ಗಂಗಾ ಕಲ್ಯಾಣ ಯೋಜನೆ ಜಾರಿಯಿಂದ ಗ್ರಾಮೀಣ ಜನರಿಗೆ ನೆಮ್ಮದಿ ಜೀವನ: ದರ್ಶನ್ ಪುಟ್ಟಣ್ಣಯ್ಯ

KannadaprabhaNewsNetwork |  
Published : May 25, 2025, 01:47 AM IST
24ಕೆಎಂಎನ್ ಡಿ11 | Kannada Prabha

ಸಾರಾಂಶ

ಒಟ್ಟು 4 ಕೋಟಿ ರು. ವೆಚ್ಚದಲ್ಲಿ ಗಂಗಾ ಕಲ್ಯಾಣ ಯೋಜನೆಯಡಿ 87, ಸ್ವಯಂ ಉದ್ಯೋಗ ನೇರ ಸಾಲ ಯೋಜನೆಯಡಿ 40 ಹಾಗೂ ಸ್ವಾವಲಂಬಿ ಸಾರಥಿ ಯೋಜನೆಯಡಿ 25 ಜನರು ಸೇರಿದಂತೆ ಒಟ್ಟು 152 ಫಲಾನುಭವಿಗಳು ಈ ಯೋಜನೆ ವ್ಯಾಪ್ತಿಗೆ ಸೇರಿದ್ದಾರೆ. ಫಲಾನುಭವಿಗಳು ಯೋಜನೆಯನ್ನು ಸದ್ಬಳಕೆ ಮಾಡಿಕೊಂಡು ಬದುಕು ಕಟ್ಟಿಕೊಳ್ಳಬೇಕು.

ಕನ್ನಡಪ್ರಭ ವಾರ್ತೆ ಪಾಂಡವಪುರ

ಗಂಗಾ ಕಲ್ಯಾಣ ಯೋಜನೆ ಜಾರಿಯಿಂದಾಗಿ ತಳಮಟ್ಟದ ಜನರು ಗ್ರಾಮೀಣ ಪ್ರದೇಶಗಳಲ್ಲಿ ಉತ್ತಮ ಜೀವನ ಸಾಗಿಸಲು ಸಾಧ್ಯವಾಗಿದೆ ಎಂದು ಶಾಸಕ ದರ್ಶನ್ ಪುಟ್ಟಣ್ಣಯ್ಯ ಹೇಳಿದರು.

ತಾಲೂಕಿನ ನರಹಳ್ಳಿಯಲ್ಲಿ ಡಿ.ದೇವರಾಜು ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದಿಂದ ಒಟ್ಟು 11 ಹಿಂದುಳಿದ ವರ್ಗಗಳ ನಿಗಮಗಳ ಗಂಗಾ ಕಲ್ಯಾಣ ಯೋಜನೆ, ಸ್ವಯಂ ಉದ್ಯೋಗ ನೇರಸಾಲ ಹಾಗೂ ಸ್ವಾವಲಂಬಿ ಸಾರಥಿ ಯೋಜನೆ ಸೇರಿದಂತೆ ವಿವಿಧ ಯೋಜನೆಗಳ ಕಾಮಗಾರಿಗಳಿಗೆ ಬೋರ್ ವೆಲ್ ಮೋಟರ್ ಚಾಲನೆ ನೀಡಿ ಮಾತನಾಡಿದರು. ಒಟ್ಟು 4 ಕೋಟಿ ರು. ವೆಚ್ಚದಲ್ಲಿ ಗಂಗಾ ಕಲ್ಯಾಣ ಯೋಜನೆಯಡಿ 87, ಸ್ವಯಂ ಉದ್ಯೋಗ ನೇರ ಸಾಲ ಯೋಜನೆಯಡಿ 40 ಹಾಗೂ ಸ್ವಾವಲಂಬಿ ಸಾರಥಿ ಯೋಜನೆಯಡಿ 25 ಜನರು ಸೇರಿದಂತೆ ಒಟ್ಟು 152 ಫಲಾನುಭವಿಗಳು ಈ ಯೋಜನೆ ವ್ಯಾಪ್ತಿಗೆ ಸೇರಿದ್ದಾರೆ. ಫಲಾನುಭವಿಗಳು ಯೋಜನೆಯನ್ನು ಸದ್ಬಳಕೆ ಮಾಡಿಕೊಂಡು ಬದುಕು ಕಟ್ಟಿಕೊಳ್ಳಬೇಕು ಎಂದರು.

