ಕನ್ನಡಪ್ರಭ ವಾರ್ತೆ ಬಂಗಾರಪೇಟೆ
ಅದರಂತೆ ಚಿಕ್ಕಅಂಕಂಡಹಳ್ಳಿ, ಬೂದಿಕೋಟೆ ಮತ್ತಿತರ ಪಂಚಾಯ್ತಿಗಳಲ್ಲಿ ಮಾತ್ರ ಯೋಜನೆ ಆರಂಭವಾಗಿದೆ, ಉಳಿದ ಗ್ರಾಪಂಗಳಲ್ಲಿ ಯೋಜನೆಯನ್ನು ಕಡೆಗಣಿಸಲಾಗಿದೆ ಎಂಬ ಆರೋಪವಿದೆ. ಕೆಲವು ಪಂಚಾಯ್ತಿಗಳಲ್ಲಿ ಕೂಸಿನ ಮನೆಗೆ ಬೇಕಾದ ಸಲಕರಣೆಗಳನ್ನು ಈಗಾಗಲೇ ಖರೀದಿ ಮಾಡಿದ್ದರೂ ಕಟ್ಟಡಗಳು ಲಭ್ಯವಾಗದೆ ಸಲಕರಣೆಗಳು ಮೂಲೆಗುಂಪಾಗಿದೆ. ಈಗಾಗಲೇ ಕೂಸಿನ ಮನೆಗಳಲ್ಲಿ ಮಕ್ಕಳ ಪೋಷಣೆ ಬಗ್ಗೆ ಕೇರ್ ಟೇಕರ್ಗಳಿಗೆ ತಾಪಂ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಿಂದ ಗ್ರಾಪಂಗೆ ಇಬ್ಬರಂತೆ ಆಯ್ಕೆ ಮಾಡಿಕೊಂಡು ತರಬೇತಿ ಸಹ ನೀಡಲಾಗಿದೆ.
ಕೂಸಿನ ಮನೆ ಉದ್ದೇಶಈ ಶಿಶುಪಾಲನಾ ಕೇಂದ್ರಗಳ ಮುಖ್ಯ ಉದ್ದೇಶ ಗ್ರಾಮೀಣ ಭಾಗದಲ್ಲಿ ಹಚ್ಚಿನ ಸಂಖ್ಯೆಯಲ್ಲಿ ಜನರು ಜಮೀನುಗಳಿಗೆ ಕೃಷಿ ಕೆಲಸಕ್ಕೆ ತೆರಳುತ್ತಾರೆ, ಕೂಲಿ ಕಾರ್ಮಿಕರು ಹಾಗೂ ಕೃಷಿ ಕಾರ್ಮಿಕರು ಬಹುತೇಕ ಬಡ ಕುಟುಂಬದವರಾಗಿದ್ದು, ಪ್ರತಿನಿತ್ಯ ಕೂಲಿ ಕೆಲಸಕ್ಕೆ ಮತ್ತು ನರೇಗಾ ಕೆಲಸಕ್ಕೆ ತೆರಳುವ ಅನಿವಾರ್ಯತೆ ಇರುತ್ತದೆ. ಇಂತಹ ಕುಟುಂಬದ ಮಹಿಳೆಯರು ತಮ್ಮ ಚಿಕ್ಕ ಮಕ್ಕಳನ್ನು ತಮ್ಮೊಂದಿಗೆ ಕರೆದುಕೊಂಡು ಹೋಗುವುದು ಅಸಾಧ್ಯ, ಮಹಿಳೆಯರು ತಮ್ಮ ಮಕ್ಕಳನ್ನು ಮನೆಯಲ್ಲಿಯೇ ಬಿಟ್ಟು ಕೆಲಸಕ್ಕೆ ತೆರಳಿದ ಸಂದರ್ಭದಲ್ಲಿ ಅವರು ಮನೆಗೆ ಮರಳುವವರೆಗೆ ಮಗುವಿಗೆ ತಾಯಿ ಹಾಲು ದೊರೆಯುವುದಿಲ್ಲ ಜೊತೆಗೆ ಪೌಷ್ಟಿಕ ಆಹಾರ ದೊರೆಯುವುದಿಲ್ಲ, ಇದರಿಂದ ಮಕ್ಕಳು ಅಪೌಷ್ಟಿಕತೆಗೆ ಒಳಗಾಗುತ್ತಾರೆ. ಇದರಿಂದ ಗ್ರಾಮೀಣರ ಮಾನಸಿಕ ಆರೋಗ್ಯವು ಹಾಳಾಗುತ್ತದೆ, ಗ್ರಾಮೀಣ ಭಾಗದ ಮಹಿಳೆಯರು ಕೂಸಿನ ಮನೆಯಲ್ಲಿ ೬ ತಿಂಗಳಿಂದ ೩ ವರ್ಷದೊಳಗಿನ ಮಕ್ಕಳನ್ನು ಬಿಟ್ಟು ನೆಮ್ಮದಿಯಿಂದ ಕೆಲಸಕ್ಕೆ ತೆರಳಬಹುದು.
ಪೌಷ್ಟಿಕ ಆಹಾರ ಪೂರೈಸುತ್ತಿಲ್ಲಆದರೆ ಎರಡು ತಿಂಗಳಿಂದ ಕೂಸಿನ ಮನೆಗೆ ಯಾವುದೇ ಪೌಷ್ಟಿಕ ಆಹಾರ ಸರಬರಾಜಾಗಿಲ್ಲ, ಕೇರ್ ಟೇಕರ್ಗಳು ಅಸಹಾಯಕಾರಗಿದ್ದಾರೆ. ಇದರಿಂದ ಕಾರ್ಮಿಕರು ತಮ್ಮ ಮಕ್ಕಳನ್ನು ಕೂಸಿನ ಮನೆಗೆ ಕಳುಹಿಸಲು ಹಿಂದೇಟು ಹಾಕುತ್ತಿದ್ದಾರೆಂದು ಹೆಸರು ಹೇಳಲು ಇಚ್ಛಿಸದ ಕೇರ್ ಟೇಕರ್ ಒಬ್ಬರು ತಿಳಿಸಿದ್ದಾರೆ. ಇದರಿಂದ ಆರಂಭದಲ್ಲೆ ಕೂಸಿನ ಮನೆಗಳು ಹಳ್ಳ ಹಿಡಿಯುವಂತಾಗಿದೆ.