ಹೊನ್ನಾಲಗನದೊಡ್ಡಿ ಡೇರಿಯಲ್ಲಿ ಜೆಡಿಎಸ್ ಬೆಂಬಲಿತರ ಮೇಲುಗೈ

KannadaprabhaNewsNetwork |  
Published : Jan 28, 2024, 01:23 AM IST
27ಕೆಆರ್ ಎಂಎನ್ 1.ಜೆಪಿಜಿಹಾರೋಹಳ್ಳಿ ತಾಲೂಕಿನ ಹೊನ್ನಾಲಗನದೊಡ್ಡಿ ಹಾಲು ಉತ್ಪಾದಕ ಸಹಕಾರ ಸಂಘದ ನೂತನ ನಿರ್ದೇಶಕರನ್ನು ಮುಖಂಡರು ಅಭಿನಂದಿಸಿದರು. | Kannada Prabha

ಸಾರಾಂಶ

ಹಾರೋಹಳ್ಳಿ: ತಾಲೂಕಿನ ಹೊನ್ನಾಲಗನದೊಡ್ಡಿ ಹಾಲು ಉತ್ಪಾದಕರ ಸಹಕಾರ ಸಂಘದಲ್ಲಿ 11 ಜೆಡಿಎಸ್ ಬೆಂಬಲಿತ ನಿರ್ದೇಶಕರು ಜಯಗಳಿಸಿದ್ದಾರೆ.

ಹಾರೋಹಳ್ಳಿ: ತಾಲೂಕಿನ ಹೊನ್ನಾಲಗನದೊಡ್ಡಿ ಹಾಲು ಉತ್ಪಾದಕರ ಸಹಕಾರ ಸಂಘದಲ್ಲಿ 11 ಜೆಡಿಎಸ್ ಬೆಂಬಲಿತ ನಿರ್ದೇಶಕರು ಜಯಗಳಿಸಿದ್ದಾರೆ. ಸಂಘದ ಆವರಣದಲ್ಲಿ ನಡೆದ ಚುನಾವಣೆಯಲ್ಲಿ 12 ನಿರ್ದೇಶಕರ ಸ್ಥಾನಗಳಲ್ಲಿ ಜೆಡಿಎಸ್ 11 ಸ್ಥಾನಗಳನ್ನು ಗೆಲ್ಲುವ ಮೂಲಕ ಪಾರಮ್ಯ ಮೆರೆದಿದೆ. ತೀವ್ರ ಹಣಾಹಣಿಯಿಂದ ಕೂಡಿದ ಚುನಾವಣೆಯಲ್ಲಿ ಒಟ್ಟು 143 ಮತದಾರರು ಮತ ಚಲಾವಣೆ ಮಾಡಿದರು. ಜೆಡಿಎಸ್ ಬೆಂಬಲಿತರಾದ ಬಸವರಾಜು, ಚೈತ್ರ, ಎಚ್.ಕೆ. ರಾಮಯ್ಯ, ಮಹಾಲಿಂಗಯ್ಯ, ಮೋಟಯ್ಯ, ಹನುಮಮ್ಮ, ಎಚ್.ಆರ್. ಅಶೋಕ್ ರಾಜೆ ಅರಸು, ಪುಟ್ಟಸ್ವಾಮಿ ಸುಜಾತ, ಕೆಂಚಮ್ಮ ಕಾಂಗ್ರೆಸ್ ಬೆಂಬಲಿತರಾದ ಹರೀಶ್ ಕುಮಾರ್.ಎಚ್.ಎಸ್ ಗೆಲುವು ನಗೆ ಬೀರಿದರು. ಚುನಾವಣಾ ಅಧಿಕಾರಿಯಾಗಿ ಸಹಕಾರ ಇಲಾಖೆಯ ಮಂಜುನಾಥ್ , ಸಹಾಯಕರಾಗಿ ಸಹಕಾರ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ನಾಗರಾಜು ಕಾರ್ಯ ನಿರ್ವಹಿಸಿದರು. ತಾಪಂ ಮಾಜಿ ಸದಸ್ಯ ಕೆ.ಎನ್.ರಾಮು ಮಾತನಾಡಿ, ಕಳೆದ ಹತ್ತು ವರ್ಷಗಳಿಂದ ಈ ಸಹಕಾರ ಸಂಘವು ಕಾಂಗ್ರೆಸ್ ತೆಕ್ಕೆಯಲ್ಲಿದ್ದು ಈ ಬಾರಿ ಜನರು ನಮಗೆ ಆಶೀರ್ವಾದ ಮಾಡಿದ್ದಾರೆ. ಅವರ ವಿಶ್ವಾಸಕ್ಕೆ ನಾವು ಋಣಿಯಾಗಿದ್ದು ಮುಂದಿನ ದಿನಗಳಲ್ಲಿ ಅವರ ನಂಬಿಕೆಗೆ ತಕ್ಕ ಕೆಲಸ ಮಾಡಬೇಕು ಎಂದು ಸಲಹೆ ನೀಡಿದರು.

