ಕೈಕೊಟ್ಟ ಮಳೆ: ಅಡಕತ್ತರಿಯಲ್ಲಿ ರೈತರ ಬದುಕು

KannadaprabhaNewsNetwork |  
Published : Aug 08, 2026, 01:45 AM IST
ಫೋಟೋ: 7 ಹೆಚ್‌ಎಸ್‌ಕೆ 1ಹೊಸಕೋಟೆ ತಾಲೂಕಿನ ನಂದಗುಡಿ ಹೋಬಳಿಯ ನಂದಗುಡಿ, ಹಿಂಡಿಗನಾಳ ಹಾಗೂ ಎನ್.ಹೊಸಹಳ್ಳಿ ಗ್ರಾಮಗಳಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್.ಮುನಿಯಪ್ಪ, ಶಾಸಕ ಶರತ್ ಬಚ್ಚೇಗೌಡ ಬರ ಪರಿಸ್ಥಿತಿ ಅಧ್ಯಯನ ವೇಳೆ ರೈತರೊಂದಿಗೆ ಸಂವಾದ ನಡೆಸಿದರು. | Kannada Prabha

ಸಾರಾಂಶ

ಮಳೆ ಕೊರತೆಯಿಂದ ತೀವ್ರ ಸಂಕಷ್ಟಕ್ಕೆ ಸಿಲುಕಿರುವ ರೈತರ ಸ್ಥಿತಿಗತಿಯನ್ನು ಅರಿಯುವ ಉದ್ದೇಶದಿಂದ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್. ಮುನಿಯಪ್ಪ ಶುಕ್ರವಾರ ತಾಲೂಕಿನ ನಂದಗುಡಿ ಹೋಬಳಿಯ ನಂದಗುಡಿ, ಹಿಂಡಿಗನಾಳ ಹಾಗೂ ಎನ್.ಹೊಸಹಳ್ಳಿ ಗ್ರಾಮಗಳಿಗೆ ಭೇಟಿ ನೀಡಿ ಬರ ಪರಿಸ್ಥಿತಿಯನ್ನು ಪರಿಶೀಲಿಸಿದರು.

-ನಂದಗುಡಿ ಹೋಬಳಿಯಲ್ಲಿ ಬರ ಅಧ್ಯಯನ

-ರೈತರ ಬೆನ್ನಿಗೆ ನಿಲ್ಲಲಿರುವ ಸರ್ಕಾರ: ಸಚಿವ ಕೆ.ಎಚ್. ಮುನಿಯಪ್ಪ ಭರವಸೆಕನ್ನಡಪ್ರಭ ವಾರ್ತೆ ಹೊಸಕೋಟೆ

ಮಳೆ ಕೊರತೆಯಿಂದ ತೀವ್ರ ಸಂಕಷ್ಟಕ್ಕೆ ಸಿಲುಕಿರುವ ರೈತರ ಸ್ಥಿತಿಗತಿಯನ್ನು ಅರಿಯುವ ಉದ್ದೇಶದಿಂದ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್. ಮುನಿಯಪ್ಪ ಶುಕ್ರವಾರ ತಾಲೂಕಿನ ನಂದಗುಡಿ ಹೋಬಳಿಯ ನಂದಗುಡಿ, ಹಿಂಡಿಗನಾಳ ಹಾಗೂ ಎನ್.ಹೊಸಹಳ್ಳಿ ಗ್ರಾಮಗಳಿಗೆ ಭೇಟಿ ನೀಡಿ ಬರ ಪರಿಸ್ಥಿತಿಯನ್ನು ಪರಿಶೀಲಿಸಿದರು.

ರೈತರ ಹೊಲಗಳಿಗೆ ತೆರಳಿ ಬೆಳೆ ಪರಿಸ್ಥಿತಿ ವೀಕ್ಷಿಸಿದ ಸಚಿವರು, ರೈತರೊಂದಿಗೆ ನೇರವಾಗಿ ಸಂವಾದ ನಡೆಸಿ ಅವರ ಅಹವಾಲುಗಳನ್ನು ಆಲಿಸಿದರು. ಸಕಾಲದಲ್ಲಿ ಮಳೆಯಾಗದ ಕಾರಣ ಕೃಷಿ ಚಟುವಟಿಕೆಗಳು ಸಂಪೂರ್ಣ ಹಿನ್ನಡೆಯಾಗಿದ್ದು, ಬಿತ್ತನೆ ಕಾರ್ಯವೂ ಅನಿಶ್ಚಿತತೆಯಲ್ಲಿದೆ ಎಂದು ರೈತರು ಸಚಿವರ ಗಮನಕ್ಕೆ ತಂದರು.

