ಸ್ವ ಸಹಾಯಸಂಘದಿಂದ ಮಹಿಳೆಯರ ಆರ್ಥಿಕಮಟ್ಟ ಸುಧಾರಣೆ: ಶ್ರೀನಿವಾಸ ರಾವ್‌

KannadaprabhaNewsNetwork | Published : Feb 14, 2025 12:31 AM

ಸಾರಾಂಶ

ಕೌಶಾಲಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಅಭಿಯಾನ, ಜಿಲ್ಲಾ ಪಂಚಾಯಿತಿ ಉಡುಪಿ, ಹೆಬ್ರಿ ತಾಲೂಕು ಪಂಚಾಯಿತಿ ಹೆಬ್ರಿ, ಗ್ರಾಮ ಪಂಚಾಯಿತಿ ಹೆಬ್ರಿ ಹಾಗೂ ಹೆಬ್ಬೇರಿ ಸಂಜೀವಿನಿ ತಾಲೂಕು ಮಟ್ಟದ ಒಕ್ಕೂಟ ಹೆಬ್ರಿ ಸಂಯುಕ್ತ ಆಶ್ರಯದಲ್ಲಿ ಜಿಲ್ಲಾಮಟ್ಟದ ಸಂಜೀವಿನಿ ಮಾರಾಟ ಮೇಳ ಕಾರ್ಯಕ್ರಮ ನಡೆಯಿತು.

ಹೆಬ್ರಿ: ಜಿಲ್ಲಾಮಟ್ಟದ ಸಂಜೀವಿನಿ ಮಾರಾಟ ಮೇಳ

ಕನ್ನಡಪ್ರಭ ವಾರ್ತೆ ಕಾರ್ಕಳ

ಮಹಿಳೆಯರು ತಮ್ಮ ಆರ್ಥಿಕ ಮಟ್ಟ ಸುಧಾರಣೆಗಾಗಿ ಸಂಜೀವಿನಿ ಸ್ವ ಸಹಾಯ ಸಂಘಗಳ ಮೂಲಕ ಸಂಘಟಿತರಾಗಿ ಎಂದು ಉಡುಪಿ ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಶ್ರೀನಿವಾಸ ರಾವ್ ಹೇಳಿದರು.

ಅವರು ಕೌಶಾಲಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಅಭಿಯಾನ, ಜಿಲ್ಲಾ ಪಂಚಾಯಿತಿ ಉಡುಪಿ, ಹೆಬ್ರಿ ತಾಲೂಕು ಪಂಚಾಯಿತಿ ಹೆಬ್ರಿ, ಗ್ರಾಮ ಪಂಚಾಯಿತಿ ಹೆಬ್ರಿ ಹಾಗೂ ಹೆಬ್ಬೇರಿ ಸಂಜೀವಿನಿ ತಾಲೂಕು ಮಟ್ಟದ ಒಕ್ಕೂಟ ಹೆಬ್ರಿ ಸಂಯುಕ್ತ ಆಶ್ರಯದಲ್ಲಿ ನಡೆದ ಜಿಲ್ಲಾಮಟ್ಟದ ಸಂಜೀವಿನಿ ಮಾರಾಟ ಮೇಳ ಕಾರ್ಯಕ್ರಮದಲ್ಲಿ ಮಾತನಾಡಿದರು.

ಹೆಬ್ರಿ ಪೊಲೀಸ್ ಠಾಣಾಧಿಕಾರಿ ಮಹೇಶ್ ಟಿ.ಎಂ. ಮಾತನಾಡಿ, ಭಾರತದಲ್ಲಿ ಮಹಿಳೆಯರ ಮೇಲೆ ಹೆಚ್ಚುತ್ತಿರುವ ದೌರ್ಜನ್ಯಗಳನ್ನು ತಡೆಯಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಎಂದು ಮಹಿಳೆಯರಿಗೆ ಧೈರ್ಯ ತುಂಬಿದರು.

