೨೦೨೩ರಲ್ಲಿ ದೇಶದಲ್ಲಿ ಅಪಘಾತಕ್ಕೆ ೧.೭ ಲಕ್ಷ ಜನ ಬಲಿ..!

KannadaprabhaNewsNetwork |  
Published : Nov 06, 2024, 11:57 PM IST
೬ಕೆಎಂಎನ್‌ಡಿ-೪ಫೆಡರೇಷನ್ ಆಫ್ ಕರ್ನಾಟಕ ಲಾರಿ ಓನರ್ಸ್ ಅಸೋಸಿಯೇಷನ್ ಸಹಯೋಗದೊಂದಿಗೆ ಆಪ್ರೋಮೆಟ್ರಿ ಕಾನ್ಫೆಡರೇಷನ್ ಆಫ್ ಇಂಡಿಯಾ ಪ್ರಾರಂಭಿಸಿದ ಚಾಲಕರ ನೇತ್ರ ತಪಾಸಣೆ ನಡೆಯಿತು. | Kannada Prabha

ಸಾರಾಂಶ

೨೦೨೩ರಲ್ಲಿ ರಸ್ತೆ ಅಪಘಾತಗಳಲ್ಲಿ ೧.೭ ಲಕ್ಷಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ. ರಾಜ್ಯಗಳು ಕೇಂದ್ರ ಸರ್ಕಾರದೊಂದಿಗೆ ಹಂಚಿಕೊಂಡ ಅಂಕಿ-ಅಂಶಗಳ ಪ್ರಕಾರ, ಪ್ರತಿದಿನ ಸರಾಸರಿ ೪೭೪ ಮಂದಿ ಅಪಘಾತದಲ್ಲಿ ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಅಂದರೆ ಪ್ರತಿ ಮೂರು ನಿಮಿಷಕ್ಕೆ ಒಂದು ಸಾವು ಸಂಭವಿಸುತ್ತಿದೆ.

ಕನ್ನಡಪ್ರಭ ವಾರ್ತೆ ಮಂಡ್ಯ

ಫೆಡರೇಷನ್ ಆಫ್ ಕರ್ನಾಟಕ ಲಾರಿ ಓನರ್ಸ್ ಅಸೋಸಿಯೇಷನ್ ಸಹಯೋಗದೊಂದಿಗೆ ಆಪ್ರೋಮೆಟ್ರಿ ಕಾನ್ಫೆಡರೇಷನ್ ಆಫ್ ಇಂಡಿಯಾ ಪ್ರಾರಂಭಿಸಿದ ಚಾಲಕರ ನೇತ್ರ ತಪಾಸಣೆ ಕಾರ್ಯಕ್ರಮದಲ್ಲಿ ಮಂಡ್ಯದ ೫೫೦ಕ್ಕೂ ಹೆಚ್ಚು ಹೆವಿ ಟ್ರಕ್ ಚಾಲಕರ ಕಣ್ಣು ಪರೀಕ್ಷಿಸಲಾಯಿತು.

ರೋಟರಿ ಕ್ಲಬ್ ಆಫ್ ಬೆಂಗಳೂರು ಮತ್ತು ಅಲೋಕಾ ವಿಷನ್ ಪ್ರೋಗ್ರಾಂ ಪ್ರಾಯೋಜಕತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ಚಾಲಕರಿಗೆ ಸಮಗ್ರ ಕಣ್ಣಿನ ತಪಾಸಣೆ ನಡೆಸಿ ಕನ್ನಡಕ ವಿತರಿಸಲಾಯಿತು. ಮಂಡ್ಯ ಸಕ್ಕರೆ ಕಾರ್ಖಾನೆ ಅಧ್ಯಕ್ಷ ಸಿ.ಡಿ.ಗಂಗಾಧರ್, ಮಂಡ್ಯ ಲಾರಿ ಮಾಲೀಕರ ಸಂಘದ ಅಧ್ಯಕ್ಷ ಸತ್ಯಾನಂದ ಉಪಸ್ಥಿತರಿದ್ದರು.

ಆಪ್ರೋಮೆಟ್ರಿ ಕಾನ್ಫೆಡರೇಶನ್ ಆಫ್ ಇಂಡಿಯಾ ಸಿಇಒ ಲಕ್ಷ್ಮಿ ಶಿಂಧೆ ಮಾತನಾಡಿ, ೨೦೨೩ರಲ್ಲಿ ರಸ್ತೆ ಅಪಘಾತಗಳಲ್ಲಿ ೧.೭ ಲಕ್ಷಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ. ರಾಜ್ಯಗಳು ಕೇಂದ್ರ ಸರ್ಕಾರದೊಂದಿಗೆ ಹಂಚಿಕೊಂಡ ಅಂಕಿ-ಅಂಶಗಳ ಪ್ರಕಾರ, ಪ್ರತಿದಿನ ಸರಾಸರಿ ೪೭೪ ಮಂದಿ ಅಪಘಾತದಲ್ಲಿ ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಅಂದರೆ ಪ್ರತಿ ಮೂರು ನಿಮಿಷಕ್ಕೆ ಒಂದು ಸಾವು ಸಂಭವಿಸುತ್ತಿದೆ ಎಂದು ಆತಂಕ ವ್ಯಕ್ತಪಡಿಸಿದರು.

