- ಬಿಜೆಪಿ ಆಡಳಿತದಿಂದ ಪ್ರಜಾತಂತ್ರ ವ್ಯವಸ್ಥೆಗೆ ತೀವ್ರ ಧಕ್ಕೆ: ಎಚ್.ಆಂಜನೇಯ ಆರೋಪ - - - ಕನ್ನಡಪ್ರಭ ವಾರ್ತೆ ಹರಿಹರ
ನಗರದ ಪತ್ರಿಕಾಭವನದಲ್ಲಿ ಸೋಮವಾರ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು, ಕೋಟಿಗಟ್ಟಲೆ ಹಣ ನೀಡಿ ಶಾಸಕರನ್ನು ಖರೀದಿಸುವ ಮೂಲಕ ಬಿಜೆಪಿ ದೇಶದ ಪ್ರಜಾತಂತ್ರ ವ್ಯವಸ್ಥೆಗೆ ತೀವ್ರ ಧಕ್ಕೆ ತಂದಿದೆ. ದೇಶದ ಸಂವಿಧಾನ, ಪ್ರಜಾತಂತ್ರ ವ್ಯವಸ್ಥೆ ಬಗ್ಗೆ ಬಿಜೆಪಿಗೆ ಇರುವ ನಿಕೃಷ್ಟ ಭಾವನೆ ಇದು ಬಿಂಬಿಸುತ್ತದೆ ಎಂದರು.
ಕರ್ನಾಟಕವೂ ಸೇರಿದಂತೆ ದೇಶದ ವಿವಿಧ ರಾಜ್ಯಗಳಲ್ಲಿ ಬಹುಮತ ಪಡೆದು ಅಧಿಕಾರ ಪಡೆದಿದ್ದ ಕಾಂಗ್ರೆಸ್ ಹಾಗೂ ಇತರೆ ಪಕ್ಷಗಳ ಸರ್ಕಾರಗಳನ್ನು ಬಿಜೆಪಿ ಉರುಳಿಸಿದೆ. ಶಾಸಕರನ್ನು ಖರೀದಿ ಮಾಡಿ ಬಹುಮತ ಪಡೆದ ಸರ್ಕಾರಗಳನ್ನು ಉರುಳಿಸುವ ಕೆಟ್ಟ ಸಂಸ್ಕೃತಿ ದೇಶದಲ್ಲಿ ಹುಟ್ಟುಹಾಕಿದ ಕೀರ್ತಿ ಬಿಜೆಪಿಗೆ ಸಲ್ಲುತ್ತದೆ ಎಂದರು.ಈಗಾಗಲೆ ಇಬ್ಬರು ಶಾಸಕರಿರುವ ಶಾಮನೂರು ಕುಟುಂಬದವರಿಗೆ ಲೋಕಸಭಾ ಟಿಕೆಟ್ ನೀಡಿರುವುದು ಸರಿಯೆ? ಎಂಬ ಪ್ರಶ್ನೆಗೆ, ಜನರ ನಡುವೆ ಬೆರೆತು ಸಾಮಾಜಿಕ ಸೇವಾ ಕಾರ್ಯ ಮಾಡುತ್ತಿರುವುದು ಹಾಗೂ ಮಹಿಳೆಗೆ ಟಿಕೆಟ್ ನಿಗದಿ ಆಗಿದ್ದರಿಂದ ಅನಿವಾರ್ಯವಾಗಿ ಶಾಮನೂರು ಕುಟುಂಬದ ಡಾ.ಪ್ರಭಾ ಮಲ್ಲಿಕಾರ್ಜುನರಿಗೆ ಅವಕಾಶ ಸಿಕ್ಕಿದೆ ಎಂದು ಉತ್ತರಿಸಿದರು.
- - -
ಕೋಟ್ ರಾಜ್ಯದಲ್ಲಿ ನೀಡಿದ ವಚನದಂತೆ ಐದೂ ಗ್ಯಾರಂಟಿಗಳನ್ನು ಜಾರಿ ಮಾಡಲಾಗಿದೆ, ಅದೇ ರೀತಿ ಕೇಂದ್ರದಲ್ಲೂ ಕಾಂಗ್ರೆಸ್ ಗ್ಯಾರಂಟಿಗಳನ್ನು ಜಾರಿ ಮಾಡಲು ಬದ್ಧವಾಗಿದೆ. ದಾವಣಗೆರೆ ಕ್ಷೇತ್ರದ ಅಹಿಂದ ಸೇರಿದಂತೆ ಮಹಿಳೆಯರು, ಪ್ರಗತಿಪರರು, ಶಾಂತಿ ಪ್ರಿಯರೆಲ್ಲರೂ ಡಾ.ಪ್ರಭಾರನ್ನು ಬೆಂಬಲಿಸಬೇಕು- ಎಚ್.ಆಂಜನೇಯ, ಮಾಜಿ ಸಚಿವ
- - - -೨೯ಎಚ್ಆರ್ಆರ್೧:ಹರಿಹರದಲ್ಲಿ ಸೋಮವಾರ ನಡೆದ ಪತ್ರಿಕಾಗೋಷ್ಟಿಯಲ್ಲಿ ಮಾಜಿ ಸಚಿವ ಎಚ್.ಆಂಜನೇಯ ಮಾತನಾಡಿದರು.