ಕನ್ನಡಪ್ರಭ ವಾರ್ತೆ ಮೂಡುಬಿದಿರೆ
ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವತಿಯಿಂದ ಆಳ್ವಾಸ್ ಕಾಲೇಜಿನ ಕುವೆಂಪು ಸಭಾಂಗಣದಲ್ಲಿ ಟೀಮ್ ಮ್ಯಾಟ್ರಿಕ್ಸ್ ಸಹಯೋಗದಲ್ಲಿ ಶುಕ್ರವಾರ ನಡೆದ ‘ನಾಯಕನ ಹೆಜ್ಜೆಯಲ್ಲಿ - ಸ್ವಾಮಿ ವಿವೇಕಾನಂದರ ಭೋದನೆಗಳನ್ನು ಜೀವನದಲ್ಲಿ ಹೇಗೆ ಅಳವಡಿಸುವುದು’ ಎಂಬ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ನನ್ನಿಂದ ಅಸಾಧ್ಯ ಎನ್ನುವುದು ಪ್ರಪಂಚದ ಅತ್ಯಂತ ದೊಡ್ಡ ತಪ್ಪು ಎಂದು ವಿವೇಕಾನಂದರು ಹೇಳಿದ್ದಾರೆ. ನಮ್ಮಲ್ಲಿ ಯಶಸ್ಸಿಗೆ ಬೇಕಾದ ಎಲ್ಲಾ ಸತ್ವಗಳು ಇರುತ್ತವೆ. ಅದನ್ನು ನಾವು ಸರಿಯಾದ ರೀತಿಯಲ್ಲಿ ಆಯೋಜಿಸಿದಾಗ ಯಶಸ್ಸು ಕಟ್ಟಿಟ್ಟ ಬುತ್ತಿ. ತಮ್ಮ ಎಲ್ಲಾ ನ್ಯೂನತೆಗಳನ್ನು ಮೀರಿ, ಸಾಧನೆ ಮೆರೆದ ಮೇಡಂ ಕ್ಯೂರಿ, ಥಾಮಸ್ ಅಲ್ವಾ ಎಡಿಸನ್, ನೆಪೋಲಿಯನ್, ಅಬ್ರಹಾಂ ಲಿಂಕನ್ ಮತ್ತಿತರರ ಸಾಧನೆಗಳನ್ನು ವಿವರಿಸಿದರು.ಸ್ವಾತಂತ್ರ್ಯ ಬಂದು 75 ವರ್ಷಗಳಾದರೂ ಮೆಕಾಲೆ ಶಿಕ್ಷಣ ವ್ಯವಸ್ಥೆ ಮುಂದುವರಿಸಿಕೊಂಡು ಹೋಗುತ್ತಿದ್ದೇವೆ. ಇಂದಿನ ಶಿಕ್ಷಣ ವ್ಯವಸ್ಥೆ ಮಕ್ಕಳಿಗೆ ಈ ನೆಲದ ಮೂಲ ಮೌಲ್ಯಗಳನ್ನು ತಿಳಿಸಿಕೊಡುವುದರಲ್ಲಿ ಸಂಪೂರ್ಣ ಎಡವಿದೆ. ಈ ಅಂಶಗಳಿಗೆ ಒತ್ತು ನೀಡುವ ಹಿನ್ನಲೆಯಲ್ಲಿ ಕೇಂದ್ರ ಸರ್ಕಾರ ತಂದ ಹೊಸ ಶಿಕ್ಷಣ ನೀತಿಯನ್ನು ಹಲವು ರಾಜ್ಯಗಳು ನಿರಾಕರಿಸುತ್ತಿವೆ. ಇದು ಸಲ್ಲದು ಎಂದು ವಿಷಾದ ವ್ಯಕ್ತಪಡಿಸಿದರು.
ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವ್ಯವಸ್ಥಾಪಕ ಟ್ರಸ್ಟಿ ವಿವೇಕ ಆಳ್ವ, ಕಾಲೇಜಿನ ಆಡಳಿತಧಿಕಾರಿ ಬಾಲಕೃಷ್ಣ ಶೆಟ್ಟಿ, ಪ್ರಾಧ್ಯಾಪಕ ಸುಹಾಸ್ ಶೆಟ್ಟಿ, ರೂಪೇಶ್ ಶೆಟ್ಟಿ, ವಿದ್ಯಾರ್ಥಿ ಆದಿತ್ಯ ನಾಯಕ್ ಮತ್ತು ಧೀರಜ್ ಬಂಗೇರ ಇದ್ದರು. ಪ್ರತೀಕ್ಷಾ ಶೆಣೈ ಸ್ವಾಗತಿಸಿದರು. ಖುಷಿ ಬಾಲಕೃಷ್ಣ ಶೆಟ್ಟಿ ನಿರೂಪಿಸಿದರು. ಸಂತೃಪ್ತಿ ರಾವ್ ವಂದಿಸಿದರು.