ಹುಬ್ಬಳ್ಳಿ:
ಇಲ್ಲಿನ ನೆಹರು ಮೈದಾನದಲ್ಲಿ ಹುಬ್ಬಳ್ಳಿ ಶಹರ ತಾಲೂಕು ಸ್ವಾತಂತ್ರ್ಯೋತ್ಸವ ಸಮಿತಿ ವತಿಯಿಂದ ಆಯೋಜಿಸಿದ್ದ 78ನೇ ಸ್ವಾತಂತ್ರ್ಯ ದಿನಾಚರಣೆಯ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು. ಹುಬ್ಬಳ್ಳಿ ತಾಲೂಕಿನ ಎಲ್ಲ ಜನರಿಗೆ ರಾಜ್ಯದಲ್ಲಿ ಮೊದಲ ಬಾರಿಗೆ ಗಣಕೀಕರಣ ದಾಖಲೆ ಪಡೆದುಕೊಳ್ಳಲು ಅನುಕೂಲವಾಗುವುದು. ಹುಬ್ಬಳ್ಳಿ ನಗರ ತಾಲೂಕಿನಲ್ಲಿ ಒಟ್ಟು 1.37,310 ದಾಖಲೆಗಳು ಇದ್ದು, ಇದರಲ್ಲಿ ಈಗಾಗಲೇ 48,088 ದಾಖಲೆ ಗಣಕೀಕೃತಗೊಳಿಸಲಾಗಿದೆ ಎಂದರು.
ಸ್ಲಂ ಬೋರ್ಡ್ ಅಧ್ಯಕ್ಷ, ಶಾಸಕ ಪ್ರಸಾದ ಅಬ್ಬಯ್ಯ ಮಾತನಾಡಿ, ಕೊಳಚೆ ಪ್ರದೇಶಾಭಿವೃದ್ಧಿ ಮಂಡಳಿಯಿಂದ 1.80 ಲಕ್ಷ ಮನೆ ನಿರ್ಮಿಸುವ ಗುರಿ ಹೊಂದಲಾಗಿದೆ ಎಂದರು. ಶಾಸಕ ಮಹೇಶ ಟೆಂಗಿನಕಾಯಿ, ಹುಬ್ಬಳ್ಳಿ-ಧಾರವಾಡ ಸ್ವಚ್ಛ ಸುಂದರ ನಗರವಾಗಬೇಕು. ಅವಳಿ ನಗರದ ಅಭಿವೃದ್ಧಿಗೆ ಒಳ್ಳೆಯ ಯೋಜನೆಗಳನ್ನು ರೂಪಿಸಬೇಕಿದೆ ಎಂದರು.ಇದೇ ವೇಳೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಸಾಧಕರನ್ನು ಸನ್ಮಾನಿಸಲಾಯಿತು. ಪಥ ಸಂಚಲನ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಭಾಗಿಯಾದ ತಂಡಗಳಿಗೆ ಪ್ರಶಸ್ತಿ ಪ್ರಮಾಣಪತ್ರ ವಿತರಿಸಲಾಯಿತು.
ನೆಹರು ಕ್ರೀಡಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೆಲಕಾಲ ಕಾಂಗ್ರೆಸ್ ಹಾಗೂ ಬಿಜೆಪಿ ಶಾಸಕರ ಆರೋಪ, ಪ್ರತ್ಯಾರೋಪಕ್ಕೆ ವೇದಿಕೆ ಸಾಕ್ಷಿಯಾಯಿತು.
ನಂತರ ಶಾಸಕ ಪ್ರಸಾದ ಅಬ್ಬಯ್ಯ ಮಾತನಾಡಿ, 2014ರ ಪೂರ್ವದಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರದ ಅವಧಿಯಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯ ಕೈಗೊಳ್ಳಲಾಗಿದೆ. ಮೋದಿ ಅಧಿಕಾರಕ್ಕೆ ಬಂದ ನಂತರ ನಿರುದ್ಯೋಗ ಹೆಚ್ಚಾಗಿದೆ. ಅಲ್ಲದೇ, ಹತ್ತು ಹಲವು ಸಮಸ್ಯೆಗಳನ್ನು ದೇಶ ಎದುರಿಸುವಂತಾಗಿದೆ ಎಂದು ಈಗಿನ ಕೇಂದ್ರ ಸರ್ಕಾರದ ಹಲವು ವೈಫಲ್ಯ ವಿವರಿಸಿದರು. ಇಂಥವರ ವಿರುದ್ಧ ಯುವಕರು ಜಾಗೃತಿ ಹೊಂದುವುದು ಅವಶ್ಯವಾಗಿದೆ ಎಂದರು.