ಕನ್ನಡಪ್ರಭ ವಾರ್ತೆ ದಾವಣಗೆರೆ
ನಗರದ ಶ್ರೀ ದುರ್ಗಾಶಕ್ತಿ ಮಹಿಳಾ ಸ್ವಸಹಾಯ ಸಂಘದಿಂದ ಗಾಜಿನ ತ್ಯಾಜ್ಯ ಮತ್ತು ಒಣ ತ್ಯಾಜ್ಯ ಘಟಕದ ಉದ್ಘಾಟನೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿ, ವಾಹನಗಳಿಗೆ ಜಿಪಿಆರ್ಎಸ್ ಯಂತ್ರಗಳನ್ನು ಅಳವಡಿಸಿದ್ದರಿಂದ ಪಾಲಿಕೆ ಅಧಿಕಾರಿಗಳು, ಸಿಬ್ಬಂದಿ, ಪೌರ ಕಾರ್ಮಿಕರು ಯಾರೂ ಸಹ ಕರ್ತವ್ಯದಿಂದ ನುಣುಚಿಕೊಳ್ಳಲು ಅವಕಾಶ ಇಲ್ಲ ಎಂದರು.
ಪಾಲಿಕೆ ವ್ಯಾಪ್ತಿಯಲ್ಲಿರುವ ಒಟ್ಟು ಕುಟುಂಬ, ಜನಸಂಖ್ಯೆ, ಉತ್ಪತ್ತಿಯಾಗುವ ತ್ಯಾಜ್ಯದ ಪ್ರಮಾಣ, ತ್ಯಾಜ್ಯ ಸಂಗ್ರಹದ ಪ್ರಮಾಣಕ್ಕೆ ತಕ್ಕಂತೆ ವಾಹನ, ಕಸ ಸಂಗ್ರಹಣೆ ಪೌರ ಕಾರ್ಮಿಕರನ್ನು ನೇಮಿಸಲಾಗಿದೆ. ಅಲ್ಲದೇ, ವಾಹನಗಳಿಗೆ ಮಾರ್ಗದ ನಕ್ಷೆ ರಚಿಸಲಾಗುತ್ತಿದೆ. ಯಾವುದೇ ಕಾರಣದಿಂದಾಗಿ ಸಾರ್ವಜನಿಕರು ಎಲ್ಲೆಂದರಲ್ಲಿ ಕಸ ಹಾಕುವಂತಿಲ್ಲ. ಎಲ್ಲೆಂದರಲ್ಲಿ ಕಸ ಹಾಕುವವರ ವಿರುದ್ಧ ಸೂಕ್ತ ಕಾನೂನು ಕ್ರಮವನ್ನು ಕೈಗೊಳ್ಳಲಾಗುತ್ತಿದೆ ಎಂದು ಎಚ್ಚರಿಸಿದರು.ಕಾರ್ಯಕ್ರಮ ಉದ್ಘಾಟನೆ ಮಾಡಿದ ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ಮಾತನಾಡಿ, ಸರ್ಕಾರದಿಂದ ಯಾವುದೇ ಅನುದಾನ ಪಡೆಯದೇ ಮಹಿಳಾ ಸ್ವಸಹಾಯ ಸಂಘವು ತ್ಯಾಜ್ಯ ನಿರ್ವಹಣೆ ಮಾಡಲು ಮುಂದಾಗಿರುವುದು ಶ್ಲಾಘನೀಯ ಕಾರ್ಯವಾಗಿದೆ. ಇಂತಹ ಕಾರ್ಯಗಳಿಗೆ ಸಾರ್ವಜನಿಕ ಸಹಭಾಗಿತ್ವದ ಮಹಿಳಾ ಸಂಘಗಳು ಮುಂದಾಗಬೇಕು. ಸಂಘದ ಇಂತಹ ಕಾರ್ಯವು ಇತರರಿಗೂ ಪ್ರೇರಣೆಯಾಗಿದೆ ಎಂದು ಶ್ಲಾಘಿಸಿದರು.
ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ರಾಜಶೇಖರ ಬಿ.ಪುರಾಣಿಕ, ಪರಿಸರ ಅಭಿಯಂತರ ಜಗದೀಶ, ಮಾತೃ ದೇವೋ ಟ್ರಸ್ಟ್ ಸಂಸ್ಥಾಪಕ ಅಧ್ಯಕ್ಷ ಪೋತುಲ ಶ್ರೀನಿವಾಸ, ಒಣ ಕಸ ಮರು ಸಂಗ್ರಹಣಾ ಘಟಕದ ಸಂಯೋಜಕ ನವೀನ ಗುಬ್ಬಿ, ಕೆ.ಎನ್.ಪ್ರಜ್ವಲ್, ನಂದಾಮಣಿ, ರೇಖಾ, ಡಿ.ಸಾವಿತ್ರಮ್ಮ, ಡಿ.ಅರ್.ಚೇತನಾ ಇತರರು ಇದ್ದರು.