ಲಯನ್ಸ್ ಸಂಸ್ಥೆಯ ನೂತನ ಪದಾಧಿಕಾರಿಗಳ ಪದಗ್ರಹಣ

KannadaprabhaNewsNetwork |  
Published : Jul 07, 2024, 01:15 AM IST
ಲಯನ್ಸ್ ಇಂಟರ್ ನ್ಯಾಷನಲ್, ಲಯನ್ಸ್ ಸಂಸ್ಥೆ ಚಾಮರಾಜನಗರ ಘಟಕದ ವತಿಯಿಂದ 2024-25 ನೇ ಸಾಲಿನ ಲಯನ್ಸ್ ಸಂಸ್ಥೆ ಅಧ್ಯಕ್ಷ  ಡಾ ಎಂ .ಬಸವ ರಾಜೇಂದ್ರ ಹಾಗೂ ನೂತನ ಪದಾಧಿಕಾರಿಗಳಿಗೆ ಪ್ರತಿಜ್ಞಾ ವಿಧಿ ಬೋಧನಾ ಕಾರ್ಯಕ್ರಮದಲ್ಲಿ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿ  | Kannada Prabha

ಸಾರಾಂಶ

ಕಾಯಿಲೆ ಬಂದ ನಂತರ ಚಿಕಿತ್ಸೆ ಪಡೆಯುದಕ್ಕಿಂತ ಕಾಯಿಲೆ ಬಾರದಂತೆ ನೋಡಿಕೊಳ್ಳುವುದು ಅತೀ ಮುಖ್ಯ. ಈ ನಿಟ್ಟಿನಲ್ಲಿ ಲಯನ್ಸ್ ಸಂಸ್ಥೆ ಮೂಲಕ ಪಟ್ಟಣ ಹಾಗೂ ಅಗತ್ಯವಿರುವೆಲ್ಲೆಡೆ ಆರೋಗ್ಯ ಶಿಬಿರಗಳನ್ನು ಹಮ್ಮಿಕೊಳ್ಳಲಾಗುವುದು ಎಂದು ಲಯನ್ಸ್ ಸಂಸ್ಥೆಯ ಚಾಮರಾಜನಗರ ಘಟಕದ ನೂತನ ಅಧ್ಯಕ್ಷ ಡಾ.ಎಂ.ಬಸವ ರಾಜೇಂದ್ರ ತಿಳಿಸಿದರು.

ಕನ್ನಡಪ್ರಭ ವಾರ್ತೆ ಚಾಮರಾಜನಗರ

ಕಾಯಿಲೆ ಬಂದ ನಂತರ ಚಿಕಿತ್ಸೆ ಪಡೆಯುದಕ್ಕಿಂತ ಕಾಯಿಲೆ ಬಾರದಂತೆ ನೋಡಿಕೊಳ್ಳುವುದು ಅತೀ ಮುಖ್ಯ. ಈ ನಿಟ್ಟಿನಲ್ಲಿ ಲಯನ್ಸ್ ಸಂಸ್ಥೆ ಮೂಲಕ ಪಟ್ಟಣ ಹಾಗೂ ಅಗತ್ಯವಿರುವೆಲ್ಲೆಡೆ ಆರೋಗ್ಯ ಶಿಬಿರಗಳನ್ನು ಹಮ್ಮಿಕೊಳ್ಳಲಾಗುವುದು ಎಂದು ಲಯನ್ಸ್ ಸಂಸ್ಥೆಯ ಚಾಮರಾಜನಗರ ಘಟಕದ ನೂತನ ಅಧ್ಯಕ್ಷ ಡಾ.ಎಂ.ಬಸವ ರಾಜೇಂದ್ರ ತಿಳಿಸಿದರು. ಚಾಮರಾಜೇಶ್ವರ ದೇವಾಲಯದ ಆವರಣದಲ್ಲಿ ಲಯನ್ಸ್ ಇಂಟರ್ ನ್ಯಾಷನಲ್, ಲಯನ್ಸ್ ಸಂಸ್ಥೆ ಚಾಮರಾಜನಗರ ಘಟಕದ ವತಿಯಿಂದ 2024-25 ನೇ ಸಾಲಿನ ಲಯನ್ಸ್ ಸಂಸ್ಥೆಯ ನೂತನ ಪದಾಧಿಕಾರಿಗಳಿಗೆ ಪ್ರತಿಜ್ಞಾವಿಧಿ ಬೋಧನಾ ಕಾರ್ಯಕ್ರಮದಲ್ಲಿ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿ ಮಾತನಾಡಿದರು.

ಸಾರ್ವಜನಿಕ ಹಿತದೃಷ್ಟಿಯಿಂದ ನಮ್ಮ ಟ್ರಸ್ಟ್ ನಿಂದ ಕಾಡಂಚಿನ ಗ್ರಾಮಗಳು ಹಾಗೂ ಗ್ರಾಮಾಂತರ ಪ್ರದೇಶಗಳಲ್ಲಿ ಆರೋಗ್ಯ ಶಿಬಿರಗಳನ್ನು ಹಮ್ಮಿಕೊಂಡು ಆರೋಗ್ಯ ಸೇವೆ ಒದಗಿಸಲಾಗುತ್ತಿತ್ತು. ಇನ್ನು ಮುಂದೆ ಲಯನ್ಸ್ ಸಂಸ್ಥೆ ಹಾಗೂ ನಮ್ಮ ಟ್ರಸ್ಟ್ ವತಿಯಿಂದ ಪಟ್ಟಣ ಪ್ರದೇಶಗಳಲ್ಲಿಯೂ ಆರೋಗ್ಯ ಅರಿವು ತಪಾಸಣಾ ಶಿಬಿರಗಳನ್ನು ಹಮ್ಮಿಕೊಳ್ಳುವ ಮೂಲಕ ಕಾಯಿಲೆ ಬಾರದಂತೆ ಸಾರ್ವಜನಿಕರಲ್ಲಿ ಅರಿವು ಮೂಡಿಸಲಾಗುವುದು ಎಂದರು.

