ಕನ್ನಡಪ್ರಭ ವಾರ್ತೆ ಸೋಮವಾರಪೇಟೆ
ನಂತರ ಮಾತನಾಡಿದ ಅವರು, ಕೊಡಗು ಗುಡ್ಡಗಾಡು ಪ್ರದೇಶವಾಗಿರುವುದರಿಂದ ಬೆಂಕಿ ಅನಾಹುತ ಸಂಭವಿಸಿದ ಸಂದರ್ಭ ಸೂಕ್ತ ಸಮಯದಲ್ಲಿ ಸ್ಥಳಕ್ಕೆ ತಲುಪಿಸಲು ಸುಸಜ್ಜಿತ ವಾಹನಗಳು ಬೇಕಾಗಿವೆ. ಈ ಬಗ್ಗೆ ಗೃಹಸಚಿವ ಜಿ.ಪರಮೇಶ್ವರ್ ಅವರೊಂದಿಗೆ ಚರ್ಚಿಸಲಾಗುವುದು. ಅಲ್ಲದೆ ಅಗ್ನಿಶಾಮಕ ಸಿಬ್ಬಂದಿಗೆ ವಸತಿ ಗೃಹ ನಿರ್ಮಿಸಲು ಅನುದಾನಕ್ಕೆ ಮನವಿ ಮಾಡುತ್ತೇನೆ ಎಂದು ಭರವಸೆ ನೀಡಿದರು.
ಅರಣ್ಯ ಇಲಾಖೆ ಮತ್ತು ಅಗ್ನಿಶಾಮಕ ಇಲಾಖೆ ಹೊಂದಾಣಿಕೆಯಿಂದ ಕೆಲಸ ಮಾಡಬೇಕು. ಬೇಸಿಗೆಯಲ್ಲಿ ಕಾಡ್ಗಿಚ್ಚಿನಿಂದ ಅರಣ್ಯವನ್ನು ರಕ್ಷಿಸಬೇಕಾದ ಗುರುತರ ಜವಾಬ್ದಾರಿ ಇಲಾಖೆಗಳ ಮೇಲಿದೆ. ಸಾರ್ವಜನಿಕರ ಸಹಕಾರ ಪಡೆದು ಕೆಲಸ ಮಾಡಬೇಕು ಎಂದು ಹೇಳಿದರು.ಚೌಡ್ಲು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಗೀತಾ, ಪಟ್ಟಣ ಪಂಚಾಯಿತಿ ಅಧ್ಯಕ್ಷೆ ಜಯಂತಿ ಶಿವಕುಮಾರ್, ಮೈಸೂರು ಪ್ರಾಂತ್ಯ ಮುಖ್ಯ ಅಗ್ನಿಶಾಮಕ ಅಧಿಕಾರಿ ಪಿ.ಎಸ್.ಜಯರಾಮಯ್ಯ, ಅಗ್ನಿಶಾಮಕ ಪ್ರಾದೇಶಿಕ ಅಧಿಕಾರಿ ಪಿ. ಚಂದನ್, ಜಿಲ್ಲಾ ಅಗ್ನಿಶಾಮಕ ಅಧಿಕಾರಿ ಪಿ.ರಾಜೇಶ್ ಇದ್ದರು.