ಜಾತಿ ಸಮೀಕ್ಷೆಯಲ್ಲಿ ತಪ್ಪದೇ ಮಾದಿಗ ಎಂದು ನಮೂದಿಸಿ-ಮರಿಯಪ್ಪ

KannadaprabhaNewsNetwork |  
Published : May 09, 2025, 12:31 AM IST
ಪೋಟೊ ಕ್ಯಾಪ್ಸನ್: ಮರಿಯಪ್ಪ ಕೆ ಸಿದ್ದಣ್ಣವರ ( ಮುಂಡರಗಿ ಎಸ್.ಸಿ ಬ್ಲಾಕ್ ಕಾಂಗ್ರೆಸ್ ಘಟಕದ ಅಧ್ಯಕ್ಷ) | Kannada Prabha

ಸಾರಾಂಶ

ತಾಲೂಕಿನ ಆಯಾ ಗ್ರಾಮದಲ್ಲಿ ನಮ್ಮ ಸಮುದಾಯದ ವಿದ್ಯಾವಂತರು ಹಾಗೂ ದಲಿತ ಸಂಘಟನೆಗಳು, ಮುಖಂಡರು, ಯುವಕರು ಗಣತಿಗೆ ಬರುವ ಶಿಕ್ಷಕರಿಗೆ ನಮ್ಮ ಸಮುದಾಯದ ಪ್ರತಿಯೊಂದು ಕುಟುಂಬದ ಸಮಗ್ರ ಮಾಹಿತಿ ನೀಡುವ ಕುರಿತು ಅಗತ್ಯ ಕ್ರಮ ತೆಗೆದುಕೊಳ್ಳಬೇಕು ಎಂದು ಮುಂಡರಗಿ ಎಸ್.ಸಿ. ಬ್ಲಾಕ್ ಕಾಂಗ್ರೆಸ್ ಘಟಕದ ಅಧ್ಯಕ್ಷ ಮರಿಯಪ್ಪ ಕೆ. ಸಿದ್ದಣ್ಣವರ ಅಭಿಪ್ರಾಯಪಟ್ಟಿದ್ದಾರೆ.

ಡಂಬಳ: ರಾಜ್ಯ ಸರ್ಕಾರ ನಡೆಸುತ್ತಿರುವ ಪರಿಶಿಷ್ಟ ಜಾತಿಗಳ ಸಮೀಕ್ಷೆಯಲ್ಲಿ ಮಾದಿಗ ಸಮಾಜದವರು ತಪ್ಪದೇ ಕಡ್ಡಾಯವಾಗಿ ಹೆಮ್ಮೆಯಿಂದ ಮಾದಿಗ ಎಂದು ಬರೆಸುವ ಮೂಲಕ ಜಾತಿ ಸಮೀಕ್ಷೆಯಲ್ಲಿ ತಪ್ಪದೆ ಪಾಲ್ಗೊಳ್ಳಬೇಕು. ತಾಲೂಕಿನ ಆಯಾ ಗ್ರಾಮದಲ್ಲಿ ನಮ್ಮ ಸಮುದಾಯದ ವಿದ್ಯಾವಂತರು ಹಾಗೂ ದಲಿತ ಸಂಘಟನೆಗಳು, ಮುಖಂಡರು, ಯುವಕರು ಗಣತಿಗೆ ಬರುವ ಶಿಕ್ಷಕರಿಗೆ ನಮ್ಮ ಸಮುದಾಯದ ಪ್ರತಿಯೊಂದು ಕುಟುಂಬದ ಸಮಗ್ರ ಮಾಹಿತಿ ನೀಡುವ ಕುರಿತು ಅಗತ್ಯ ಕ್ರಮ ತೆಗೆದುಕೊಳ್ಳಬೇಕು ಎಂದು ಮುಂಡರಗಿ ಎಸ್.ಸಿ. ಬ್ಲಾಕ್ ಕಾಂಗ್ರೆಸ್ ಘಟಕದ ಅಧ್ಯಕ್ಷ ಮರಿಯಪ್ಪ ಕೆ. ಸಿದ್ದಣ್ಣವರ ಅಭಿಪ್ರಾಯಪಟ್ಟಿದ್ದಾರೆ.

