ಕನ್ನಡಪ್ರಭ ವಾರ್ತೆ ಮಂಡ್ಯ
ರೋಟರಿ ಕ್ಲಬ್ ಆಫ್ ಬೆಂಗಳೂರು ಮತ್ತು ಅಲೋಕಾ ವಿಷನ್ ಪ್ರೋಗ್ರಾಂ ಪ್ರಾಯೋಜಕತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ಚಾಲಕರಿಗೆ ಸಮಗ್ರ ಕಣ್ಣಿನ ತಪಾಸಣೆ ನಡೆಸಿ ಕನ್ನಡಕ ವಿತರಿಸಲಾಯಿತು. ಮಂಡ್ಯ ಸಕ್ಕರೆ ಕಾರ್ಖಾನೆ ಅಧ್ಯಕ್ಷ ಸಿ.ಡಿ.ಗಂಗಾಧರ್, ಮಂಡ್ಯ ಲಾರಿ ಮಾಲೀಕರ ಸಂಘದ ಅಧ್ಯಕ್ಷ ಸತ್ಯಾನಂದ ಉಪಸ್ಥಿತರಿದ್ದರು.
ಆಪ್ರೋಮೆಟ್ರಿ ಕಾನ್ಫೆಡರೇಶನ್ ಆಫ್ ಇಂಡಿಯಾ ಸಿಇಒ ಲಕ್ಷ್ಮಿ ಶಿಂಧೆ ಮಾತನಾಡಿ, ೨೦೨೩ರಲ್ಲಿ ರಸ್ತೆ ಅಪಘಾತಗಳಲ್ಲಿ ೧.೭ ಲಕ್ಷಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ. ರಾಜ್ಯಗಳು ಕೇಂದ್ರ ಸರ್ಕಾರದೊಂದಿಗೆ ಹಂಚಿಕೊಂಡ ಅಂಕಿ-ಅಂಶಗಳ ಪ್ರಕಾರ, ಪ್ರತಿದಿನ ಸರಾಸರಿ ೪೭೪ ಮಂದಿ ಅಪಘಾತದಲ್ಲಿ ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಅಂದರೆ ಪ್ರತಿ ಮೂರು ನಿಮಿಷಕ್ಕೆ ಒಂದು ಸಾವು ಸಂಭವಿಸುತ್ತಿದೆ ಎಂದು ಆತಂಕ ವ್ಯಕ್ತಪಡಿಸಿದರು.ಭಾರತದಲ್ಲಿ ರಸ್ತೆ ಅಪಘಾತಗಳಿಗೆ ದೃಷ್ಟಿ ಸಂಬಂಧಿತ ಸಮಸ್ಯೆಗಳು ಒಂದು ಕಾರಣವಾಗಿದೆ. ಇದು ಚಾಲನೆಯ ಮೇಲೆ ಪರಿಣಾಮ ಬೀರುವ ಅಂಶವಾಗಿದೆ. ಕರ್ನಾಟಕದ ೩೦ ಜಿಲ್ಲೆಗಳ ಟ್ರಕ್ ಚಾಲಕರ ಸಮಗ್ರ ಕಣ್ಣಿನ ಪರೀಕ್ಷೆಗಳೊಂದಿಗೆ ಈ ಸ್ಕ್ರೀನಿಂಗ್ಗಳನ್ನು ನಡೆಸಲು ಫೆಡರೇಶನ್ ಆಫ್ ಕರ್ನಾಟಕ ಲಾರಿ ಮಾಲೀಕರ ಸಂಘದೊಂದಿಗೆ ಪಾಲುದಾರರಾಗಲು ನಾವು ತುಂಬಾ ಸಂತೋಷಪಡುತ್ತೇವೆ. ಮುಂದಿನ ೩-೬ ತಿಂಗಳಲ್ಲಿ ಸುಮಾರು ೧೫,೦೦೦ ಟ್ರಕ್ ಚಾಲಕರ ಕಣ್ಣಿನ ಪರೀಕ್ಷೆ ನಡೆಸುವ ಗುರಿ ಹೊಂದಿದ್ದೇವೆ ಮತ್ತು ಮುಂದಿನ ವರ್ಷದ ಆರಂಭದಲ್ಲಿ ನಮ್ಮ ಸಂಶೋಧನೆಗಳನ್ನು ಸಾರಿಗೆ ಸಚಿವಾಲಯಕ್ಕೆ ಹಸ್ತಾಂತರಿಸುತ್ತೇವೆ ಎಂದರು.
ಡಾ.ಪ್ರೇಮ್ ಜೀತ್ ಮೂಡುಬಿದಿರೆ ಜೀಸ್, ರೋಟರಿ ಕ್ಲಬ್ ಆಫ್ ಬೆಂಗಳೂರು ಅಧ್ಯಕ್ಷೆ ಗೌರಿ ಇತರರಿದ್ದರು.