ಬಸವ ತತ್ವ ಅಳವಡಿಸಿಕೊಂಡು ಕಾರ್ಯನಿರ್ವಹಣೆ

KannadaprabhaNewsNetwork |  
Published : Jun 29, 2025, 01:32 AM IST
56 | Kannada Prabha

ಸಾರಾಂಶ

ಬಸವಣ್ಣನವರ ತತ್ವ ಸಿದ್ಧಾಂತ, ಆದರ್ಶಗಳನ್ನು ಅಳವಡಿಸಿಕೊಂಡು ತಾಲೂಕಿನಲ್ಲಿ ಕಾರ್ಯ ನಿರ್ವಹಿಸುತ್ತಿದ್ದೇನೆ ಎಂದು ಶಾಸಕ ಅನಿಲ್ ಚಿಕ್ಕಮಾದು ಹೇಳಿದರು.

ಕನ್ನಡಪ್ರಭ ವಾರ್ತೆ ಎಚ್.ಡಿ. ಕೋಟೆ

ಬಸವಣ್ಣನವರ ತತ್ವ ಸಿದ್ಧಾಂತ, ಆದರ್ಶಗಳನ್ನು ಅಳವಡಿಸಿಕೊಂಡು ತಾಲೂಕಿನಲ್ಲಿ ಕಾರ್ಯ ನಿರ್ವಹಿಸುತ್ತಿದ್ದೇನೆ ಎಂದು ಶಾಸಕ ಅನಿಲ್ ಚಿಕ್ಕಮಾದು ಹೇಳಿದರು.

ಪಟ್ಟಣದ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ವತಿಯಿಂದ ನಡೆದ ಬಸವ ಜಯಂತಿ ಮತ್ತು ಬಸವ ಭವನ ನಿರ್ಮಾಣದ ಭೂಮಿ ಪೂಜೆಯ ಶಂಕುಸ್ಥಾಪನಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಬಸವಣ್ಣನವರು ಜಾತಿ ವ್ಯವಸ್ಥೆ, ಮೂಢನಂಬಿಕೆಗಳ ವಿರುದ್ಧ ಹೋರಾಟ ನಡೆಸಿ ಸಮಾಜದ ಪರಿವರ್ತನೆಗೆ ಶ್ರಮಿಸಿದಂತ ಆದರ್ಶ ವ್ಯಕ್ತಿಯಾಗಿದ್ದಾರೆ. 12ನೇ ಶತಮಾನದಲ್ಲಿ ಇದ್ದ ಅಸಮಾನತೆಯನ್ನು ಹೋಗಲಾಡಿಸಿ ಸಮ ಸಮಾಜದ ನಿರ್ಮಾಣಕ್ಕೆ ಕಾರಣರಾಗಿದ್ದಾರೆ ಎಂದರು.

ಎಚ್.ಡಿ. ಕೋಟೆ ಮತ್ತು ಸರಗೂರು ತಾಲೂಕು ಕೇಂದ್ರಗಳಲ್ಲಿ ಬಸವ ಭವನ ನಿರ್ಮಾಣ ಮಾಡುವುದಕ್ಕಾಗಿ ಸರ್ಕಾರದಿಂದ ಅನುದಾನ ಕೊಡಿಸುವ ಭರವಸೆ ನೀಡಿದರು. ಭವನ ನಿರ್ಮಾಣವಾದರೆ ಸಮಾಜದ ಸಂಘಟನೆ ಮತ್ತು ಏಳಿಗೆಗೆ ಪೂರಕವಾಗಲಿದೆ ಎಂದರು.

ಶಾಸಕ ಗಣೇಶ್ ಪ್ರಸಾದ್ ಮಾತನಾಡಿ, ಇಂದಿನ ಸಂಸತ್ ಭವನದ ಪರಿಕಲ್ಪನೆಯನ್ನು ಬಸವಣ್ಣನವರು 12ನೇ ಶತಮಾನದಲ್ಲೆ ಅನುಭವ ಮಂಟಪ ನಿರ್ಮಿಸಿ, ನಾವೆಲ್ಲರೂ ಒಂದೇ ಎಂದು ಸಾರಿದ ಮಹಾನ್ ವ್ಯಕ್ತಿ ಎಂದರು.

ಪಟ್ಟಣದಲ್ಲಿರುವ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಆವರಣದಿಂದ ಹೊರಟ ಮೆರವಣಿಗೆಯಲ್ಲಿ ಬೆಳ್ಳಿರಥದಲ್ಲಿ ಬಸವೇಶ್ವರ ಭಾವಚಿತ್ರವನ್ನು ಇರಿಸಿ, ವಿವಿಧ ಜಾನಪದ ಕಲಾತಂಡಗಳಿಂದ ಭಾಗವಹಿಸಿದ್ದವು.

ಇದೇ ವೇಳೆ ಎಸ್ಸೆಸ್ಸೆಲ್ಸಿ, ಪಿಯುಸಿಯಲ್ಲಿ ಅತಿ ಹೆಚ್ಚು ಅಂಕ ಪಡೆದ ಸಮಾಜದ ವಿದ್ಯಾರ್ಥಿಗಳನ್ನು ಅಭಿನಂದಿಸಲಾಯಿತು.

ಪಡುವಲು ವಿರಕ್ತ ಮಠದ ಮಹದೇವಸ್ವಾಮಿ, ಸಿದ್ದ ಮಲ್ಲೇಶ್ವರ ಮಠದ ಚನ್ನಬಸವ ಸ್ವಾಮಿ, ಗುರು ಮಲ್ಲೇಶ್ವರ ಮಠದ ಷಡಕ್ಷರಿ ಸ್ವಾಮಿ, ಬಿಂಚನಹಳ್ಳಿಪುರ ಮಠದ ನಾಗೇಂದ್ರ ಸ್ವಾಮಿ, ಕುದೇರು ಮಠದ ಗುರು ಮಲ್ಲೇಶ್ವರ ಸ್ವಾಮಿ ಸಾನ್ನಿಧ್ಯ ವಹಿಸಿದ್ದರು.

ಧ್ರುವ ಪಾಟೀಲ್, ಅಖಿಲ ಭಾರತ ವೀರಶೈವ ಲಿಂಗಾಯತ ಮಹಾ ಸಭಾ ತಾಲೂಕು ಅಧ್ಯಕ್ಷ ರುದ್ರಪ್ಪ, ಜಿಲ್ಲಾಧ್ಯಕ್ಷ ಎಚ್.ವಿ. ಬಸವರಾಜು, ಉಪಾಧ್ಯಕ್ಷ ಬಿ.ವಿ. ಬಸವರಾಜು, ಯುವ ಸಮಿತಿ ಅಧ್ಯಕ್ಷ ಬಹದ್ದೂರ್ ಸತೀಶ್, ರಾಜ್ಯ ನಿರ್ದೇಶಕ ಬಸವರಾಜಪ್ಪ ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸಹಕಾರದಿಂದ ಸಮೃದ್ಧಿ - ಸಹಕಾರ ಭಾರತಿಯಿಂದ ಸಹಕಾರ ಕ್ಷೇತ್ರದ ಬಲವರ್ಧನೆ
ದ್ವೇಷಭಾಷಣ ಬಿಲ್‌ಗೆ ಸಹಿ ಬೇಡ : ಗೌರ್ನರ್‌ಗೆ ಬಿಜೆಪಿ