ಹನೂರಿನಲ್ಲಿ ಗಂಗನದೊಡ್ಡಿ ಗ್ರಾಮಸ್ಧರ ನಿದ್ದೆಗೆಡಿಸಿದ ಚಿರತೆ

KannadaprabhaNewsNetwork |  
Published : Dec 27, 2024, 12:47 AM IST
 ಕನ್ನಡಪ್ರಭ ವಾರ್ತೆ  ಹನೂರು ಗಂಗನ ದೊಡ್ಡಿ ಗ್ರಾಮದ ರಸ್ತೆಯಲ್ಲಿ ಮಲಗಿದ್ದ ಚಿರತೆ ಬೋನಿಗೆ ಬೀಳದೆ ಗ್ರಾಮಸ್ಥರನ್ನು ನಿದ್ದೆಗೆಡಿಸಿದೆ.....ಹನೂರು ತಾಲೂಕಿನ ಗಂಗನ ದೊಡ್ಡಿ ಗ್ರಾಮದ ಸುತ್ತಮುತ್ತಲಿನ ಗ್ರಾಮಗಳಲ್ಲಿ ಕಳೆದ ಹಲವಾರು ತಿಂಗಳುಗಳಿಂದ ಚಿರತೆಯೊಂದು ರೈತರ ಜಮೀನುಗಳಲ್ಲಿ ಸಾಕುಪ್ರಾಣಿಗಳನ್ನು ಕೊಂದು ತಿನ್ನುತ್ತಿರುವುದನ್ನು ಅರಣ್ಯ ಅಧಿಕಾರಿಗಳು ಚಿರತೆ ಸೆರೆ ಹಿಡಿಯಲು ವಿಫಲ ಆಗಿರುವ ಹಿನ್ನೆಲೆಯಲ್ಲಿ ಕಳೆದ ನಾಲ್ಕು ದಿನಗಳ ಹಿಂದೆ ರೈತರ ಕುರಿ ಒಂದನ್ನು ಕೊಂದು ಗ್ರಾಮಸ್ಥರನ್ನು ಆತಂಕಕ್ಕೆ ಈಡು ಮಾಡಿತ್ತು ಮತ್ತೆ ಬುಧವಾರ ರಾತ್ರಿ 9:00 ಸಮಯದಲ್ಲಿ ಗಂಗನ ದೊಡ್ಡಿ ಮುಖ್ಯರಸ್ತೆಯಲ್ಲಿ ಚಿರತೆ ಮಲಗಿರುವುದನ್ನು ಕಂಡ ಯುವಕರು ಬೆದರಿ ಓಡಿಹೋಗಿದ್ದಾರೆ....ಬೋನಿಗೆ ಬಿಳೆದ ಚಿರತೆ : ಮಲೆ ಮಹದೇಶ್ವರ ವನ್ಯಜೀವಿ ವಿಭಾಗದ ಹನೂರು ಪಾಪ ಜೋನ್ ವಲಯ ಅರಣ್ಯ ಪ್ರದೇಶದ ಅಂಚಿನಲ್ಲಿ ಬರುವ ಗಂಗನ ದೊಡ್ಡಿ ಬಸಪ್ಪನ ದೊಡ್ಡಿ ಕುರುಬರ ದೊಡ್ಡಿ ಸುತ್ತಮುತ್ತಲಿನ ಗ್ರಾಮಗಳಲ್ಲಿ ಕಳೆದ ಹಲವಾರು ತಿಂಗಳುಗಳಿಂದ ಚಿರತೆಯೊಂದು ರೈತರ ಜಮೀನುಗಳಲ್ಲಿ ಸಾಕುಪ್ರಾಣಿಗಳಾದ ನಾಯಿ ಮೇಕೆ ಕುರಿ ಇನ್ನಿತರ ಪ್ರಾಣಿಗಳನ್ನು ಕೊಂದು ತಿನ್ನುತ್ತಿದ್ದರು ಅರಣ್ಯ ಅಧಿಕಾರಿಗಳು ಅದನ್ನು ಹಿಡಿಯಲು  ಸಾಧ್ಯವೇ ಇಲ್ಲದೆ ಇಟ್ಟಿರುವ ಬೋನ್, ಬಳಿಯೇ ಬಂದು ಹೋಗುತ್ತಿರುವ ಚಿರತೆ ಬೋನಿಗೆ ಬೀಳದೆ ಚಾಲಾಕಿ ಚಿರತೆ ಸುತ್ತಮುತ್ತಲಿನ ರೈತರ ಜಮೀನುಗಳಲ್ಲೇ ನಿತ್ಯ ರಾತ್ರಿ ವೇಳೆ ಸಾಕುಪ್ರಾಣಿಗಳನ್ನು ಕೊಂದು ತಿನ್ನುತ್ತಿದೆ ಎಂದು ರೈತರು ಆತಂಕ ವ್ಯಕ್ತಪಡಿಸಿದ್ದಾರೆ .....ಭಯ ಬೀತರಾದ ಗ್ರಾಮಸ್ಥರು : ಕಳೆದ ಹಲವಾರು ದಿನಗಳಿಂದ ರಾತ್ರಿ ವೇಳೆ ರೈತರ ಜಮೀನುಗಳಲ್ಲಿ ಸಾಕುಪ್ರಾಣಿಗಳನ್ನು ಕೊಂದು ತಿನ್ನುತ್ತಿದ್ದ ಚಿರತೆ ಇದ್ದಕ್ಕಿದ್ದಂತೆ ಬುಧವಾರ ರಾತ್ರಿ 9:00 ಸಮಯದಲ್ಲಿ ಗಂಗನ ದೊಡ್ಡಿ ಗ್ರಾಮದ ಮುಖ್ಯರಸ್ತೆಯಲ್ಲಿ ಮಲಗಿರುವುದನ್ನು ಗ್ರಾಮದ ಕೆಲವು ಯುವಕರು ಕೆಲಸದ ನಿಮಿತ್ತ ಮುಗಿಸಿಕೊಂಡು ಗ್ರಾಮಕ್ಕೆ ತೆರಳುತ್ತಿದ್ದಾಗ ಚಿರತೆ ರಸ್ತೆ ಮಧ್ಯದಲ್ಲಿ ಮಲಗಿರುವುದನ್ನು ಕಂಡು ಬೆಚ್ಚಿಬಿದ್ದು ಓಡಿಹೋಗಿದ್ದಾರೆ ಈ ಬಗ್ಗೆ ಗ್ರಾಮದಲ್ಲಿ ಚಿರತೆ ಆತಂಕ ಹೆಚ್ಚಾಗಿರುವ ಬಗ್ಗೆ ಗ್ರಾಮಸ್ಥರು ಆತಂಕ ವ್ಯಕ್ತಪಡಿಸಿದ್ದಾರೆ.....ರಾತ್ರಿ ಗ್ರಾಮಸ್ಥರು ಚಿರತೆ ನೋಡಿರುವ ಬಗ್ಗೆ ಮಾಹಿತಿ ಬಂದಿದೆ ಹೀಗಾಗಿ ದಿನನಿತ್ಯ ಸಿಬ್ಬಂದಿ ವರ್ಗದವರು ಗಂಗನ ದೊಡ್ಡಿ ಸುತ್ತಮುತ್ತ ಚಿರತೆಗಾಗಿ ಶೋಧನೆ ನಡೆಸುತ್ತಿದ್ದಾರೆ ಜೊತೆಗೆ ಅಲ್ಲಿಯೇ ಬೋನ್ ಇಡಲಾಗಿದೆ ಆದರೂ ಚಿರತೆ  ಬೋನಿಗೆ ಬೀಳದೆ ಗ್ರಾಮಸ್ಥರ ಕಣ್ಣಿಗೆ ಬಿದ್ದಿರುವ ಬಗ್ಗೆ ಮಾಹಿತಿ ಬಂದಿದೆ ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲಿಸಿ ಹೆಚ್ಚಿನ ಸಿಬ್ಬಂದಿಗಳನ್ನು ನಿಯೋಜನೆ ಮಾಡಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು....