ಪಾಂಡವಪುರ:
ಪಟ್ಟಣದ ಲಕ್ಷ್ಮೀ ಆಸ್ಪತ್ರೆಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಆಸ್ಪತ್ರೆಗೆ ಉದ್ಘಾಟನೆ ಸಮಾರಂಭದಲ್ಲಿ ಮಾಜಿ ಸಚಿವ ಸಿ.ಎಸ್.ಪುಟ್ಟರಾಜು ಹಾಗೂ ಶಾಸಕ ದರ್ಶನ್ಪುಟ್ಟಣ್ಣಯ್ಯ ಸೇರಿದಂತೆ ತಾಲೂಕಿನ ಅನೇಕ ಗಣ್ಯರು ಭಾಗವಹಿಸಲಿದ್ದಾರೆ ಎಂದರು.
ಲಕ್ಷ್ಮಿ(ಕೆವಿಸಿ) ಸೂಪರ್ ಸ್ಟೆಷಾಲಿಟಿ ಆಸ್ಪತ್ರೆಯಲ್ಲಿ ಸುಸಜ್ಜಿತ ಹಾಗೂ ಆತ್ಯಾಧುನಿಕ ತಂತ್ರಜ್ಞಾನದಡಿ ಚಿಕಿತ್ಸೆ ನೀಡುವ ಗುರಿ ಹೊಂದಲಾಗಿದೆ. ಆಸ್ಪತ್ರೆಯಲ್ಲಿ ಪ್ರಸ್ತುತ 50 ಹಾಸಿಗೆಯ ಸಾಮರ್ಥ್ಯದ ಸೌಲಭ್ಯ ಹೊಂದಿದೆ. ರೋಗಿಗಳಿಗೆ ಅನುಕೂಲವಾಗುವ ಕೊಠಡಿಗಳು, ನುರಿತ ವೈದ್ಯರ ಸೇವೆ ಸಿಗಲಿದೆ. ಎಲ್ಲಾ ತರಹದ ಶಸ್ತ್ರ ಚಿಕಿತ್ಸೆ ವ್ಯವಸ್ಥೆ, ಆಂಬ್ಯೂಲೆನ್ಸ್ ಸೇವೆಯ ಸೌಲಭ್ಯ ಹೊಂದಿದೆ. ಜತೆಗೆ ಸರ್ಕಾರ ಯೋಜನೆಗಳಾದ ಯಶಸ್ವಿನಿ, ಬಿಪಿಎಲ್ ಕಾರ್ಡ್ ಸೇರಿದಂತೆ ಆರೋಗ್ಯ ವಿಮೆ ಸೌಲಭ್ಯ ಒಳಪಟ್ಟಿದೆ ಎಂದರು.ಗ್ರಾಮೀಣ ಪ್ರದೇಶದ ಜನರೇ ಹೆಚ್ಚಾಗಿರುವ ಈ ಪ್ರದೇಶದ ಸುತ್ತಮುತ್ತಲ ಜನರಿಗೆ ಉತ್ತಮ ಸೇವೆ ನೀಡಲು ನಮ್ಮ ಆಸ್ಪತ್ರೆ ಸಿದ್ಧಗೊಂಡಿದೆ. ಕೆವಿಸಿ ಆಸ್ಪತ್ರೆಯನ್ನು ವೈದ್ಯರೇ ಸೇರಿ ಕಟ್ಟಿರುವುದರಿಂದ ರೋಗಿಗಳಿಗೆ ಉತ್ತಮ ಸೇವೆ ನೀಡಲಿದ್ದೇವೆ. ಆರಂಭದಲ್ಲಿ ಮೆಡಿಷನ್ಗೆ ಶೇ.15 ಹಾಗೂ ಚಿಕಿತ್ಸೆಗೆ ಶೇ.20ರಷ್ಟು ರಿಯಾಯ್ತಿ ಸೌಲಭ್ಯವನ್ನು ಸಾರ್ವಜನಿಕರಿಗೆ ನೀಡಲಾಗುತ್ತಿದೆ ಎಂದರು.
ಶ್ರೀ ಮರೀದೇವರು ಶಿವಯೋಗಿಗಳ 132ನೇ ವರ್ಷದ ಜಯಂತಿ: ಎಸ್.ಆನಂದ್
ಬೇಬಿ ದುರ್ದೇಂಡೇಶ್ವರ ಮಠದ ಲಿಂಗೈಕ್ಯ ಶ್ರೀಮರೀದೇವರು ಶಿವಯೋಗಿ ಮಹಾಸ್ವಾಮಿಗಳ 132ನೇ ವರ್ಷದ ಜಯಂತಿ ಹಾಗೂ ಧಾರ್ಮಿಕ ಕಾರ್ಯಕ್ರಮ ಫೆ.1ರಂದು ಶ್ರೀರಂಗಪಟ್ಟಣದ ಚಂದ್ರವನ ಆಶ್ರಮದಲ್ಲಿ ಏರ್ಪಡಿಸಲಾಗಿದೆ ಎಂದು ಅಖಿಲ ಭಾರತ ವೀರಶೈವ-ಲಿಂಗಾಯತ ಮಹಾಸಭಾ ಜಿಲ್ಲಾಧ್ಯಕ್ಷ ಎಸ್.ಆನಂದ್ ತಾಳಶಾಸನ ತಿಳಿಸಿದರು.
ಬೇಬಿ ದುರ್ದೇಂಡೇಶ್ವರಮಠ ಹಾಗೂ ಚಂದ್ರವನ ಆಶ್ರಮವು ಸಾಮಾಜಿಕ ಸೇವಾ ಕಾರ್ಯದಲ್ಲಿ ತೊಡಗಿಸಿಕೊಂಡು ಸರ್ವಧರ್ಮದ ಶಾಂತಿಯ ತೋಟದಂತೆ ಕೆಲಸ ಮಾಡುತ್ತಿದೆ. ಮಠಕ್ಕೆ ಯಾವುದೇ ಆಸ್ತಿ ಇಲ್ಲವಾದರೂ ಸಮಾಜದಲ್ಲಿ ಭಿಕ್ಷಾಟನೆ ಮಾಡಿ ಮಠವನ್ನು ಬೆಳೆಸುವ ಜತೆಗೆ ಸಾಮಾಜಿಕ ಸೇವಾ ಕಾರ್ಯ ಮಾಡಲಾಗಿದೆ ಎಂದರು.
ಸುದ್ದಿಗೋಷ್ಠಿಯಲ್ಲಿ ಎಚ್.ಆರ್.ಧನ್ಯಕುಮಾರ್, ಸಾಹಿತಿ ಚಂದ್ರಶೇಖರಯ್ಯ, ಈರಣ್ಣ ಇದ್ದರು.