ಸರ್ಕಾರಿ ಶಾಲಾ ಮಕ್ಕಳಿಗೆ, ಸರ್ಕಾರಿ ಶಾಲೆಗೆ ಬೇಕಾದ ಸವಲತ್ತುಗಳನ್ನು ಗುರುತಿಸಿ ನೀಡಲಾಗುವುದು. ಈಗಾಗಲೇ ನಗರದ ಪಿಡಬ್ಲ್ಯೂಡಿ ಕಾಲೋನಿಯಲ್ಲಿರುವ ಪಿಡಬ್ಲ್ಯೂಡಿ ಶಾಲೆಯನ್ನು ನಮ್ಮ ಟ್ರಸ್ಟ್ ವತಿಯಿಂದ ದತ್ತು ಸ್ವೀಕರಿಸಿ ಆರು ಕೊಠಡಿಗಳ ನಿರ್ಮಾಣ ಹಾಗೂ ವಾಹನ ವ್ಯವಸ್ಥೆ ಮಾಡಿ ದಾಖಲಾತಿ ಹೆಚ್ಚಿಸಲಾಗಿದೆ. ಪಿಯು ವರೆಗೂ ಅಲ್ಲಿಯೇ ಶೈಕ್ಷಣಿಕ ಸೇವೆ ಒದಗಿಸುವ ದೃಷ್ಟಿಯಿಂದ ನಮ್ಮ ಟ್ರಸ್ಟ್ ಹಾಗೂ ಲಯನ್ಸ್ ಸಂಸ್ಥೆ ಮೂಲಕ ಶಾಲೆ ಅಭಿವೃದ್ಧಿ ಪಡಿಸಲಾಗುವುದು ಎಂದರು.

ಲಯನ್ಸ್ ಮಾಜಿ ರಾಜ್ಯಪಾಲ ಎಂ.ವಿ ದೇವಿ ಪ್ರಸಾದ್ ನೂತನ ಸದಸ್ಯರಿಗೆ ಹಾಗೂ ಅಧ್ಯಕ್ಷರಿಗೆ ಪ್ರತಿಜ್ಞಾ ವಿಧಿ ಬೋಧಿಸಿ ಮಾತನಾಡಿ, ಉತ್ತಮರು ಉತ್ತಮವಾದ ಸೇವೆಗೆ ಬಂದಾಗ ಸಮಾಜ ಸೇವೆ ಅಚ್ಚುಕಟ್ಟಾಗಿ ನಡೆಯುತ್ತೆ ಎಂದರು.

ಇದೇ ವೇಳೆ ಲಯನ್ಸ್ ಸಂಸ್ಥೆಯ ನೂತನ ಸದಸ್ಯರಾಗಿ ಪ್ರಕಾಶ್ ಡಿ, ಸಂಜಯ್, ರಮೇಶ್ ರೋಹರ್, ರಮೇಶ್ ಚೌದರಿ, ಶರತ್ ಕಲಾದೀಂ, ಚನ್ನಿಗ್ ಲಾಲ್ ಪಲೀಕ್, ಸಿ.ಎಂ.ವೆಂಕಟೇಶ್ ಹಾಗೂ ಅನಿಲ್ ಶಿರ್ವಿ ಪ್ರತಿಜ್ಞಾ ವಿಧಿ ಸ್ವೀಕರಿಸಿದರು. ಎಸ್ಸೆಸ್ಸೆಲ್ಸಿಯಲ್ಲಿ ಅತೀ ಹೆಚ್ಚು ಅಂಕ ಪಡೆದ ಆರ್ಯ ವರುಣ್ ಹಾಗೂ ದ್ವಿತೀಯ ಪಿಯುಸಿಯಲ್ಲಿ ಅತೀ ಹೆಚ್ಚು ಅಂಕ ಪಡೆದ ಪೂರ್ಣಿಮಾರನ್ನು ಪುರಸ್ಕರಿಸಲಾಯಿತು.

ಲಯನ್ಸ್ ನಿಕಟಪೂರ್ವ ಅಧ್ಯಕ್ಷ ಪ್ರಕಾಶ್‌ ಜೈನ್, ಖಜಾಂಚಿ ಲೋಕೇಶ್ ಕುಮಾರ್ ಜೈನ್, ಕಾರ್ಯದರ್ಶಿ ಟಿ.ಎಂ.ರಂಗಸ್ವಾಮಿ, ವಲಯ ಅಧ್ಯಕ್ಷ ಜಯ ಕುಮಾರ್, ಪ್ರಾಂತೀಯ ಅಧ್ಯಕ್ಷ ರವಿ ಕುಮಾರ್, ಮೈಸೂರಿನ ವಿಸ್ಮಯ್‌, ಪ್ರಭುಸ್ವಾಮಿ, ಚೇತನ್, ಹೊಸೂರು ಜಗದೀಶ್ ಹಾಜರಿದ್ದರು.

PREV

Recommended Stories

ಮಾನಸಿಕ ದೈಹಿಕ ಸದೃಢತೆಗೆ ಕ್ರೀಡೆ ಸಹಕಾರಿ
ಸಭೆಯಲ್ಲಿ ಪುರಸಭೆ ಮಳಿಗೆಗಳ ಹರಾಜಿನ ಗದ್ದಲ