ಡಂಬಳದಲ್ಲಿ ಪತ್ರಿಕಾ ಪ್ರಕಟಣೆ ನೀಡಿರುವ ಅವರು ಗಣತಿದಾರರು ಸಮೀಕ್ಷೆಗೆ ಮನೆಗೆ ಬಂದಾಗ ತಪ್ಪದೆ ಅವರನ್ನು ಗೌರವಿಸಿ ಜಾತಿ ಕಾಲಂ 61ರಲ್ಲಿ ಮಾದಿಗ ಎಂದು ಬರೆಸಬೇಕು. ನಮ್ಮ ಸಮುದಾಯ ಹಲವು ಗ್ರಾಮದಲ್ಲಿನ ಕುಟುಂಬಗಳು ಗುಳೆ ಹೋಗಿದ್ದು ತಪ್ಪದೆ ಜಾತಿ ಗಣತಿ ದಿನಾಂಕದೊಳಗೆ ಆಗಮಿಸಿ ಸಮೀಕ್ಷೆಯಲ್ಲಿ ಪಾಲ್ಗೊಳಬೇಕು ಎಂದು ಸಲಹೆ ನೀಡಿದರು.ಗ್ರಾಮೀಣ ಭಾಗದಲ್ಲಿ ಅನಕ್ಷರಸ್ಥರಿದ್ದು ತಾಲೂಕು ಆಡಳಿತ ಸಮಾಜ ಕಲ್ಯಾಣ ಇಲಾಖೆ ಗ್ರಾಮ ಪಂಚಾಯತಿ ಡಂಗರು ಸಾರುವುದು, ಬೀದಿ ನಾಟಕ ಪ್ರದರ್ಶನ ಬ್ಯಾನರ್ ಹಾಕುವುದು ಸೇರಿದಂತೆ ಅಗತ್ಯ ಜಾಗೃತೆ ಮೂಡುವ ಕಾರ್ಯಕೈಗೊಳ್ಳಬೇಕು ಎಂದರು.

ಮೇ 5ರಿಂದ 17ರವರೆಗೆ ಮನೆ ಮನೆ ಭೇಟಿ ನೀಡಿ ಸಮೀಕ್ಷೆ ನಡೆಯುತ್ತಿದೆ. ಪರಿಶಿಷ್ಟ ಜಾತಿಗಳ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ, ರಾಜಕೀಯ, ಸ್ಥಿತಿಗಳ ವಾಸ್ತವಾಂಶವನ್ನು ಅರಿಯಲು ಸಾಧ್ಯವಾಗುತ್ತದೆ. ಸಮೀಕ್ಷೆಯಲ್ಲಿ ಮಾದಿಗರು ಒಗ್ಗಟ್ಟು ತೋರಿಸಬೇಕಿದೆ. ಒಳಮೀಸಲಾತಿಗಾಗಿ 30 ವರ್ಷಗಳಿಂದ ಹೋರಾಟ ನಡೆದಿದೆ. ಸದಾಶಿವ ಆಯೋಗ ಕೂಡ ಸಮೀಕ್ಷೆ ಹಾಗೂ ಅಭಿವೃದ್ಧಿಗೆ ಸೂಚಿಸಿತ್ತು. ಪರಿಶಿಷ್ಠ ಜಾತಿಗಳಿಗೆ ಒಳಮೀಸಲಾತಿ ನೀಡಲು ಈಚೆಗೆ ನಿವೃತ್ತ ನ್ಯಾಯಮೂರ್ತಿ ಡಾ. ನಾಗಮೋಹನ್ ದಾಸ್ ಏಕ ಸದಸ್ಯ ವಿಚಾರಣಾ ಆಯೋಗದ ಶಿಫಾರಸ್ಸಿನಂತೆ ಹಮ್ಮಿಕೊಂಡಿರುವ ಸಮಗ್ರ ಸಮೀಕ್ಷೆ ಕಾರ್ಯದಲ್ಲಿ ಗಣತಿದಾರರು ಗಣತಿಗೆ ಮನೆಗೆ ಬಂದಾಗ ನಿಖರವಾಗಿ ನಮ್ಮ ಜಾತಿ ಮಾದಿಗ ಎಂದು ನೋಂದಾಯಿಸಿಕೊಂಡಾಗ ಮಾತ್ರ ಸರ್ಕಾರದ ಒಳಮೀಸಲಾತಿ ಅರ್ಹತೆ ಸಿಗಲಿದೆ. ಈ ಕುರಿತು ಪ್ರತಿಯೊಬ್ಬರು ನಮ್ಮ ಸಮುದಾಯದ ಜನ ಜಾಗೃತೆ ಹೊಂದಬೇಕು ಎಂದು ತಿಳಿಸಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಹುಬ್ಬಳ್ಳಿ ವಿವಸ್ತ್ರ ಕೇಸ್‌ನಲ್ಲಿ ತಲೆದಂಡಕ್ಕೆ ಬಿಜೆಪಿ ಗಡುವು
ಶೀಘ್ರ ‘ಬಾಕಿ ಲಕ್ಷ್ಮಿ’ ಬಿಡುಗಡೆ - ಬಿಪಿಎಲ್‌ ರದ್ದಾದವರಿಗೆ ಇಲ್ಲ ಗೃಹಲಕ್ಷ್ಮಿ ಹಣ