ಅಂಚೆ ಇಲಾಖೆಯನ್ನು ಮೇಲ್ದರ್ಜೆಗೇರಿಸುತ್ತಿರುವ ಕೇಂದ್ರ

KannadaprabhaNewsNetwork |  
Published : Mar 05, 2024, 01:31 AM IST
3 | Kannada Prabha

ಸಾರಾಂಶ

ನಾನು ಸಂಸದನಾಗುವ ಮುನ್ನ ಮೈಸೂರಿಗೆ ಸಮರ್ಪಕವಾದ ಸಂಪರ್ಕದ ಕೊರತೆ ಇತ್ತು. ಇದರಿಂದಾಗಿ ಕೈಗಾರಿಕೆಗಳು ಬರುವುದಕ್ಕೆ ತೊಡಕಾಗಿತ್ತು. ಹೀಗಾಗಿ, ನಾನು ಹೆದ್ದಾರಿ, ರೈಲು ಹಾಗೂ ವಿಮಾನ ಸಂಪರ್ಕ ವ್ಯವಸ್ಥೆ ವೃದ್ಧಿಗೆ ಆದ್ಯತೆ ನೀಡಿದ್ದೇನೆ ಎಂದು ಅವರು ಹೇಳಿದರು.ಹಿಂದಿದ್ದ ಸಂಸದರು 2004 ರಿಂದ 2014 ರವರೆಗೆ ಒಂದೇ ಒಂದು ಹೊಸ ರೈಲನ್ನೂ ತಂದಿರಲಿಲ್ಲ. ನಾನು ಹಲವು ರೈಲುಗಳ ಸಂಪರ್ಕ ಕಲ್ಪಿಸಿದ್ದೇನೆ. ವಿಮಾನ ನಿಲ್ದಾಣದ ರನ್ ವೇ ವಿಸ್ತರಣೆಗೂ ಕ್ರಮ ಕೈಗೊಳ್ಳಲಾಗಿದೆ. ಅದನ್ನು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನಾಗಿ ಮೇಲ್ದರ್ಜೆಗೆ ಏರಿಸಲಾಗುವುದು. ಮೈಸೂರು ಈಗ ದೊಡ್ಡ ಮಟ್ಟದ ಆಭಿವೃದ್ಧಿಗೆ ಸಜ್ಜಾಗಿದೆ. ಹಲವು ಕಂಪನಿಗಳು ಬರಲಿವೆ ಎಂದು ಅವರು ತಿಳಿಸಿದರು

- ಅಂಚೆ ತರಬೇತಿ ಕೇಂದ್ರದಲ್ಲಿ ಹಂಸ- ಮಹಿಳಾ ವಸತಿನಿಲಯ ಕಟ್ಟಡ ಸಂಕೀರ್ಣ ಉದ್ಘಾಟನೆ----

ಕನ್ನಡಪ್ರಭ ವಾರ್ತೆ ಮೈಸೂರು

ಕೇಂದ್ರದಲ್ಲಿ ಕಾಂಗ್ರೆಸ್ ಸರ್ಕಾರವಿದ್ದಾಗ ಅಂಚೆ ಇಲಾಖೆ ವಿನಾಶದ ಅಂಚಿನಲ್ಲಿತ್ತು.ಅನುದಾನ ನೀಡುವ ಕೆಲಸವನ್ನೂ ಆಗ ಮಾಡಿರಲಿಲ್ಲ. ಆದರೆ, ನಮ್ಮ ಸರ್ಕಾರವು ಅಂಚೆ ಇಲಾಖೆಯನ್ನು ಮೇಲ್ದರ್ಜೆಗೇರಿಸುತ್ತಿದೆ ಎಂದು ಸಂಸದ ಪ್ರತಾಪ್ ಸಿಂಹ ತಿಳಿಸಿದರು.