ಪ್ರವೀಣ್ ವಲಯ ಅರಣ್ಯ ಅಧಿಕಾರಿ ಮಲೆ ಮಹದೇಶ್ವರ ವನ್ಯಜೀವಿ ವಿಭಾಗ ಹನೂರು ಬಪ್ಪರ್ ಜೋನ್ ವಲಯ.......ಕಳೆದ ಹಲವಾರು ತಿಂಗಳುಗಳಿಂದ ಗಂಗನ ದೊಡ್ಡಿ ಬಸಪ್ಪನ ದೊಡ್ಡಿ ವಿವಿಧ ಗ್ರಾಮಗಳ ಸುತ್ತಮುತ್ತಲಿನಲ್ಲಿ ಚಿರತೆ ರೈತರ ಸಾಕುಪ್ರಾಣಿಗಳನ್ನು ಕೊಂದು ತಿನ್ನುತ್ತಿದೆ ಕಳೆದ ನಾಲ್ಕು ದಿನಗಳ ಹಿಂದೆ ಸಹ ಗ್ರಾಮದ ರೈತನ ಕುರಿಯೊಂದನ್ನು ಕೊಂದು ಪರದೆ ಆಗಿದೆ ಹೀಗಾಗಿ ಬುಧವಾರ ರಾತ್ರಿ ಸಹ ಮುಖ್ಯರಸ್ತೆಯಲ್ಲಿ ಚಿರತೆ ಮಲಗಿರುವುದನ್ನು ಕಂಡು ಗ್ರಾಮಸ್ಥರು ತುಂಬಾ ಆತಂಕದ ಜೊತೆ ಭಯ ಪಡುತ್ತಿದ್ದಾರೆ ಹೀಗಾಗಿ ಅರಣ್ಯಾಧಿಕಾರಿಗಳು ಹೆಚ್ಚಿನ ಸಿಬ್ಬಂದಿಗಳನ್ನು ನೇಮಕ ಮಾಡಿ ಕಾಟ ಕೊಡುತ್ತಿರುವ ಚಿರತೆಯನ್ನು ಸೆರೆ ಹಿಡಿಯಬೇಕು ಅಮ್ಜದ್ ಖಾನ್,ಕರ್ನಾಟಕ ರಾಜ್ಯ ರೈತ ಸಂಘ ಹನೂರು ತಾಲೂಕು ಘಟಕ ಅಧ್ಯಕ್ಷರು.... Hnr,1news,1  ಹನೂರು ತಾಲೂಕಿನ ಗಂಗನ ದೊಡ್ಡಿ ಗ್ರಾಮದಲ್ಲಿ ರೈತನ ಜಮೀನಿನಲ್ಲಿ ಚಿರತೆ ಸೆರೆ ಹಿಡಿಯಲು ಬೋನ್ ಅಳವಡಿಸಲಾಗಿದೆ ಜೊತೆಗೆ ನಾಯಿಯನ್ನು ಸಹ ಕಟ್ಟಿ ಹಾಕಲಾಗಿದೆ..... | Kannada Prabha

ಸಾರಾಂಶ

ಹನೂರಿನ ಗಂಗನ ದೊಡ್ಡಿ ಗ್ರಾಮದ ರಸ್ತೆಯಲ್ಲಿ ಮಲಗಿದ್ದ ಚಿರತೆ ಬೋನಿಗೆ ಬೀಳದೆ ಗ್ರಾಮಸ್ಥರನ್ನು ನಿದ್ದೆಗೆಡಿಸಿದೆ. ಗಂಗನ ದೊಡ್ಡಿ ಗ್ರಾಮದ ಸುತ್ತಮುತ್ತಲಿನ ಗ್ರಾಮಗಳಲ್ಲಿ ಕಳೆದ ಹಲವಾರು ತಿಂಗಳುಗಳಿಂದ ಚಿರತೆಯೊಂದು ರೈತರ ಜಮೀನುಗಳಲ್ಲಿ ಸಾಕು ಪ್ರಾಣಿಗಳನ್ನು ಕೊಂದು ತಿನ್ನುತ್ತಿದೆ.

