ಚಾಲುಕ್ಯರ ನಾಡಲ್ಲಿ ಕಾಂಗ್ರೆಸ್‌ಗೆ ಪುರಸಭೆ ಪಟ್ಟ

KannadaprabhaNewsNetwork |  
Published : Sep 01, 2024, 01:47 AM IST
ಸಸಸ | Kannada Prabha

ಸಾರಾಂಶ

ನಿರೀಕ್ಷೆಯಂತೆ ಅಧಿಕ ಸಂಖ್ಯಾಬಲ ಹೊಂದಿದ್ದ ಕಾಂಗ್ರೆಸ್ ಈ ಬಾರಿ ಬಾದಾಮಿ ಪುರಸಭೆಯಲ್ಲಿ ಅಧಿಕಾರದ ಚುಕ್ಕಾಣಿ ಹಿಡಿಯಿತು.

ಕನ್ನಡಪ್ರಭ ವಾರ್ತೆ ಬಾದಾಮಿ

ನಿರೀಕ್ಷೆಯಂತೆ ಅಧಿಕ ಸಂಖ್ಯಾಬಲ ಹೊಂದಿದ್ದ ಕಾಂಗ್ರೆಸ್‌ ಈ ಬಾರಿ ಬಾದಾಮಿ ಪುರಸಭೆಯಲ್ಲಿ ಅಧಿಕಾರದ ಚುಕ್ಕಾಣಿ ಹಿಡಿಯಿತು. ಅಧ್ಯಕ್ಷ-ಉಪಾಧ್ಯಕ್ಷ ಸಾಮಾನ್ಯ ವರ್ಗಕ್ಕೆ ಮೀಸಲಾಗಿತ್ತು. ಎರಡು ಸ್ಥಾನಗಳಿಗೆ ಚುನಾವಣೆ ಪುರಸಭೆಯ ಸಭಾ ಭವನದಲ್ಲಿ ಶನಿವಾರ ಜರುಗಿತು. ಕಾಂಗ್ರೆಸ್ ಪಕ್ಷದ ಸದಸ್ಯ ಪಾಂಡಪ್ಪ ಎಂ.ಕಟ್ಟಿಮನಿ ಅಧ್ಯಕ್ಷ ಸ್ಥಾನಕ್ಕೆ, ಉಪಾಧ್ಯಕ್ಷ ಸ್ಥಾನಕ್ಕೆ ಲಕ್ಷ್ಮೀಬಾಯಿ ಪಿ. ಕಮ್ಮಾರ ಆಯ್ಕೆಗೊಂಡರು.

ನಗರದ ಪುರಸಭೆ 23 ಸದಸ್ಯರ ಬಲ ಹೊಂದಿದೆ. ಅದರಲ್ಲಿ 13 ಕಾಂಗ್ರೆಸ್‌ ಸದಸ್ಯರು, 10 ಕಾಂಗ್ರೆಸ್‌ ಸದಸ್ಯ ಇದ್ದಾರೆ. ಅಧ್ಯಕ್ಷ-ಉಪಾಧ್ಯಕ್ಷ ಚುನಾಣೆಯಲ್ಲಿ 13 ಕಾಂಗ್ರೆಸ್‌ ಸದಸ್ಯರು ಹಾಗೂ ಶಾಸಕರ ಮತವನ್ನು ಹಿಡಿದು ತಲಾ 14 ಮತಗಳನ್ನು ಪಡೆಯುವ ಮೂಲಕ ಆಯ್ಕೆಯಾದರೆಂದು ಚುನಾವಣಾಧಿಕಾರಿ ತಹಸೀಲ್ದಾರ್ ಜೆ.ಬಿ.ಮಜ್ಜಗಿ ಘೋಷಿಸಿದರು.

ಬಿಜೆಪಿಯಿಂದ ಅಧ್ಯಕ್ಷ ಸ್ಥಾನಕ್ಕೆ ಕಾವ್ಯಶ್ರೀ ಚಂದ್ರಶೇಖರಯ್ಯ ಹಿರೇಮಠ, ಉಪಾಧ್ಯಕ್ಷ ಸ್ಥಾನಕ್ಕೆ ಅಶೋಕ ಯಲಿಗಾರ ತಮ್ಮ ನಾಮಪತ್ರ ಸಲ್ಲಿಕೆ ಮಾಡಿ ತಲಾ 10 ಮತಗಳನ್ನು ಪಡೆಯುವ ಮೂಲಕ ಪರಾಭವಗೊಂಡರು.

