ಹೊಸಪೇಟೆ: ಜಿಲ್ಲೆಯಲ್ಲಿ ಸೋಮವಾರ ತಡರಾತ್ರಿಯಿಂದ ಮಂಗಳವಾರ ಬೆಳಗ್ಗೆವರೆಗೆ ಉತ್ತಮ ಮಳೆ ಸುರಿದಿದೆ. ಕಮಲಾಪುರ ಕೆರೆ ಕೋಡಿಬಿದ್ದು ಅಪಾರ ಪ್ರಮಾಣದ ನೀರು ಹಂಪಿಯಲ್ಲಿ ಹರಿದಿದೆ. ಬಾಳೆ, ಕಬ್ಬಿನ ಗದ್ದೆಗಳಿಗೆ ನೀರು ನುಗ್ಗಿದೆ.
ಹರಪನಹಳ್ಳಿಯ ಸುತ್ತೂರು ಕ್ರಾಸ್ನಿಂದ ಹೊಸಹಳ್ಳಿ ಗ್ರಾಮದ ಕಡೆಗೆ ಹೊರಟಿದ್ದ ಮಲ್ಲೇಶ್ (61) ಎಂಬವರನ್ನು ಸ್ಥಳೀಯರು ಪಾರು ಮಾಡಿದ್ದಾರೆ. ಇದಕ್ಕೂ ಮುನ್ನ 25 ಶಾಲಾ ಮಕ್ಕಳು ಈ ಸೇತುವೆ ದಾಟಿದ್ದರು. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಆಗಿಲ್ಲ. ಕಮಲಾಪುರ ಕೆರೆ ಕೋಡಿಬಿದ್ದ ಹಿನ್ನೆಲೆಯಲ್ಲಿ ಹಂಪಿಯಲ್ಲಿ ನೀರು ಹರಿದಿದ್ದು, ವಿಜಯ ವಿಠ್ಠಲ ದೇವಸ್ಥಾನಕ್ಕೆ ತೆರಳುವ ರಸ್ತೆಯಲ್ಲೂ ನೀರು ಬಂದಿತ್ತು.
ತಾಲೂಕಿನ ಗುಂಡಲಕೆರೆ ಹಳ್ಳ ತುಂಬಿ ಹರಿದು, ವೆಂಕಟಾಪುರ ಕ್ಯಾಂಪ್ನ 70ಕ್ಕೂ ಹೆಚ್ಚು ಮನೆಗಳಿಗೆ ನೀರು ನುಗ್ಗಿದೆ. ದವಸ ಧಾನ್ಯಗಳು ನೀರು ಪಾಲಾಗಿವೆ. ಹೊಸಪೇಟೆ ಹಾಗೂ ಕಂಪ್ಲಿ ನಡುವಿನ ಸೇತುವೆಗಳು ಮುಳುಗಡೆಯಾಗಿವೆ. ಇದರಿಂದ ಐದು ಗಂಟೆಗಳ ಕಾಲ ಸಂಚಾರ ಸ್ಥಗಿತಗೊಂಡಿತ್ತು. ರಾಜ್ಯ ಹೆದ್ದಾರಿ ಮೇಲೆ ಅಂದಾಜು ಮೂರರಿಂದ ನಾಲ್ಕು ಅಡಿ ನೀರು ಹರಿದು ಅವಾಂತರ ಸೃಷ್ಟಿಯಾಗಿತ್ತು.ಕೂಡ್ಲಿಗಿಯಲ್ಲಿ ಗುಡೇಕೋಟೆ, ಹೊಸಹಳ್ಳಿ ಹೋಬಳಿ ಭಾಗದಲ್ಲಿ ಹಳ್ಳ, ಕೊಳ್ಳಗಳು ತುಂಬಿ ಹರಿಯುತ್ತಿರುವುದರಿಂದ ಹಲವೆಡೆ ಸೇತುವೆಗಳು ಮುಳುಗಿ ವಾಹನ ಸಂಚಾರಕ್ಕೆ ಅಡಚಣೆಯಾಗಿದೆ.