ಕನ್ನಡಪ್ರಭ ವಾರ್ತೆ ಹನೂರು ಗಂಗನ ದೊಡ್ಡಿ ಗ್ರಾಮದ ರಸ್ತೆಯಲ್ಲಿ ಮಲಗಿದ್ದ ಚಿರತೆ ಬೋನಿಗೆ ಬೀಳದೆ ಗ್ರಾಮಸ್ಥರನ್ನು ನಿದ್ದೆಗೆಡಿಸಿದೆ.ಗಂಗನ ದೊಡ್ಡಿ ಗ್ರಾಮದ ಸುತ್ತಮುತ್ತಲಿನ ಗ್ರಾಮಗಳಲ್ಲಿ ಕಳೆದ ಹಲವಾರು ತಿಂಗಳುಗಳಿಂದ ಚಿರತೆಯೊಂದು ರೈತರ ಜಮೀನುಗಳಲ್ಲಿ ಸಾಕು ಪ್ರಾಣಿಗಳನ್ನು ಕೊಂದು ತಿನ್ನುತ್ತಿದೆ. ಅರಣ್ಯ ಅಧಿಕಾರಿಗಳು ಚಿರತೆ ಸೆರೆ ಹಿಡಿಯಲು ವಿಫಲ ಆಗಿರುವ ಹಿನ್ನೆಲೆಯಲ್ಲಿ ಕಳೆದ ನಾಲ್ಕು ದಿನಗಳ ಹಿಂದೆ ರೈತರ ಕುರಿಯೊಂದನ್ನು ಕೊಂದು ಹಾಕಿತ್ತು. ಈಗ ಮತ್ತೆ ಬುಧವಾರ ರಾತ್ರಿ 9ರ ಸಮಯದಲ್ಲಿ ಗಂಗನ ದೊಡ್ಡಿ ಮುಖ್ಯರಸ್ತೆಯಲ್ಲಿ ಚಿರತೆ ಮಲಗಿರುವುದನ್ನು ಕಂಡ ಯುವಕರು ಬೆದರಿ ಓಡಿಹೋಗಿದ್ದಾರೆ.ಬೋನಿಗೆ ಬೀಳೆದ ಚಿರತೆ: ಮಲೆಮಹದೇಶ್ವರ ವನ್ಯಜೀವಿ ವಿಭಾಗದ ಹನೂರು ಜೋನ್ ವಲಯ ಅರಣ್ಯ ಪ್ರದೇಶದ ಅಂಚಿನಲ್ಲಿ ಬರುವ ಗಂಗನ ದೊಡ್ಡಿ, ಬಸಪ್ಪನ ದೊಡ್ಡಿ, ಕುರುಬರ ದೊಡ್ಡಿ ಸುತ್ತಲಿನ ಗ್ರಾಮಗಳಲ್ಲಿ ಹಲವಾರು ತಿಂಗಳುಗಳಿಂದ ಚಿರತೆ ರೈತರ ಜಮೀನುಗಳಲ್ಲಿ ಸಾಕು ಪ್ರಾಣಿಗಳಾದ ನಾಯಿ, ಮೇಕೆ ಕುರಿ ಇನ್ನಿತರ ಪ್ರಾಣಿಗಳನ್ನು ಕೊಂದು ತಿನ್ನುತ್ತಿದ್ದು, ಅರಣ್ಯ ಅಧಿಕಾರಿಗಳು ಅದನ್ನು ಹಿಡಿಯಲು ಸಾಧ್ಯವೇ ಇಲ್ಲದೆ ಬೋನ್ ಇಟ್ಟಿದ್ದಾರೆ. ಬೋನಿಗೆ ಬೀಳದೆ ಚಾಲಾಕಿ ಚಿರತೆ ಸುತ್ತಲಿನ ರೈತರ ಜಮೀನುಗಳಲ್ಲೇ ನಿತ್ಯ ರಾತ್ರಿ ವೇಳೆ ಸಾಕುಪ್ರಾಣಿಗಳನ್ನು ಕೊಂದು ತಿನ್ನುತ್ತಿದೆ ಎಂದು ರೈತರು ಆತಂಕ ವ್ಯಕ್ತಪಡಿಸಿದ್ದಾರೆ. ರಾತ್ರಿ ಗಂಗನದೊಡ್ಡಿ ಗ್ರಾಮಸ್ಥರು ಚಿರತೆ ನೋಡಿರುವ ಬಗ್ಗೆ ಮಾಹಿತಿ ಬಂದಿದೆ. ಹೀಗಾಗಿ ದಿನನಿತ್ಯ ಸಿಬ್ಬಂದಿಯನ್ನು ಗಂಗನ ದೊಡ್ಡಿ ಸುತ್ತಮುತ್ತ ಚಿರತೆಗಾಗಿ ಶೋಧನೆ ನಡೆಸುತ್ತಿದ್ದಾರೆ. ಜೊತೆಗೆ ಅಲ್ಲಿಯೇ ಬೋನ್ ಇಡಲಾಗಿದೆ. ಆದರೂ ಚಿರತೆ ಬೋನಿಗೆ ಬೀಳದೆ ಗ್ರಾಮಸ್ಥರ ಕಣ್ಣಿಗೆ ಬಿದ್ದಿರುವ ಬಗ್ಗೆ ಮಾಹಿತಿ ಬಂದಿದೆ. ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲಿಸಿ ಹೆಚ್ಚಿನ ಸಿಬ್ಬಂದಿ ನಿಯೋಜನೆ ಮಾಡಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು. ಪ್ರವೀಣ್, ವಲಯ ಅರಣ್ಯ ಅಧಿಕಾರಿ

ಗಂಗನದೊಡ್ಡಿ, ಬಸಪ್ಪನದೊಡ್ಡಿ ವಿವಿಧ ಗ್ರಾಮಗಳ ಸುತ್ತಲಿನಲ್ಲಿ ಚಿರತೆ ರೈತರ ಸಾಕುಪ್ರಾಣಿಗಳನ್ನು ಕೊಂದು ತಿನ್ನುತ್ತಿದೆ. ಕಳೆದ ನಾಲ್ಕು ದಿನಗಳ ಹಿಂದೆ ಗ್ರಾಮದ ರೈತನ ಕುರಿಯೊಂದನ್ನು ಕೊಂದು ಪರಾರಿ ಆಗಿದೆ. ಬುಧವಾರ ರಾತ್ರಿ ಮುಖ್ಯರಸ್ತೆಯಲ್ಲಿ ಚಿರತೆ ಮಲಗಿರುವುದನ್ನು ಕಂಡು ಗ್ರಾಮಸ್ಥರು ಭಯ ಪಡುತ್ತಿದ್ದಾರೆ. ಅರಣ್ಯಾಧಿಕಾರಿಗಳು ಹೆಚ್ಚಿನ ಸಿಬ್ಬಂದಿ ನೇಮಕ ಮಾಡಿ ಕಾಟ ಕೊಡುತ್ತಿರುವ ಚಿರತೆಯನ್ನು ಸೆರೆ ಹಿಡಿಯಬೇಕು. ಅಮ್ಜದ್ ಖಾನ್, ರಾಜ್ಯ ರೈತ ಸಂಘ, ಹನೂರು ತಾಲೂಕು ಘಟಕ ಅಧ್ಯಕ್ಷ

PREV

Recommended Stories

ಮಾನಸಿಕ ದೈಹಿಕ ಸದೃಢತೆಗೆ ಕ್ರೀಡೆ ಸಹಕಾರಿ
ಸಭೆಯಲ್ಲಿ ಪುರಸಭೆ ಮಳಿಗೆಗಳ ಹರಾಜಿನ ಗದ್ದಲ