು.
ಗೃಹಲಕ್ಷ್ಮೀ ಯೋಜನೆಯಡಿ ಕಳೆದ 2 ಕಂತುಗಳು ತಾಂತ್ರಿಕ ಕಾರಣದಿಂದ ಬಿಡುಗಡೆಯಾಗಿಲ್ಲ. ಶೀಘ್ರ ಮಹಿಳೆಯರ ಖಾತೆಗೆ ಹಣ ಜಮೆ ಮಾಡಲು ಕ್ರಮವಹಿಸಲಾಗುವುದು ಎಂದು ಸಿಡಿಪಿಒ ಅರುಣ್ ತಿಳಿಸಿದರು.ಗೃಹಲಕ್ಷ್ಮೀ ಯೋಜನೆಯಡಿ ಸುಮಾರು 79,138 ಮಹಿಳೆಯರಿದ್ದು, 367 ದೂರಗಳಿವೆ. ಹಣ ಪಾವತಿಗೆ ತಾಂತ್ರಿಕ ಕಾರಣಗಳಿದ್ದು, ಸಮಸ್ಯೆಗಳ ನಿವಾರಣೆ ಮಾಡಿ ಫಲಾನುಭವಿಗಳ ಖಾತೆಗೆ ಹಣ ಜಮೆ ಮಾಡುವುದಾಗಿ ಹೇಳಿದರು.
ಮದ್ದೂರು ತಾಲೂಕಿನಲ್ಲಿ ಗೃಹಜ್ಯೋತಿ ಹಾಗೂ ಶಕ್ತಿ ಯೋಜನೆ, ಯುವ ನಿಧಿ ಯೋಜನೆಯ ಫಲಾನುಭವಿಗಳ ಸದ್ಬಳಕೆ ಕುರಿತು ಸೆಸ್ಕ್ ಎಇಇ ರಮೇಶ್, ಸಾರಿಗೆ ಅಧಿಕಾರಿ ಚನ್ನಕೇಶವ ಮೂರ್ತಿ, ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಅಧಿಕಾರಿ ಲತಾಶ್ರೀ ತಿಳಿಸಿದರು.
ಈ ವೇಳೆ ಯೋಜನೆ ಸಮಿತಿ ಉಪಾಧ್ಯಕ್ಷ ರಾಜೇಂದ್ರ, ಸದಸ್ಯರಾದ ಫೈರೋಜ್ ಖಾನ್, ರಾಜಣ್ಣ ,ಭಾನುಪ್ರಕಾಶ್, ಬೋರೇಗೌಡ, ರಾಜು, ರಘುಪತಿ, ಸಿದ್ದಲಿಂಗ ಪ್ರಸಾದ್, ನಾಗಮ್ಮ, ಗೀತಾ, ತಾಪಂ ಯೋಜನಾಧಿಕಾರಿ ಸುರೇಶ್, ಚಿದಾನಂದ, ಪ್ರೊ ಬೋರೇಗೌಡ, ಎಸ್ಸಿ ಬ್ಲಾಕ್ ಅಧ್ಯಕ್ಷ ಅಮೀನ್ ಶಿವಲಿಂಗಯ್ಯ ಸೇರಿದಂತೆ ಹಲವರು ಉಪಸ್ಥಿತರಿದ್ದರು.