ಸಚಿವ ಕೆ.ಎಚ್. ಮುನಿಯಪ್ಪ ಮಾತನಾಡಿ, ಮಳೆ ಕೊರತೆಯಿಂದ ರೈತರ ಬದುಕು ಸಂಕಷ್ಟಕ್ಕೆ ಸಿಲುಕಿರುವುದು ಸರ್ಕಾರದ ಗಮನದಲ್ಲಿದೆ. ಬೆಳೆ ಬೆಳೆಯಲು ಬೇಕಾದಷ್ಟು ತೇವಾಂಶ ಇಲ್ಲದ ಕಾರಣ ರೈತರು ಬಿತ್ತನೆ ಮಾಡುವುದಕ್ಕೂ ಹಿಂದೆ ಮುಂದೆ ನೋಡುವಂತಾಗಿದೆ. ಭೂಗರ್ಭಜಲ ಮಟ್ಟ ಕುಸಿದಿರುವುದರಿಂದ ಲಕ್ಷಾಂತರ ರೂಪಾಯಿ ವೆಚ್ಚದಲ್ಲಿ ಕೊರೆಸುತ್ತಿರುವ ಬೋರ್‌ವೆಲ್‌ಗಳೂ ವಿಫಲವಾಗುತ್ತಿವೆ. ಇದರಿಂದ ರೈತರಿಗೆ ಆರ್ಥಿಕ ಹೊರೆ ಹೆಚ್ಚಾಗಿದೆ ಎಂದರು.

ನೀರು ಲಭ್ಯವಿರುವ ಬೋರ್‌ವೆಲ್ ಮಾಲೀಕರು ಮಾನವೀಯತೆ ಮೆರೆದು ಸುತ್ತಮುತ್ತಲಿನ ರೈತರಿಗೆ ಸಾಧ್ಯವಾದ ಮಟ್ಟಿಗೆ ನೀರು ಹಂಚಿಕೆ ಮಾಡುವಂತೆ ಮನವಿ ಮಾಡಿದ ಅವರು, ಬರ ಪರಿಸ್ಥಿತಿಯಲ್ಲಿ ಸರ್ಕಾರ ರೈತರ ಬೆನ್ನಿಗೆ ನಿಲ್ಲಲಿದ್ದು, ಅಗತ್ಯ ನೆರವು ಹಾಗೂ ಪರಿಹಾರ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.

ಶಾಶ್ವತ ಪರಿಹಾರಕ್ಕಾಗಿ ನೀರಾವರಿ ಯೋಜನೆಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗುವುದು. ಮಳೆ ಆಧಾರಿತ ಕೃಷಿಯ ಮೇಲಿನ ಅವಲಂಬನೆಯನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ಸರ್ಕಾರ ಪರಿಣಾಮಕಾರಿ ಕ್ರಮಗಳನ್ನು ರೂಪಿಸುತ್ತಿದೆ. ಜೊತೆಗೆ ರೈತರು ಕಡ್ಡಾಯವಾಗಿ ಬೆಳೆ ವಿಮೆ ಮಾಡಿಸಿಕೊಳ್ಳಬೇಕು. ಕೃಷಿ ಇಲಾಖೆ ಅಧಿಕಾರಿಗಳು ಗ್ರಾಮ ಮಟ್ಟದಲ್ಲಿ ಜಾಗೃತಿ ಮೂಡಿಸಿ, ಪ್ರತಿಯೊಬ್ಬ ಅರ್ಹ ರೈತನಿಗೂ ಬೆಳೆ ವಿಮೆ ಸೌಲಭ್ಯ ದೊರೆಯುವಂತೆ ಕ್ರಮವಹಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಶಾಸಕ ಶರತ್ ಬಚ್ಚೇಗೌಡ ಮಾತನಾಡಿ, ರೈತರು ಬಿತ್ತನೆಗಾಗಿ ಜಮೀನು ಹದಗೊಳಿಸಿ ಸಿದ್ಧವಾಗಿಟ್ಟುಕೊಂಡಿದ್ದಾರೆ. ಆದರೆ ವರುಣನ ಕೃಪೆ ದೊರೆಯದ ಕಾರಣ ಬಿತ್ತನೆ ಮಾಡಲು ನೂರಾರು ಬಾರಿ ಯೋಚಿಸುವಂತಾಗಿದೆ. ಈಗಲೇ ಬಂಡವಾಳ ಹೂಡಿ ಬಿತ್ತನೆ ಮಾಡಿದರೆ ಸಂಪೂರ್ಣ ನಷ್ಟ ಅನುಭವಿಸುವ ಭೀತಿ ರೈತರಲ್ಲಿ ಮನೆ ಮಾಡಿದೆ. ತಾಲೂಕಿನಲ್ಲಿ ಈ ವೇಳೆಗೆ ಕನಿಷ್ಠ 85 ಮಿ.ಮೀ. ಮಳೆಯಾಗಬೇಕಿತ್ತು. ಆದರೆ ಇದುವರೆಗೆ 25 ಮಿ.ಮೀ. ಮಳೆಯೂ ದಾಖಲಾಗಿಲ್ಲ. ಇದು ಕೃಷಿ ಚಟುವಟಿಕೆಗಳ ಮೇಲೆ ತೀವ್ರ ಪರಿಣಾಮ ಬೀರಿದೆ ಎಂದು ತಿಳಿಸಿದರು.