ಹೆಬ್ರಿಯ ತಾ.ಪಂ. ಕಾರ್ಯನಿರ್ವಾಹಕ ಅಧಿಕಾರಿ ಶಶಿಧರ್ ಕೆ.ಜೆ. ಮಾತನಾಡಿ, ಹೆಬ್ರಿ ತಾಲೂಕಿನ ಸಂಜೀವಿನಿ ಮಹಿಳೆಯರು ರಾಷ್ಟ್ರಮಟ್ಟದಲ್ಲಿ ಗುರುತಿಸಿಕೊಂಡಿರುವುದು ಹೆಮ್ಮೆಯ ವಿಚಾರವಾಗಿದೆ. ಸ್ಥಳೀಯ ಸಂಜೀವಿನಿ ಮಹಿಳೆಯರಿಗೆ ನೆರವಾಗಲು ಸೋಮೇಶ್ವರದಲ್ಲಿ ಅಕ್ಕಾ ಕೆಫೆ ಸೇರಿದಂತೆ ಹೆಚ್ಚಿನ ನೆರವನ್ನು ನೀಡುವಂತೆ ಜಿಲ್ಲಾಡಳಿತಕ್ಕೆ ಮನವಿ ಮಾಡಿದರು.

ಹೆಬ್ರಿ ಗ್ರಾಮ ಪಂ ಅಧ್ಯಕ್ಷ ತಾರಾನಾಥ ಬಂಗೇರ ಅಧ್ಯಕ್ಷ ತೆ ವಹಿಸಿದರು. ಕೆನರಾ ಬ್ಯಾಂಕ್ ಜಿಲ್ಲಾ ಮುಖ್ಯ ಪ್ರಬಂಧಕ ಹರೀಶ್ ಜಿ. ಬ್ರಹ್ಮಾವರ, ರುಡ್ ಸೆಡ್ ನಿರ್ದೇಶಕ ಲಕ್ಷ್ಮೀಶ್ ಮಾತನಾಡಿದರು. ಕಾಪು ತಾಲೂಕು ಕಾರ್ಯನಿರ್ವಾಹಕ ಅಧಿಕಾರಿ ಜೇಮ್ಸ್ ಡಿಸಿಲ್ವಾ, ಹೆಬ್ರಿ ಗ್ರಾ.ಪಂ.ನ ಸದಾಶಿವ ಸೇರ್ವೆಗಾರ್ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಸಂಜಿವಿನಿ ಒಕ್ಕೂಟದ ಸದಸ್ಯೆ ಸಾಧಕಿ ಸುಗಂಧಿ‌ ನಾಯ್ಕ್ ಶಿವಪುರ ಅವರನ್ನು ಸನ್ಮಾನಿಸಲಾಯಿತು. ಪ್ರಸಾದ್ ಕಾರ್ಯಕ್ರಮ ನಿರೂಪಿಸಿದರು.ಹೆಬ್ರಿ ಹಾಗೂ ಹೆಬ್ಬೇರಿ ಸಂಜೀವಿನಿ ತಾಲೂಕು ಮಟ್ಟದ ಒಕ್ಕೂಟ ಅಧ್ಯಕ್ಷೆ ಸುಜಾತ ಎಸ್. ಕುಮಾರ್ ಸ್ವಾಗತಿಸಿದರು. ಜಿಲ್ಲಾಮಟ್ಟದ ಮಾರಾಟ ಮೇಳದಲ್ಲಿ ವಿವಿಧ ಗ್ರಾ.ಪಂ.ಗಳ ಒಟ್ಟು 22 ಮಳಿಗೆಗಳು ಪಾಲ್ಗೊಂಡಿದ್ದವು. ಇದೇ ಸಂದರ್ಭದಲ್ಲಿ ಫಲಾನುಭವಿಗಳಿಗೆ ಸವಲತ್ತುಗಳನ್ನು ಹಂಚಲಾಯಿತು.

ಸಂಜೀವಿನಿ ಮಹಿಳೆಯರು ಸೇರಿದಂತೆ ಅತಿಥಿಗಳನ್ನು ಚೆಂಡೆ ಹಾಗೂ ಪೂರ್ಣ ಕುಂಭ ಮೂಲಕ ಹೆಬ್ರಿ ಬಸ್ ನಿಲ್ದಾಣದಿಂದ ರಾಮಮಂದಿರ ವರೆಗೆ ಮೆರವಣಿಗೆ ಮೂಲಕ ಕರೆತರಲಾಯಿತು.

Share this article