ಕನ್ನಡಪ್ರಭ ವಾರ್ತೆ ಚಾಮರಾಜನಗರ
ಭಯ ಭಕ್ತಿಯಿಂದ ಈ ಹಬ್ಬ ಆಚರಿಸಲಿದ್ದು ಪೂಜೆಯಾಗುವರರೆಗೂ ಒಂದು ಹನಿ ನೀರನ್ನು ಕುಡಿಯುವುದಿಲ್ಲ. ಈ ರೀತಿ ಕೋಳಿ ಬಲಿಕೊಟ್ಟರೇ ಸರ್ಪ ಸಂಬಂಧದ ತೊಂದರೆ ನಿವಾರಣೆ ಜೊತೆಗೆ ತಮ್ಮ ಇಷ್ಟಾರ್ಥವೂ ಒಂದು ವರ್ಷದೊಳಗೆ ಈಡೇರಲಿದೆ. ಇಷ್ಟಾರ್ಥ ಈಡೇರಿದ ಬಳಿಕ ನಾಗಪ್ಪನಿಗೆ ಕೋಳಿ ಬಲಿ ಕೊಟ್ಟು ಹರಕೆ ತೀರಿಸುತ್ತೇವೆ ಎಂಬುದು ಇಲ್ಲಿನ ಭಕ್ತರ ನಂಬಿಕೆ.ಒಟ್ಟಿನಲ್ಲಿ, ನಾಗಪ್ಪನಿಗೆ ಕೋಳಿ ಬಲಿ ಎಂಬುದು ವಿಲಕ್ಷಣವಾಗಿ ಕಂಡರೂ ಭಯ-ಭಕ್ತಿ ಹಾಗೂ ನಂಬಿಕೆಯಿಂದ ಜನರು ಷಷ್ಠಿಯನ್ನು ಆಚರಿಸಿಕೊಂಡು ಬರುತ್ತಿದ್ದಾರೆ.
ಹನೂರಿನಲ್ಲಿ ಷಷ್ಠಿ ಆಚರಣೆಹನೂರು: ಸುಬ್ರಹ್ಮಣ್ಯ ಷಷ್ಠಿಯ ಆಚರಣೆ ಹಿನ್ನೆಲೆಯಲ್ಲಿ ಹನೂರು ತಾಲೂಕು ವ್ಯಾಪ್ತಿಯಲ್ಲಿ ಭಕ್ತರು ಹುತ್ತಗಳ ಬಳಿ ತೆರಳಿ ಹಾಲು, ಹಣ್ಣು ಇಟ್ಟು ಪೂಜೆ ಸಲ್ಲಿಸಿದರು. ಷಷ್ಠಿ ಹಬ್ಬದ ಹಿನ್ನೆಲೆಯಲ್ಲಿ ತಾಲೂಕಿನ ನಾನಾ ಕಡೆಗಳಲ್ಲಿ ಜನರು ಹುತ್ತಗಳಿಗೆ ಕೋಳಿ ಬಲಿ ಕೊಟ್ಟು ಅದರ ರಕ್ತವನ್ನು ನೈವೇದ್ಯವಾಗಿ ಅರ್ಪಿಸಿದರೆ ಇನ್ನೂ ಕೆಲವಡೆ ನಾಗದೋಷ ಕಂಡು ಬರದಿರಲಿ ಎಂದು ಬೆಳಗ್ಗೆಯಿಂದಲೇ ಉಪವಾಸ ಇದ್ದು, ಕುಟುಂಬದ ಸದಸ್ಯರೊಂದಿಗೆ ಹುತ್ತ ಇರುವ ಕಡೆ ಪೂಜಾ ಸಾಮಗ್ರಿಗಳೊಂದಿಗೆ ತೆರಳಿ ಪೂಜೆ ಸಲ್ಲಿಸಿದರು. ಈ ವೇಳೆ ಬೆಣ್ಣೆ, ಹಾಲು, ಬಾಳೆಹಣ್ಣು ಇಟ್ಟು ಅರಿಶಿನ, ಕುಂಕುಮ ಹಾಕಿ ಹುತ್ತಗಳಿಗೆ ಪೂಜೆ ಸಲ್ಲಿಸಿದರು.