ನಜರ್ ಬಾದ್ ನಲ್ಲಿರುವ ಅಂಚೆ ತರಬೇತಿ ಕೇಂದ್ರದ (ಪಿಟಿಸಿ) ಆವರಣದಲ್ಲಿ 4.28 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಿರುವ ಹಂಸ- ಮಹಿಳಾ ವಸತಿನಿಲಯ ಕಟ್ಟಡ ಸಂಕೀರ್ಣವನ್ನು ಸೋಮವಾರ ಉದ್ಘಾಟಿಸಿ ಮಾತನಾಡಿದ ಅವರು, ಇನ್ನೂ 4- 5 ದಿನಗಳಲ್ಲಿ ಲೋಕಸಭಾ ಚುನಾವಣೆಯ ಅಧಿಸೂಚನೆ ಹೊರಬೀಳುವ ಸಾಧ್ಯತೆ ಇದೆ.ಹೀಗಾಗಿ, ಹಲವು ಅಭಿವೃದ್ಧಿ ಕಾರ್ಯಕ್ರಮಗಳನ್ನು ದೇಶಕ್ಕೆ ಸಮರ್ಪಿಸುತ್ತಿದ್ದೇವೆ ಎಂದರು.

ನಾನು ಸಂಸದನಾಗುವ ಮುನ್ನ ಮೈಸೂರಿಗೆ ಸಮರ್ಪಕವಾದ ಸಂಪರ್ಕದ ಕೊರತೆ ಇತ್ತು. ಇದರಿಂದಾಗಿ ಕೈಗಾರಿಕೆಗಳು ಬರುವುದಕ್ಕೆ ತೊಡಕಾಗಿತ್ತು. ಹೀಗಾಗಿ, ನಾನು ಹೆದ್ದಾರಿ, ರೈಲು ಹಾಗೂ ವಿಮಾನ ಸಂಪರ್ಕ ವ್ಯವಸ್ಥೆ ವೃದ್ಧಿಗೆ ಆದ್ಯತೆ ನೀಡಿದ್ದೇನೆ ಎಂದು ಅವರು ಹೇಳಿದರು.

ಹಿಂದಿದ್ದ ಸಂಸದರು 2004 ರಿಂದ 2014 ರವರೆಗೆ ಒಂದೇ ಒಂದು ಹೊಸ ರೈಲನ್ನೂ ತಂದಿರಲಿಲ್ಲ. ನಾನು ಹಲವು ರೈಲುಗಳ ಸಂಪರ್ಕ ಕಲ್ಪಿಸಿದ್ದೇನೆ. ವಿಮಾನ ನಿಲ್ದಾಣದ ರನ್ ವೇ ವಿಸ್ತರಣೆಗೂ ಕ್ರಮ ಕೈಗೊಳ್ಳಲಾಗಿದೆ. ಅದನ್ನು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನಾಗಿ ಮೇಲ್ದರ್ಜೆಗೆ ಏರಿಸಲಾಗುವುದು. ಮೈಸೂರು ಈಗ ದೊಡ್ಡ ಮಟ್ಟದ ಆಭಿವೃದ್ಧಿಗೆ ಸಜ್ಜಾಗಿದೆ. ಹಲವು ಕಂಪನಿಗಳು ಬರಲಿವೆ ಎಂದು ಅವರು ತಿಳಿಸಿದರು.

ಅಂಚೆ ಸೇವೆಗಳ ದಕ್ಷಿಣ ಕರ್ನಾಟಕ ವಲಯದ ನಿರ್ದೇಶಕ ಟಿ.ಎಸ್. ಅಶ್ವತ್ಥನಾರಾಯಣ, ಪಿಟಿಸಿ ನಿರ್ದೇಶಕ ಆಶಿಶ್ ಸಿಂಗ್ ಠಾಕೂರ್, ಉಪ ನಿರ್ದೇಶಕ ಕೆ.ವಿ.ಎಲ್.ಎನ್. ