ವಿವಿಧ ಕಾಮಗಾರಿಗಳಿಗೆ ಭೂಮಿಪೂಜೆ ಕಾಮಗಾರಿಗಳ ಉದ್ಘಾಟನೆ

KannadaprabhaNewsNetwork |  
Published : Aug 16, 2024, 12:57 AM IST
ದ | Kannada Prabha

ಸಾರಾಂಶ

ಸಚಿವರು ಸುಶೀಲಾನಗರ ಗ್ರಾಮದಲ್ಲಿ ನಿರ್ಮಿಸಲಾಗಿರುವ ನೂತನ ಗ್ರಾಪಂ ಕಟ್ಟಡ ಉದ್ಘಾಟಿಸಿದರು.

ಸಂಡೂರು: ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹ್ಮದ್ ಖಾನ್ ಗುರುವಾರ ಪಟ್ಟಣದಲ್ಲಿ ವಿವಿಧ ಕಾಮಗಾರಿಗಳಿಗೆ ಭೂಮಿಪೂಜೆ ನೆರವೇರಿಸಿದರು. ಜತೆಗೆ ನಿರ್ಮಾಣ ಹಂತದ ಹಲವು ಕಾಮಗಾರಿಗಳನ್ನು ವೀಕ್ಷಿಸಿದರು.

ಭೂಮಿಪೂಜೆ: ಪಟ್ಟಣದಲ್ಲಿ ಮುಖ್ಯಮಂತ್ರಿ ವಿಶೇಷ ಅನುದಾನ ₹೨ ಕೋಟಿ ವೆಚ್ಚದಲ್ಲಿ ನಿರ್ಮಿಸಲು ಉದ್ದೇಶಿಸಿರುವ ಸರ್ಕಾರಿ ನೌಕರರ ತರಬೇತಿ ಮತ್ತು ಕೌಶಲ್ಯ ಭವನ, ₹೧೪ ಕೋಟಿ ವೆಚ್ಚದಲ್ಲಿ ಪಟ್ಟಣದಲ್ಲಿನ ಪುರಸಭೆ ವ್ಯಾಪ್ತಿಯ ವಿವಿಧ ಕಾಮಗಾರಿಗಳು ಹಾಗೂ ₹೨ ಕೋಟಿ ವೆಚ್ಚದಲ್ಲಿ ಪಟ್ಟಣದ ೫ ಪಾರ್ಕ್ಗಳ ಅಭಿವೃದ್ಧಿ ಕಾಮಾಗಾರಿ ಹಾಗೂ ಸುಶೀಲಾನಗರ ಗ್ರಾಮದಲ್ಲಿ ಶಾಲಾ ಕೊಠಡಿಗಳ ನಿರ್ಮಾಣ ಕಾಮಗಾರಿಗೆ ಉಸ್ತುವಾರಿ ಸಚಿವರು ಭೂಮಿಪೂಜೆ ನೆರವೇರಿಸಿದರು.

ಸಚಿವರು ಸುಶೀಲಾನಗರ ಗ್ರಾಮದಲ್ಲಿ ನಿರ್ಮಿಸಲಾಗಿರುವ ನೂತನ ಗ್ರಾಪಂ ಕಟ್ಟಡ ಉದ್ಘಾಟಿಸಿದರು. ಸಚಿವರು ಪಟ್ಟಣದಲ್ಲಿ ₹೨೫ ಕೋಟಿ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ತಾಲೂಕು ಆಡಳಿತ ಸೌಧ, ವಸತಿ ಯೋಜನೆ ಅಡಿಯಲ್ಲಿ ನಿರ್ಮಾಣ ಹಂತದಲ್ಲಿರುವ ೨೧೭೨ ಮನೆಗಳ ಪೈಕಿ ಈಗಾಗಲೇ ಪೂರ್ಣಗೊಂಡ ೬೦೦ ಮನೆಗಳನ್ನು ವೀಕ್ಷಿಸಿ, ಮೆಚ್ಚುಗೆ ವ್ಯಕ್ತಪಡಿಸಿದರು.

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಅಡಿಯ ವಿವಿಧ ಯೋಜನೆಗಳ ಫಲಾನುಭವಿಗಳಿಗೆ ಸಚಿವರು ಪ್ರಮಾಣಪತ್ರಗಳನ್ನು ವಿತರಿಸಿದರು. ಎಸ್.ಎಸ್.ಎಲ್.ಸಿ ಯಲ್ಲಿ ಅತಿಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್‌ಗಳನ್ನು ಸಚಿವರು ವಿತರಿಸಿದರು.