ನೂತನ ನಿರ್ದೇಶಕ ಎಂ. ಬಸವರಾಜು ಮಾತನಾಡಿ, ಹಾಲು ಉತ್ಪಾದಕರು ಗುಣಮಟ್ಟದ ಹಾಲು ಸರಬರಾಜು ಮಾಡುವ ಮೂಲಕ ಸಂಘದ ಅಭಿವೃದ್ಧಿಗೆ ಶ್ರಮಿಸಬೇಕು. ಸರ್ಕಾರದಿಂದ ಬರುವ ಎಲ್ಲಾ ಸೌಲಭ್ಯಗಳನ್ನು ಹಾಲು ಉತ್ಪಾದಕರಿಗೆ ಕಲ್ಪಿಸಲಾಗುವುದು ಎಂದರು. ಗ್ರಾಪಂ ಮಾಜಿ ಅಧ್ಯಕ್ಷ ಕೆ.ಎನ್. ಲಕ್ಷ್ಮಣ್, ಹಾರೋಹಳ್ಳಿ ಜೆಡಿಎಸ್ ಯುವ ಘಟಕದ ಅಧ್ಯಕ್ಷ ಪ್ರದೀಪ್ ಕುಮಾರ್, ಬಿಜೆಪಿಯ ಯುವ ಮುಖಂಡ ಲಕ್ಷ್ಮಿಕಾಂತ ಮುಖಂಡರಾದ ವಿನೋದ, ಶಿವಣ್ಣ ಎಸ್ ಸಿ, ಮಹದೇವ್ ಕುಮಾರ್ ಎಚ್.ಎಸ್, ಮಹಾದೇವ, ಅರುಣರಾಜೇ ಅರಸು, ಶ್ರೀನಿವಾಸ್ ನೂತನ ನಿರ್ದೇಶಕರನ್ನು ಅಭಿನಂದಿಸಿದರು.27ಕೆಆರ್ ಎಂಎನ್ 1.ಜೆಪಿಜಿ

ಹಾರೋಹಳ್ಳಿ ತಾಲೂಕಿನ ಹೊನ್ನಾಲಗನದೊಡ್ಡಿ ಹಾಲು ಉತ್ಪಾದಕ ಸಹಕಾರ ಸಂಘದ ನೂತನ ನಿರ್ದೇಶಕರನ್ನು ಮುಖಂಡರು ಅಭಿನಂದಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಪಕ್ಷವಿರೋಧಿ ಚಟುವಟಿಕೆ ನಡೆಸಿದ್ದರೆ ನನ್ನ ವಿರುದ್ಧವೂ ಕ್ರಮ ಆಗಲಿ: ಜಮೀರ್‌
ಈಗಾಗಲೇ ಸಾಕಷ್ಟು ಅನುಭವಿಸಿದ್ದೇವೆ, ಜಮೀರ್‌ರನ್ನು ಮತ್ತೆ ಸೇರ್ಸಿಕೊಳ್ಳಲ್ಲ: ಎಚ್ಡಿಕೆ