ಭಾರತದಲ್ಲಿ ರಸ್ತೆ ಅಪಘಾತಗಳಿಗೆ ದೃಷ್ಟಿ ಸಂಬಂಧಿತ ಸಮಸ್ಯೆಗಳು ಒಂದು ಕಾರಣವಾಗಿದೆ. ಇದು ಚಾಲನೆಯ ಮೇಲೆ ಪರಿಣಾಮ ಬೀರುವ ಅಂಶವಾಗಿದೆ. ಕರ್ನಾಟಕದ ೩೦ ಜಿಲ್ಲೆಗಳ ಟ್ರಕ್ ಚಾಲಕರ ಸಮಗ್ರ ಕಣ್ಣಿನ ಪರೀಕ್ಷೆಗಳೊಂದಿಗೆ ಈ ಸ್ಕ್ರೀನಿಂಗ್‌ಗಳನ್ನು ನಡೆಸಲು ಫೆಡರೇಶನ್ ಆಫ್ ಕರ್ನಾಟಕ ಲಾರಿ ಮಾಲೀಕರ ಸಂಘದೊಂದಿಗೆ ಪಾಲುದಾರರಾಗಲು ನಾವು ತುಂಬಾ ಸಂತೋಷಪಡುತ್ತೇವೆ. ಮುಂದಿನ ೩-೬ ತಿಂಗಳಲ್ಲಿ ಸುಮಾರು ೧೫,೦೦೦ ಟ್ರಕ್ ಚಾಲಕರ ಕಣ್ಣಿನ ಪರೀಕ್ಷೆ ನಡೆಸುವ ಗುರಿ ಹೊಂದಿದ್ದೇವೆ ಮತ್ತು ಮುಂದಿನ ವರ್ಷದ ಆರಂಭದಲ್ಲಿ ನಮ್ಮ ಸಂಶೋಧನೆಗಳನ್ನು ಸಾರಿಗೆ ಸಚಿವಾಲಯಕ್ಕೆ ಹಸ್ತಾಂತರಿಸುತ್ತೇವೆ ಎಂದರು.

ಕರ್ನಾಟಕ ಲಾರಿ ಮಾಲೀಕರ ಸಂಘದ ನವೀನ್ ರೆಡ್ಡಿ ಮಾತನಾಡಿ, ವಯಸ್ಸಾದಂತೆ ನಿಮ್ಮ ಕಣ್ಣು ದೃಷ್ಟಿ ಸಮಸ್ಯೆ ಎದುರಿಸುವುದು ಸಹಜ. ರಾತ್ರಿಯಲ್ಲಿ, ಮಂಜಿನ ದಿನಗಳಲ್ಲಿ ಮತ್ತು ಚಳಿಗಾಲದಲ್ಲಿ ವಾಹನ ಚಲಾಯಿಸುವುದು ಸವಾಲಿನ ಸಂಗತಿಯಾಗಿದೆ. ನಿಮಗೆ ದೃಷ್ಟಿ ಸಮಸ್ಯೆ ಇದ್ದರೆ, ಚಾಲನೆ ಇನ್ನಷ್ಟು ಅಪಾಯಕಾರಿಯಾಗುತ್ತದೆ. ೨೦೨೩ ರಲ್ಲಿ, ರಾಜ್ಯಾದ್ಯಂತ ರಸ್ತೆ ಅಪಘಾತಗಳಲ್ಲಿ ಪ್ರತಿದಿನ ಸರಾಸರಿ ೩೪ ಜನರು ಸಾವನ್ನಪ್ಪಿದ್ದಾರೆ. ಆದ್ದರಿಂದ ಚಾಲಕರಿಗೆ ಪ್ರಯೋಜನವಾಗುವ ಸಮಗ್ರ ಕಣ್ಣು ತಪಾಸಣೆ ಕಾರ್ಯಕ್ರಮ ಅವಶ್ಯವಾಗಿದೆ ಎಂದು ತಿಳಿಸಿದರು.

ಡಾ.ಪ್ರೇಮ್ ಜೀತ್ ಮೂಡುಬಿದಿರೆ ಜೀಸ್, ರೋಟರಿ ಕ್ಲಬ್ ಆಫ್ ಬೆಂಗಳೂರು ಅಧ್ಯಕ್ಷೆ ಗೌರಿ ಇತರರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಓದಿನಲ್ಲಿ ತಲ್ಲೀನತೆ ಇದ್ದರೆ ಕೆಟ್ಟ ಆಲೋಚನೆಗಳು ದೂರ: ಓಂಕಾರನಾಯ್ಕ
ರಾಷ್ಟ್ರೀಯ ಹೆದ್ದಾರೀಲಿ ಖಾಸಗಿ ಬಸ್‌ ಭಸ್ಮ