ಕನ್ನಡಪ್ರಭ ವಾರ್ತೆ ಮಂಡ್ಯ
ಕಮಿಷನ್ ಒಂದು ರಾಜ್ಯದಿಂದ ಇನ್ನೊಂದು ರಾಜ್ಯಕ್ಕೆ ವಿಭಿನ್ನವಾಗಿದೆ. ದೇಶಾದ್ಯಂತ ಪ್ರತಿ ಕ್ವಿಂಟಲ್ಗೆ ₹೩೦೦ ನಿಗದಿಪಡಿಸಲು ಆದೇಶಿಸುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸುವುದಾಗಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಆಗ್ರಹಪಡಿಸಿದರು.
ಕೇಂದ್ರ ಸರ್ಕಾರವು ನ್ಯಾಯಬೆಲೆ ಅಂಗಡಿ ಮಾಲೀಕರಿಗೆ ಜಿಎಸ್ಟಿ ತೆರಿಗೆ ಮತ್ತು ರಸೀದಿ ತೆರೆಯವ ಪಾಸ್ ಮಿಷನ್ ಪ್ರಿಂಟರ್ನ್ನು ಖರೀದಸಬೇಕೆಂದು ರಾಜ್ಯ ಸರ್ಕಾರಗಳಿಗೆ ಒತ್ತಡ ತರುತ್ತಿದ್ದಾರೆ. ಇದು ಮಾಲೀಕರಿಗೆ ಹೊರೆಯಾಗುವುದರಿಂದ ನ್ಯಾಯಬೆಲೆ ಅಂಗಡಿಗಳನ್ನು ಆರ್ಥಿಕವಾಗಿ ಸಬಲೀಕರಣಗೊಳಿಸುವ ನೀತಿ ಜಾರಿಗೊಳಿಸುವಂತೆ ಒತ್ತಾಯಿಸಿದರು.ಸಾರ್ವಜನಿಕರಿಗೆ ಅಕ್ಕಿಯನ್ನು ನೀಡುವುದರ ಜೊತೆಗೆ ವಿವಿಧ ಅಗತ್ಯ ವಸ್ತುಗಳಾದ ಬೆಲ್ಲ, ಸಕ್ಕರೆ, ಎಣ್ಣೆ, ಬೇಳೆ, ಗೋಧಿ, ದ್ವಿದಳ ಧಾನ್ಯಗಳನ್ನು ಪೂರೈಸುವಂತೆ ಕೋರಿದ ಅವರು, ಪ್ರಸ್ತುತ ವಿತರಣೆ ಮಾಡುತ್ತಿರುವ ರಾಗಿ ಮನುಷ್ಯರು ತಿನ್ನಲು ಯೋಗ್ಯವಿಲ್ಲ. ತೀರಾ ಕಳಪೆಯಿಂದ ಕೂಡಿದೆ. ಪ್ರತಿ ಕ್ವಿಂಟಲ್ಗೆ ₹೩೮೨೦ ಕೊಟ್ಟು ನೇರವಾಗಿ ರೈತರಿಂದಲೇ ಖರೀದಿಸಿ ಪಡಿತರದಾರರಿಗೆ ಗುಣಮಟ್ಟದ ರಾಗಿ ನೀಡುವಂತೆ ಒತ್ತಾಯಿಸಿದರು.
ಸಗಟು ಮಳಿಗೆಗಳಿಗೆ ಸಿಸಿ ಕ್ಯಾಮೆರಾ ಅಳವಡಿಸಲು ₹೧೩ ಕೋಟಿ, ಗೋಣಿಚೀಲ ಖರೀದಿಗೆ ₹೮೮ ಕೋಟಿ ಗಳನ್ನು ನ.೧೫ರಂದೇ ಬಿಡುಗಡೆ ಮಾಡಿದ್ದರೂ ಇದುವರೆಗೂ ಕಾರ್ಯೋನ್ಮುಖವಾಗಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.