ಅರಣ್ಯ ಕೃಷಿ ವಿಚಾರ ಸಂಕಿರಣ

KannadaprabhaNewsNetwork |  
Published : Aug 10, 2025, 01:30 AM IST
ಕೃಷಿ ಮಹಾವಿದ್ಯಾಲಯ  ವಿದ್ಯಾರ್ಥಿಗಳು   | Kannada Prabha

ಸಾರಾಂಶ

ಚಾಮರಾಜನಗರದ ಕೃಷಿ ಮಹಾವಿದ್ಯಾಲಯ ವಿದ್ಯಾರ್ಥಿಗಳಿಂದ ಹೆಗ್ಗವಾಡಿಯಲ್ಲಿ ಗ್ರಾಮೀಣ ಕೃಷಿ ಕಾರ್ಯಾನುಭವ ಶಿಬಿರದ ಅಂಗವಾಗಿ ಅರಣ್ಯ ಕೃಷಿ ವಿಚಾರ ಸಂಕಿರಣ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

ಕನ್ನಡಪ್ರಭ ವಾರ್ತೆ ಚಾಮರಾಜನಗರ

ಚಾಮರಾಜನಗರದ ಕೃಷಿ ಮಹಾವಿದ್ಯಾಲಯ ವಿದ್ಯಾರ್ಥಿಗಳಿಂದ ಹೆಗ್ಗವಾಡಿಯಲ್ಲಿ ಗ್ರಾಮೀಣ ಕೃಷಿ ಕಾರ್ಯಾನುಭವ ಶಿಬಿರದ ಅಂಗವಾಗಿ ಅರಣ್ಯ ಕೃಷಿ ವಿಚಾರ ಸಂಕಿರಣ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

ಕಾರ್ಯಕ್ರಮದಲ್ಲಿ ಅರಣ್ಯ ಕೃಷಿಯ ಮಹತ್ವ ಹಾಗೂ ಅರಣ್ಯ ಸಸ್ಯಗಳ ಬಗ್ಗೆ ಮಾಹಿತಿಯನ್ನು ರೈತರಿಗೆ ತಿಳಿಸಲಾಯಿತು. ವಿದ್ಯಾರ್ಥಿಗಳು ಅರಣ್ಯಕೃಷಿಯ ವಿವಿಧ ರೀತಿಯ ಪದ್ಧತಿಗಳನ್ನು ಮಾದರಿಯ ಮುಖಾಂತರ ತಿಳಿಸಿದರು. ವಿವಿಧ ಅರಣ್ಯ ಸಸ್ಯಗಳ ಬಗ್ಗೆ ವಿಚಾರವನ್ನು ಹಂಚಿಕೊಂಡರು, ಗ್ರಾಮದಸ ಮಕ್ಕಳಿಂದ ಕಿರು ನಾಟಕ ಪ್ರದರ್ಶನ ಮಾಡಿ ಜನರಲ್ಲಿ ಅರಿವು ಮೂಡಿಸಿದರು .

ಡಾ. ಜೆ.ಮಹದೇವ ಅರಣ್ಯ ಕೃಷಿ ವಿಭಾಗದ ಸಹಾಯಕ ಪ್ರಾಧ್ಯಾಪಕರು ಇವರು ರೈತರ ಪ್ರಶ್ನೆಗಳಿಗೆ ಉತ್ತರಿಸಿದ್ದರು. ಅರಣ್ಯ ಮರಗಳಾದ ತೆಗ, ಸರ್ವೇ, ಹೆಬ್ಬೇವುಗಳನ್ನು ಬದುಗಳಲ್ಲಿ ನೆಡುವುದರಿಂದ ಅದರ ಎಲೆಗಳು ಉದುರಿ ಮಣ್ಣಿನ ಫಲವತ್ತತೆ ಹೆಚ್ಚುತ್ತದೆ, ಬೆಳೆದ ಮರಗನ್ನು ಉಪಕರಣ ತಯಾರಿಸುವಲ್ಲಿ ಉಪಯೋಗಿಸಲಾಗುತ್ತದೆ, ಹಲವು ಹಣ್ಣುಗಳ ಮರಗಳನ್ನು ನೆಡುವುದರಿಂದ ರೈತರಿಗೆ ಉಪಯೋಗವಾಗುತ್ತದೆ. ಸರ್ಕಾರದ ಯೋಜನೆ "ಕೃಷಿ ಅರಣ್ಯ ಪ್ರೋತ್ಸಾಹ ಯೋಜನೆ " ಬಗ್ಗೆ ಮಾಹಿತಿ ತಿಳಿಸಿಕೊಟ್ಟರು. ನಂತರ ರೈತರಿಗೆ ಅರಣ್ಯ ಮರಗಳ ಆದಾಯದ ಬಗ್ಗೆ ಉದಾಹರಣೆ ಮೂಲಕ ಮಾಹಿತಿ ನೀಡಲಾಯಿತು. ಕಾರ್ಯಕ್ರಮದಲ್ಲಿ ಕೃಷಿ ವಿದ್ಯಾರ್ಥಿಗಳು ಊರಿನ ಗ್ರಾಮಸ್ಥರು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

‘ಕನ್ನಡಪ್ರಭ, ಏಷ್ಯಾನೆಟ್‌ ಸುವರ್ಣ ನ್ಯೂಸ್‌’ನ ಸಹಯೋಗದಲ್ಲಿ ಆಯೋಜಿಸಿದ್ದ ‘ಕೆಂಗೇರಿ ಸಂಭ್ರಮ’ಕ್ಕೆ ವಿದ್ಯುಕ್ತ ತೆರೆ
ಸರ್ವಾಧ್ಯಕ್ಷರಾಗಿ ಸೋಮಲಿಂಗ ಗೆಣ್ಣೂರ ಆಯ್ಕೆ