ಈ ಸಂದರ್ಭದಲ್ಲಿ ಮುಖ್ಯಾಧಿಕಾರಿ ಬಂದೆನವಾಜ ಡಾಂಗೆ ಹಾಗೂ 23 ಜನ ಸದಸ್ಯರು ಉಪಸ್ಥಿತರಿದ್ದರು. ಡಿವೈಎಸ್‌ಪಿ ವಿಶ್ವನಾಥ ಕುಲಕರ್ಣಿ, ಸಿಪಿಐ ಕರಿಯಪ್ಪ ಬನ್ನೆ, ಪಿಎಸ್‌ಐ ವಿಠ್ಠಲ ನಾಯಕ, ಕ್ರೈಂ ಪಿಎಸ್‌ಐ ವಿಜಯಕುಮಾರ ರಾಠೋಡ ಹಾಗೂ ಸಿಬ್ಬಂದಿ ಬಿಗಿ ಬಂದೋಬಸ್ತ್ ಒದಗಿಸಿದ್ದರು.

----

ಕೋಟ್

ಇತಿಹಾಸ ಪ್ರಸಿದ್ಧಿಯಾಗಿರುವ ಬಾದಾಮಿ ಪುರಸಭೆಗೆ ಅಧ್ಯಕ್ಷನಾಗಿ ಆಯ್ಕೆಯಾದದ್ದು, ನಮ್ಮೆಲ್ಲ ಪಕ್ಷದ ಸದಸ್ಯರು ಹಾಗೂ ಶಾಸಕರಾದ ಭೀಮಸೇನ ಚಿಮ್ಮನಕಟ್ಟಿ ಅವರ ಮಾರ್ಗದರ್ಶನದಲ್ಲಿ ಪಕ್ಷಾತೀತವಾಗಿ ನಗರದ ಅಭಿವೃದ್ಧಿಗೆ ಶ್ರಮಿಸುತ್ತೇನೆ.

-ಪಾಂಡು ಕಟ್ಟಿಮನಿ, ನೂತನ ಬಾದಾಮಿ ಪುರಸಭೆ ಅಧ್ಯಕ್ಷ--

---

ಐತಿಹಾಸಿಕ ನಗರ ಬಾದಾಮಿ ಪ್ರವಾಸಿತಾಣವಾಗಿರುವುದರಿಂದ ಇಲ್ಲಿ ಸಾಕಷ್ಟು ಅಭಿವೃದ್ಧಿ ಕೆಲಸಗಳು ಆಗಬೇಕಾಗಿದೆ. ಕಳೆದ ಬಾರಿ ಸಿದ್ದರಾಮಯ್ಯನವರು ಬಾದಾಮಿ ಶಾಸಕರಾಗಿದ್ದು ಈಗ ಅವರೇ ಮುಖ್ಯಮಂತ್ರಿಗಳು. ಬಾದಾಮಿ ಕ್ಷೇತ್ರದ ಬಗ್ಗೆ ವಿಶೇಷ ಕಾಳಜಿ ಅವರಿಗಿದೆ. ನಾನು ಸ್ಥಳೀಯ ಶಾಸಕನಾಗಿ ಎಲ್ಲ ಸದಸ್ಯರೊಂದಿಗೆ ಸಮಾಲೋಚಣೆ ಮಾಡುವುದರ ಮೂಲಕ ಹೆಚ್ಚಿನ ಅನುದಾನವನ್ನು ತರುವುದರೊಂದಿಗೆ ಬಾದಾಮಿ ನಗರದ ಮೂಲ ಭೂತ ಸೌಲಭ್ಯಗಳನ್ನು ನೀಡುವುದಕ್ಕೆ ಎಲ್ಲರೂ ಒಗ್ಗಟ್ಟಿನಿಂದ ಶ್ರಮಿಸುತ್ತೇವೆ.

-ಭೀಮಸೇನ ಚಿಮ್ಮನಕಟ್ಟಿ ಬಾದಾಮಿ ಶಾಸಕ

PREV

Recommended Stories

ದ.ಕ.ದಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಸಮೀಕ್ಷೆಗೆ ಚಾಲನೆ
ಕದ್ರಿ ದೇವಸ್ಥಾನ ಪ್ರಾಂಗಣದಲ್ಲಿ ‘ಮುದ್ದು ಕೃಷ್ಣ’ ವೇಷ ಸ್ಪರ್ಧೆ