ಕೇಂದ್ರದಿಂದ ಜನರಿಗೆ ಹೊರೆಯಾಗದ ಯೋಜನೆಗಳ ಜಾರಿ-ಪ್ರಹ್ಲಾದ್‌ ಜೋಶಿ

KannadaprabhaNewsNetwork |  
Published : Apr 28, 2024, 01:23 AM IST
ಪೊಟೋ ಪೈಲ್ ನೇಮ್ ೨೭ಎಸ್‌ಜಿವಿ೩ ತಾಲೂಕಿನ ಹಿರೇಮಣಕಟ್ಟಿ  ಗ್ರಾಮಗಳಲ್ಲಿ ಮತಯಾಚನೆ ಮಾಡಿ ಧಾರವಾಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪ್ರಲ್ಹಾದ್ ಜೋಶಿ ಅವರನ್ನು ಸನ್ಮಾನಿಸಿ ಗೌರವಿಸಿದರು. | Kannada Prabha

ಸಾರಾಂಶ

ಎಲ್ಲ ಹಳ್ಳಿಗಳಿಗೆ ಡ್ರೋನ್ ಕೊಟ್ಟು, ಆ ಡ್ರೋನ್ ನಡೆಸಲು ಮಹಿಳೆಯರಿಗೆ ತರಬೇತಿ ನೀಡಲಾಗುತ್ತಿದೆ. ಕೃಷಿ ಸಮ್ಮಾನ್ ನಿಧಿ ಯೋಜನೆ, ಆಯುಷ್ಮಾನ್ ಯೋಜನೆ ಮಾಡಲಾಗಿದೆ. ಜನತೆಗೆ ಹೊರೆಯಾಗದ ರೀತಿಯಲ್ಲಿ ಯೋಜನೆಗಳನ್ನು ಕೇಂದ್ರದ ಮೋದಿ ಸರಕಾರ ಮಾಡುತ್ತಿದೆ ಎಂದು ಧಾರವಾಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪ್ರಹ್ಲಾದ್‌ ಜೋಶಿ ಹೇಳಿದರು.

ಶಿಗ್ಗಾವಿ:ಎಲ್ಲ ಹಳ್ಳಿಗಳಿಗೆ ಡ್ರೋನ್ ಕೊಟ್ಟು, ಆ ಡ್ರೋನ್ ನಡೆಸಲು ಮಹಿಳೆಯರಿಗೆ ತರಬೇತಿ ನೀಡಲಾಗುತ್ತಿದೆ. ಕೃಷಿ ಸಮ್ಮಾನ್ ನಿಧಿ ಯೋಜನೆ, ಆಯುಷ್ಮಾನ್ ಯೋಜನೆ ಮಾಡಲಾಗಿದೆ. ಜನತೆಗೆ ಹೊರೆಯಾಗದ ರೀತಿಯಲ್ಲಿ ಯೋಜನೆಗಳನ್ನು ಕೇಂದ್ರದ ಮೋದಿ ಸರಕಾರ ಮಾಡುತ್ತಿದೆ ಎಂದು ಧಾರವಾಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪ್ರಹ್ಲಾದ್‌ ಜೋಶಿ ಹೇಳಿದರು.

ತಾಲೂಕಿನ ಹಿರೇಬೆಂಡಿಗೇರಿ, ಹಿರೇಮಣಕಟ್ಟಿ, ಕಬನೂರ, ಹುಲಗೂರ ಸೇರಿದಂತೆ ವಿವಿಧ ಗ್ರಾಮಗಳಲ್ಲಿ ಮತಯಾಚನೆ ಮಾಡಿ ಅವರು ಮಾತನಾಡಿದರು.ಮೋದಿಯವರು ದೇಶ ಸೇರಿದಂತೆ ಜೀವನದ ಭದ್ರತೆಯ ಗ್ಯಾರಂಟಿಯನ್ನು ಈಗಾಗಲೇ ಘೋಷಿಸಿದ್ದಾರೆ. ಕಾಂಗ್ರೆಸ್ ಸರಕಾರ ಮುಸ್ಲಿಂರನ್ನು ಓಲೈಸುವ ಕಾರ್ಯ ಮಾಡಿ ಈ ರೀತಿಯ ಆಡಳಿತವನ್ನು ನಡೆಸಿದ್ದರಿಂದ ಹುಬ್ಬಳ್ಳಿಯ ನೇಹಾ ಹಿರೇಮಠ ಹೆಣ್ಣು ಮಗಳನ್ನು ಬರ್ಬರ ಹತ್ಯೆ ಮಾಡುವಷ್ಟು ಧೈರ್ಯ ಅವರಿಗೆ ಬರುವಂತೆ ಮಾಡಿದ್ದಾರೆ. ಹೀಗಾಗಿ ಜನತೆ ಕಾಂಗ್ರೆಸ್‌ ತಿರಸ್ಕರಿಸುತ್ತಿದ್ದಾರೆ ಎಂದರು.

ಬಿಜೆಪಿ ತಾಲೂಕಾಧ್ಯಕ್ಷ ಶಿವಾನಂದ ಮ್ಯಾಗೇರಿ, ಮುಖಂಡರಾದ ಶ್ರೀಕಾಂತ ದುಂಡಿಗೌಡ್ರ, ಶಶಿಧರ ಯಲಿಗಾರ, ಗಂಗಣ್ಣ ಸಾತಣ್ಣನವರ, ಶಿವಪ್ರಸಾದ ಸುರಗೀಮಠ, ತಿಪ್ಪಣ್ಣ ಸಾತಣ್ಣನವರ, ನರಹರಿ ಕಟ್ಟಿ, ನಿವೃತ್ತ ಮಾಜಿ ಸೈನಿಕ ಪರಶುರಾಮ ದಿವಾನರ, ಡಾ. ಮಲ್ಲೇಶಪ್ಪ ಹರಿಜನ, ಕರೆಪ್ಪ ಕಟ್ಟಿಮನಿ, ರಮೇಶ ಸಾತಣ್ಣವರ, ವಿರುಪಾಕ್ಷಪ್ಪ ಪಟ್ಟೇದ, ಆನಂದ ಸುಬೇದಾರ, ರೇವಣಸಿದ್ದಪ್ಪ ಸೊರಟೂರ, ಹನುಮಂತಪ್ಪ ವಾಲ್ಮೀಕಿ, ಶಿವರಾಜ ಹುಲಸೋಗಿ, ಬಸವರಾಜ ಸೊರಟೂರ ಸೇರಿದಂತೆ ವಿವಿಧ ಗ್ರಾಮಗಳ ಬಿಜೆಪಿ ಮುಖಂಡರು, ಕಾರ್ಯಕರ್ತರು ಭಾಗಿಯಾಗಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರಾಜ್ಯದಲ್ಲಿ ಮದ್ಯ ಮಾರಾಟ ನಿಷೇಧವಾಗುತ್ತಾ ?
ಯಾವ ದೇವ್ರಿಗೆ ಪೂಜೆ ಮಾಡಿಸಿದ್ದೀರಿ? : ಮಧುಗೆ ರವಿ!