ಕನ್ನಡಪ್ರಭ ವಾರ್ತೆ ಬಾಗೇಪಲ್ಲಿ
ಪಟ್ಟಣದ ತಹಸೀಲ್ದಾರ್ ವಸತಿ ಗೃಹದ ಆವರಣದಲ್ಲಿ ಸುಮಾರು 80 ಲಕ್ಷ ರು.ಗಳ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಇಂದಿರಾ ಕ್ಯಾಂಟೀನ್ ಕಟ್ಟಡ ನಿರ್ಮಾಣ ಕಾಮಗಾರಿಗೆ ಪೂಜೆ ಸಲ್ಲಿಸಿ ಮಾತನಾಡಿ, ತಾಲೂಕಿನ ಜನರ ಬಹುದಿನಗಳ ಬೇಡಿಕೆಯಂತೆ ಇಲ್ಲಿ 80 ಲಕ್ಷ ರು.ಗಳ ವೆಚ್ಚದಲ್ಲಿ ಇಂದಿರಾ ಕ್ಯಾಂಟೀನ್ನ್ನು ಒಂದು ತಿಂಗಳೊಳಗೆ ಪ್ರಾರಂಭಿಸಲಾಗುವುದು. ಈ ಕ್ಯಾಂಟೀನಲ್ಲಿ ಬೆಳಗ್ಗೆ ಉಪಹಾರ, ಮಧ್ಯಾಹ್ನ ಮತ್ತು ಸಂಜೆ ಊಟ ರಿಯಾಯಿತಿ ದರದಲ್ಲಿ ಸಿಗಲಿದೆ ಎಂದರು.
ತಹಸೀಲ್ದಾರ್ ನಿವಾಸದ ಬಳಿ ಸ್ಥಾಪನೆಪಟ್ಟಣದ ಎಸ್ ಬಿ ಎಂ ರಸ್ತೆಯಲ್ಲಿನ ಸಂತೆ ಮೈದಾನದಲ್ಲಿ ಇಂದಿರಾ ಕ್ಯಾಂಟೀನ್ ಪ್ರಾರಂಭಕ್ಕೆ ಎಲ್ಲಾ ಸಿದ್ಧತೆ ನಡೆದಿತ್ತು. ಆದರೆ ಕೆಲವು ಕಾರಣಾಂತರಗಳಿಂದ ಕಾಮಗಾರಿ ನಿಲ್ಲಿಸಬೇಕಾಯಿತು. ನಂತರ ಕ್ಯಾಂಟೀನ್ ಪ್ರಾರಂಭಿಸಲು ಪಟ್ಟಣದ ವಿವಿಧ ಕಡೆಗಳಲ್ಲಿ ಜಾಗ ಹುಡುಕಾಟದಿಂದ ತಡವಾಗಿದೆ. ನಂತರ ತಹಸೀಲ್ದಾರ್ ವಸತಿ ಗೃಹದ ಆವರಣದಲ್ಲಿ ಕ್ಯಾಂಟೀನ್ ನಿರ್ಮಾಣಕ್ಕೆ ಜಾಗ ಸಿಕ್ಕಿದೆ. ಈ ನಿಟ್ಟಿನಲ್ಲಿ ಇನ್ನೂ ಕೇವಲ ಒಂದು ತಿಂಗಳ ಒಳಗೆ ಜನರಿಗೆ ಇಲ್ಲಿ ಊಟ ತಿಂಡಿ ಸಿಗಲಿದೆ ಎಂದರು.
ಇಲ್ಲರಿಗೂ ಪ್ರತಿಭಟಿಸುವ ಹಕ್ಕು ಇದೆ
ಪಟ್ಟಣದಲ್ಲಿ ನಡೆದ ಇಂದಿರಾ ಕ್ಯಾಂಟೀನ್ ಕಾಮಗಾರಿಗೆ ಪೂಜಾ ಕಾರ್ಯಕ್ರಮದಲ್ಲಿ ಪುರಸಭೆ ಸದಸ್ಯರು ಗೈರು ಹಾಜರಿಯಾಗಿರುವುದು ಕಾಣುತ್ತಿತ್ತು.
ಈ ಸಂದರ್ಭದಲ್ಲಿ ತಹಸೀಲ್ದಾರ್ ಪ್ರಶಾಂತ್ ಕೆ ಪಾಟಿಲ್, ಪುರಸಭೆ ಮುಖ್ಯಾಧಿಕಾರಿ ರುದ್ರಮ್ಮ ಶರಣಪ್ಪ, ಪುರಸಭೆ ಸದಸ್ಯ ಗಡ್ಡಂ ರಮೇಶ್ ಮುಖಂಡರಾದ ಪಿ. ಮಂಜುನಾಥರೆಡ್ಡಿ, ಆಂಜನೇಯರೆಡ್ಡಿ, ಎ.ವಿ. ಪೂಜಪ್ಪ ಮತ್ತಿತರರು ಇದ್ದರು.