ಕನ್ನಡಪ್ರಭ ವಾರ್ತೆ ಮಡಿಕೇರಿ
ಉಮ್ಮತ್ ಒನ್ ಕೊಡಗು ಚಾರಿಟೇಬಲ್ ಟ್ರಸ್ಟ್ ವತಿಯಿಂದ ನಗರದ ಮಹದೇವಪೇಟೆಯಲ್ಲಿ ಸಮುದಾಯ ಸಂಶೋಧನೆ ಮತ್ತು ಅಭಿವೃದ್ಧಿ ಕೇಂದ್ರವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಶಿಕ್ಷಣದ ಸಂಪರ್ಕದ ಕೊಂಡಿಯಾಗಿರುವ ಉಮ್ಮತ್ ಒನ್ ಕೊಡಗು ಚಾರಿಟೇಬಲ್ ಟ್ರಸ್ಟ್ ನ ದೊಡ್ಡ ಉದ್ದೇಶ ಯಶಸ್ವಿಯಾಗಲಿ ಎಂದು ಹಾರೈಸಿದರು. ಸಂಶೋಧನೆ ಮತ್ತು ಅಭಿವೃದ್ಧಿ ಕೇಂದ್ರ ಸರ್ವಜನಾಂಗದವರಿಗೆ ಪ್ರಯೋಜನ ಆಗಬೇಕು, ಈ ಸಂಸ್ಥೆ ಇತರರಿಗೆ ಪ್ರೇರಣೆಯಾಗಬೇಕು. ಸರ್ಕಾರದಿಂದ ಯಾವುದೇ ಸಂದರ್ಭದಲ್ಲಿ ಸಹಕಾರ ಸಿಗಲಿದೆ ಎಂದರು.ಉತ್ತಮ ಸಮಾಜ ದೇಶಕ್ಕೆ ಅತ್ಯಗತ್ಯ, ಯುವ ಜನತೆ ಶಿಕ್ಷಣದ ಮೂಲಕ ಉತ್ತಮ ವ್ಯಕ್ತಿತ್ವ ರೂಪಿಸಿಕೊಳ್ಳಬೇಕು ಮತ್ತು ಪ್ರೀತಿ, ವಿಶ್ವಾಸ ಸಂಪಾದಿಸಬೇಕು. ಸಮಾಜ ಕಟ್ಟುವುದಕ್ಕಾಗಿ ಯುವ ಜನಾಂಗವನ್ನು ಬೆಳೆಸಬೇಕೇ ಹೊರತು ದು:ಖ ಸೃಷ್ಟಿಗಾಗಿ ಅಲ್ಲ. ಯುವಕರಲ್ಲಿ ಸಕರಾತ್ಮಕ ಚಿಂತನೆ ಬರುವಂತೆ ನೋಡಿಕೊಳ್ಳಬೇಕು, ಆಗ ಮಾತ್ರ ನಾವು ಸಮಾಜಕ್ಕೆ ಉತ್ತಮ ಕೊಡುಗೆ ನೀಡಲು ಸಾಧ್ಯ. ಶಿಕ್ಷಣದ ಮೂಲಕ ಒಬ್ಬ ಅಧಿಕಾರಿಯನ್ನು ನೀಡುವುದರ ಜೊತೆಗೆ ಒಬ್ಬ ಉತ್ತಮ ಜನಪ್ರತಿನಿಧಿಯನ್ನು ಕೂಡ ನೀಡುವ ಅನಿವಾರ್ಯತೆ ಇದೆ ಎಂದು ಯು.ಟಿ.ಖಾದರ್ ತಿಳಿಸಿದರು.
ಮಾಜಿ ಶಾಸಕ ಕೆ.ಎಂ.ಇಬ್ರಾಹಿಂ ಮಾಸ್ಟರ್ ಮಾತನಾಡಿ, ಮಡಿಕೇರಿ ಕೇಂದ್ರದಲ್ಲಿ ಸುಸಜ್ಜಿತವಾದ ಸಂಶೋಧನೆ ಮತ್ತು ಅಭಿವೃದ್ಧಿ ಕೇಂದ್ರ ಆರಂಭಗೊಂಡಿದ್ದು, ಎಲ್ಲರೂ ಇದರ ಪ್ರಯೋಜನ ಪಡೆದುಕೊಳ್ಳಬೇಕು. ಸಮಾಜದ ಸರ್ವರೂ ಪ್ರೋತ್ಸಾಹ ನೀಡಬೇಕು ಎಂದು ಹೇಳಿದರು.
ನಿವೃತ್ತ ಪೊಲೀಸ್ ಅಧಿಕಾರಿ ಜಿ.ಎ.ಬಾವ ಮಾತನಾಡಿ, ಉತ್ತಮ ಗುರಿಯನ್ನು ಸಾಧಿಸುವ ನಿಟ್ಟಿನಲ್ಲಿ ನಾವು ಕೆಲಸ ಮಾಡಬೇಕು, ಸ್ವಾರ್ಥವನ್ನು ಬಿಟ್ಟು ಎಲ್ಲಾ ಸಮುದಾಯವನ್ನು ಸೇರಿಸಿಕೊಂಡು ಉತ್ತಮ ಶಿಕ್ಷಣ ನೀಡುತ್ತಿರುವುದು ಶ್ಲಾಘನೀಯ ಎಂದರು.
ಪುಣೆಯ ಅನಿಶ್ ಡೆಫೆನ್ಸ್ ಕ್ಯಾರಿಯರ್ ಇನ್ಸಿಟ್ಯೂಟ್ನ ಸ್ಥಾಪಕ ನಿರ್ದೇಶಕ ಅನಿಸ್ ಕುಟ್ಟಿ ಮಾತನಾಡಿ, ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಯಾವ ರೀತಿಯ ಪೂರ್ವ ತಯಾರಿ ನಡೆಸಬೇಕು ಮತ್ತು ಆಯ್ಕೆ ಪ್ರಕ್ರಿಯೆಗಳು ಹೇಗೆ ನಡೆಯುತ್ತದೆ ಎನ್ನುವ ಕುರಿತು ಮಾರ್ಗದರ್ಶನ ನೀಡಿದರು. ಅಲ್ಲದೆ ವಿದ್ಯಾರ್ಥಿಗಳು ಹಾಗೂ ಪೋಷಕರೊಂದಿಗೆ ಸಂವಾದ ನಡೆಸಿದರು.