ಸಹಶಿಕ್ಷಕಿ ಜೊತೆ ಅನುಚಿತ ವರ್ತನೆ: ಪ್ರಭಾರ ಪ್ರಾಚಾರ್ಯಗೆ ಧರ್ಮದೇಟು

KannadaprabhaNewsNetwork |  
Published : Aug 13, 2024, 12:49 AM ISTUpdated : Aug 13, 2024, 12:50 AM IST
12ಕೆಪಿಆರ್ಸಿಆರ್ 03: ಮೆಹಬೂಬ್ ಅಲಿ  | Kannada Prabha

ಸಾರಾಂಶ

ತರಬೇತಿಗೆ ಬಂದಿದ್ದ ಸಹ ಶಿಕ್ಷಕಿ ಜೊತೆಗೆ ಪ್ರಭಾರ ಪ್ರಾಚಾರ್ಯರೊಬ್ಬರು ಅನುಚಿತವಾಗಿ ವರ್ತಿಸಿ ಧರ್ಮದೇಟು ತಿಂದಿರುವ ಘಟನೆ ನಡೆದಿದೆ.

ಕನ್ನಡಪ್ರಭ ವಾರ್ತೆ ರಾಯಚೂರು

ತರಬೇತಿಗೆ ಬಂದಿದ್ದ ಸಹ ಶಿಕ್ಷಕಿ ಜೊತೆಗೆ ಪ್ರಭಾರ ಪ್ರಾಚಾರ್ಯರೊಬ್ಬರು ಅನುಚಿತವಾಗಿ ವರ್ತಿಸಿ ಧರ್ಮದೇಟು ತಿಂದಿರುವ ಘಟನೆ ಸೋಮವಾರ ನಡೆದಿದೆ.

ನಗರದ ಹೊರವಲಯದ ಯರಮರಸ್ ಸಮೀಪದಲ್ಲಿನ ಆದರ್ಶ ವಿದ್ಯಾಲಯದ ಪ್ರಭಾರಿ ಪ್ರಾಚಾರ್ಯ ಮೆಹಬೂಬ್ ಅಲಿ ಶಿಕ್ಷಕಿ ಮೊಬೈಲ್‌ಗೆ ಕೆಟ್ಟದಾದ ಸಂದೇಶ ಕಳುಹಿಸುತ್ತಿದ್ದನು. ಇದರಿಂದ ರೋಸಿಹೋದ ಶಿಕ್ಷಕಿ ತಮ್ಮವರಿಗೆ ಮಾಹಿತಿ ತಿಳಿಸಿದ್ದರು. ಶಾಲೆಗೆ ಬಂದ ಶಿಕ್ಷಕಿ ಬಂಧುಗಳು, ಜನರು ಪ್ರಾಚಾರ್ಯನಿಗೆ ಮೈಮೇಲಿದ್ದ ಬಟ್ಟೆ ಹರಿದು ಚೆನ್ನಾಗಿ ಥಳಿಸಿದ್ದಾರೆ. ಇಷ್ಟೇ ಅಲ್ಲದೇ ತಾನು ಮಾಡಿರುವುದು ತಪ್ಪಾಗಿದ್ದು, ಇನ್ನು ಮುಂದೆ ಈ ರೀತಿಯಾಗಿ ಮಾಡುವುದಿಲ್ಲ ಎನ್ನುವ ಮುಚ್ಚಳಿಕೆ ಬರೆಯಿಸಿಕೊಂಡಿದ್ದು, ಇದೇ ವೇಳೆ ಶಿಕ್ಷಕಿ ಕಾಲಿಗೆ ಬೀದ್ದು ಕ್ಷಮೇ ಕೇಳುವಂತೆ ಮಾಡಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಸದ್ಯಕ್ಕೆ ಯಾವುದೇ ಪ್ರಕರಣ ದಾಖಲಾಗಿಲ್ಲ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಭಾರತೀಯರ ಕರೆತರಲು ವಿಶೇಷ ವಿಮಾನ ಮಾಡಿ: ಮೋದಿಗೆ ಸಿಎಂ ಸಿದ್ದು ಪತ್ರ
100ಕ್ಕೂ ಕನ್ನಡಿಗರ ಹೊತ್ತು ಬಂತು ಮೊದಲ ವಿಮಾನ