ಗಂಗಾ ಕಲ್ಯಾಣ ಯೋಜನೆಯಡಿ ಬೋರ್ ವೆಲ್ ಕೊರೆಸಲಾಗಿರುವ ಫಲಾನುಭವಿ ರೈತರು ತಮ್ಮ ಜಮೀನಿನಲ್ಲಿ ಬೆಳೆ ಹೆಚ್ಚಾಗಿ ಬೆಳೆಯಲಿ. ಸ್ವಯಂ ಉದ್ಯೋಗ ನೇರ ಸಾಲ ಯೋಜನೆ ಹಾಗೂ ಸ್ವಾವಲಂಬಿ ಯೋಜನೆಯಡಿಯ ಫಲಾನುಭವಿಗಳು ಸ್ವಯಂ ಉದ್ಯೋಗ ಕಂಡುಕೊಳ್ಳಬೇಕು ಎಂದರು.

ರೈತ ನಾಯಕ ಪ್ರೊ.ಎಂ.ಡಿ.ನಂಜುಂಡಸ್ವಾಮಿ ಅವರು ಈ ಯೋಜನೆ ಹುಟ್ಟುಹಾಕಿದ್ದು, ತಳಮಟ್ಟದ ಜನರ ಸಮಸ್ಯೆ ನಿವಾರಣೆಗೆ ಈ ಯೋಜನೆ ಸಹಕಾರಿಯಾಗಿದೆ. ಈ ಯೋಜನೆಗೆ ಬೇಡಿಕೆ ಹೆಚ್ಚಾಗಿದೆ. ಸಾಕಷ್ಟು ಜನರು ಅರ್ಜಿ ಸಲ್ಲಿಸುತ್ತಾರೆ. ಆದರೆ, ಎಲ್ಲರಿಗೂ ಸೌಲಭ್ಯ ಒದಗಿಸಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ಸರ್ಕಾರ ಈ ಯೋಜನೆಗಳಿಗೆ ಮತ್ತಷ್ಟು ಅನುದಾನ ಒದಗಿಸುವ ಮೂಲಕ ಜನರಿಗೆ ಅನುಕೂಲ ಮಾಡಿಕೊಡಬೇಕು ಎಂದರು.

ಇದೇ ವೇಳೆ ಡಿ.ದೇವರಾಜು ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕ ಬೋರೇಗೌಡ, ತಾಲೂಕು ಮಟ್ಟದ ಅಧಿಕಾರಿ ಪ್ರಸನ್ನ, ಗ್ರಾ.ಪಂ ಸದಸ್ಯ ನರಹಳ್ಳಿ ಬೋರೇಗೌಡ, ತಾಲೂಕು ರೈತಸಂಘದ ಉಪಾಧ್ಯಕ್ಷ ಹೊಸಕೋಟೆ ಸುರೇಶ್, ರೈತಸಂಘದ ಮುಖಂಡರಾದ ನಾರಾಯಣಪುರ ರಾಘು, ಬೆಟ್ಟಹಳ್ಳಿ ಆನಂದ್, ಮೂಡಲಕೊಪ್ಪಲು ಎಂ.ಬಿ.ಶಿವಣ್ಣ, ಕಾಳೇನಹಳ್ಳಿ ಆನಂದ್, ಪುಟ್ಟೇಗೌಡ ಇತರರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

25 ವರ್ಷದಲ್ಲಿ ರೈತರಿಗೆ 111 ಲಕ್ಷ ಕೋಟಿ ನಷ್ಟ: ಶರ್ಮಾ
ಆಟೋ ಗ್ಲಾಸ್ ಒಡೆದಿದ್ದಕ್ಕೆಸ್ನೇಹಿತನ ಕೊಂದ ಚಾಲಕ