ಬರ ಅಧ್ಯಯನದ ವೇಳೆ ರೈತರು ಕುಡಿಯುವ ನೀರಿನ ಸಮಸ್ಯೆ, ಜಾನುವಾರುಗಳಿಗೆ ಮೇವು ಕೊರತೆ, ವಿದ್ಯುತ್ ಪೂರೈಕೆಯ ಅಡಚಣೆ ಹಾಗೂ ಬೋರ್‌ವೆಲ್ ವೈಫಲ್ಯದಂತಹ ಸಮಸ್ಯೆಗಳನ್ನು ಸಚಿವರ ಮುಂದೆ ಪ್ರಸ್ತಾಪಿಸಿದರು. ಅಧಿಕಾರಿಗಳು ರೈತರ ಸಮಸ್ಯೆಗಳಿಗೆ ತ್ವರಿತ ಸ್ಪಂದನೆ ನೀಡಬೇಕು ಹಾಗೂ ಸರ್ಕಾರದ ಎಲ್ಲಾ ಸೌಲಭ್ಯಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ ಕ್ರಮವಹಿಸಬೇಕು ಎಂದು ಸಚಿವರು ಸೂಚನೆ ನೀಡಿದರು.

ಬರ ಪರಿಸ್ಥಿತಿ ಹಿನ್ನೆಲೆಯಲ್ಲಿ ಕೃಷಿ, ತೋಟಗಾರಿಕೆ ಹಾಗೂ ಕಂದಾಯ ಇಲಾಖೆಯ ಅಧಿಕಾರಿಗಳು ಗ್ರಾಮ ಮಟ್ಟದಲ್ಲಿ ನಿರಂತರವಾಗಿ ಪರಿಸ್ಥಿತಿಯ ಮೇಲೆ ನಿಗಾ ವಹಿಸಿ ಅಗತ್ಯ ವರದಿಗಳನ್ನು ಸರ್ಕಾರಕ್ಕೆ ಸಲ್ಲಿಸುವಂತೆ ಸಚಿವರು ನಿರ್ದೇಶನ ನೀಡಿದರು.

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಡಾ.ಕೆಎನ್.ಅನುರಾಧ, ಜಿಪಂ ಸಿಇಒ ಡಾ.ವಾಸಂತಿ ಅಮರ್, ತಹಸೀಲ್ದಾರ್ ಶೀತಲ್ ಸೇರಿದಂತೆ ಕೃಷಿ ಇಲಾಖೆ ಅಧಿಕಾರಿಗಳು, ತೋಟಗಾರಿಕೆ ಇಲಾಖೆ ಅಧಿಕಾರಿಗಳು, ತಾಲೂಕು ಆಡಳಿತದ ಸಿಬ್ಬಂದಿ, ಜನಪ್ರತಿನಿಧಿಗಳು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.ಫೋಟೋ: 7 ಹೆಚ್‌ಎಸ್‌ಕೆ 1

ಹೊಸಕೋಟೆ ತಾಲೂಕಿನ ನಂದಗುಡಿ, ಹಿಂಡಿಗನಾಳ ಹಾಗೂ ಎನ್.ಹೊಸಹಳ್ಳಿ ಗ್ರಾಮಗಳಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್.ಮುನಿಯಪ್ಪ, ಶಾಸಕ ಶರತ್ ಬಚ್ಚೇಗೌಡ ಬರ ಪರಿಸ್ಥಿತಿ ಅಧ್ಯಯನದ ವೇಳೆ ರೈತರೊಂದಿಗೆ ಸಂವಾದ ನಡೆಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕೆರಗೋಡು ಕಾಲೇಜಿನಲ್ಲಿ ಸಹಪಠ್ಯ ಚಟುವಟಿಕೆಗಳ ಉದ್ಘಾಟನೆ
ಜ್ವಲಂತ ಸಮಸ್ಯೆಗಳ ಪರಿಹಾರಕ್ಕೆ ಆಗ್ರಹಿಸಿ ಪರಿವರ್ತನೆಗಾಗಿ ಪಾದಯಾತ್ರೆ