ಕನ್ನಡಪ್ರಭ ವಾರ್ತೆ ಮಂಗಳೂರು
ಮಂಗಳೂರಿನ ಅಡಿಷನಲ್ ಎಸ್ಪಿ ಅನಿಲ್ ಕುಮಾರ್ ಎಸ್. ಭೂಮರಡ್ಡಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಯುವಜನತೆ ಸಮಾಜಮುಖಿ ಚಿಂತನೆಗಳನ್ನು ಬೆಳೆಸಿಕೊಳ್ಳಬೇಕು. ಸಮಾಜದಲ್ಲಿ ಜವಾಬ್ದಾರಿಯುತ ನಾಗರಿಕರಾಗಿ ಬಾಳುವುದು ಇಂದಿನ ತುರ್ತು ಅಗತ್ಯವಾಗಿದೆ. ಎನ್ಎಸ್ಎಸ್ನಂತಹ ವೇದಿಕೆಗಳು ವಿದ್ಯಾರ್ಥಿಗಳಲ್ಲಿ ದೇಶಪ್ರೇಮ, ಶಿಸ್ತು ಮತ್ತು ಸೇವಾ ಮನೋಭಾವವನ್ನು ಬೆಳೆಸಲು ಅತ್ಯುತ್ತಮ ಮಾರ್ಗವಾಗಿವೆ. ಯುವಜನತೆ ದುಶ್ಚಟಗಳಿಂದ ದೂರವಿದ್ದರೆ ಮಾತ್ರ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ. ಯುವಕರು ಮನಸ್ಸು ಮಾಡಿದರೆ ಏನನ್ನು ಬೇಕಾದರೂ ಸಾಧಿಸಬಹುದು. ವ್ಯಸನ ಮತ್ತು ನಶೆಯ ದಾಸರಾದವರನ್ನು ಮತ್ತೆ ಮುಖ್ಯವಾಹಿನಿಗೆ ತಂದು ದುಶ್ಚಟಗಳಿಂದ ಮುಕ್ತರನ್ನಾಗಿಸುವ ಶಕ್ತಿ ಯುವಜನತೆಗಿದೆ ಎಂದರು.
ಶ್ರೀ ನವಾಕ್ಷರಿ ಬಾರ್ಕೂರಿನ ಎನ್.ಆರ್.ದಾಮೋದರ ಶರ್ಮ ಮಾತನಾಡಿ, ಪೌರ ಜವಾಬ್ದಾರಿ ಎಂಬುದು ಪ್ರತಿಯೊಬ್ಬ ಯುವಜನತೆಯ ಕರ್ತವ್ಯ. ಈ ನೆಲವನ್ನು ಬದಲಾಯಿಸುವ ಮತ್ತು ಸುಂದರ ಸಮಾಜವನ್ನು ಕಟ್ಟುವ ದೊಡ್ಡ ಜವಾಬ್ದಾರಿ ಇಂದಿನ ವಿದ್ಯಾರ್ಥಿಗಳ ಕೈಯಲ್ಲಿದೆ ಎಂದರು.ಕಾಲೇಜಿನ ಪ್ರಾಂಶುಪಾಲ ಡಾ.ಭಾನುಪ್ರಕಾಶ್ ಬಿ.ಇ. ಅಧ್ಯಕ್ಷತೆ ವಹಿಸಿದ್ದರು.
ಕಾಲೇಜಿನ ಎನ್ಎಸ್ಎಸ್ ಸ್ವಯಂಸೇವಕರು ‘ಈ ಪಟ್ಟಣಕ್ಕೆ ಏನಾಯ್ತು?’ ಎಂಬ ನಾಟಕ ಪ್ರದರ್ಶಿಸಿದರು.