ಸಂಸದ ಈ. ತುಕಾರಾಂ ಮಾತನಾಡಿ, ಕ್ಷೇತ್ರದಲ್ಲಿ ಪ್ರಜಾಪ್ರಭುತ್ವ ಹಾಗೂ ಸಂವಿಧಾನದ ಮಾಲ್ಯಗಳನ್ನು ಎತ್ತಿ ಹಿಡಿಯುವ ಕಾರ್ಯವನ್ನು ಕ್ಷೇತ್ರದಲ್ಲಿ ಮಾಡಲಾಗಿದೆ. ೫ ಗ್ಯಾರಂಟಿ ಯೋಜನೆಗಳಿಂದ ಬಡವರಿಗೆ ತುಂಬಾ ಅನುಕೂಲವಾಗಿದೆ. ಸರ್ಕಾರದ ಅನುದಾನವನ್ನು ಎಲ್ಲಾ ಸಮಾಜದವರಿಗೆ ಸಮಾನವಾಗಿ ಹಂಚುವ ಕೆಲಸ ಮಾಡಿದ್ದೇನೆ. ಸಂಡೂರು ಕ್ಷೇತ್ರ ಹಾಗೂ ಬಳ್ಳಾರಿ ಲೋಕಸಭಾ ಕ್ಷೇತ್ರವನ್ನು ಮಾದರಿ ಕ್ಷೇತ್ರಗಳನ್ನಾಗಿಸಲು ಶ್ರಮಿಸಲಾಗುವುದು ಎಂದರು.

ಜಿಲ್ಲಾಧಿಕಾರಿ ಪ್ರಶಾಂತ್‌ಕುಮಾರ್ ಮಿಶ್ರಾ, ಎಸ್ಪಿ ಡಾ. ಶೋಭಾರಾಣಿ, ಜಿಲ್ಲಾ ಪಂಚಾಯ್ತಿ ಸಿಇಒ ರಾಹುಲ್ ಶರಣಪ್ಪ ಸಂಕನೂರ್, ಅಪರ ಜಿಲ್ಲಾಧಿಕಾರಿ ಮಹಮ್ಮದ್ ಜುಬೇರ್, ತಹಶೀಲ್ದಾರ್ ಜಿ. ಅನಿಲ್‌ಕುಮಾರ್, ತಾಲ್ಲೂಕು ಪಂಚಾಯ್ತಿ ಇಒ ಎಚ್. ಷಡಾಕ್ಷರಯ್ಯ, ಕ್ಷೇತ್ರ ಶಿಕ್ಷಣಾಧಿಕಾರಿ ಡಾ.ಐ.ಆರ್. ಅಕ್ಕಿ, ಪುರಸಭೆ ಮುಖ್ಯಾಧಿಕಾರಿ ಕೆ. ಜಯಣ್ಣ, ಸದಸ್ಯರು, ಮಾಜಿ ಶಾಸಕ ಶಿರಾಜ್ ಶೇಖ್, ಮುಖಂಡರಾದ ಸಿ. ಹಸೇನ್, ರೋಷನ್ ಜಮೀರ್, ಇಮಾಮ್ ನಿಯಾಜಿ, ಆಶಾಲತಾ ಸೋಮಪ್ಪ ಮುಂತಾದವರು ಉಪಸ್ಥಿತರಿದ್ದರು.

ಸಂಡೂರಿನ ಆದರ್ಶ ಕಲ್ಯಾಣ ಮಂಟಪದಲ್ಲಿ ಗುರುವಾರ ನಡೆದ ಕಾರ್ಯಕ್ರಮದಲ್ಲಿ ಸಚಿವ ಜಮೀರ್ ಅಹ್ಮದ್ ಖಾನ್ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಅಡಿಯಲ್ಲಿ ವಿವಿಧ ಯೋಜನೆಗಳ ಫಲಾನುಭವಿಗಳಿಗೆ ಮಂಜೂರಾಗಿ ಪ್ರಮಾಣಪತ್ರಗಳನ್ನು ವಿತರಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

400 ಕೋಟಿ ರು. ದರೋಡೆ ಪ್ರಮುಖ ಆರೋಪಿ ಬಂಧನ
ಕಾಂಗ್ರೆಸ್‌ನವರಿಗೆ ಬಜೆಟ್ ಅರ್ಥವಾಗಲ್ಲ: ಜೋಶಿ ಚಾಟಿ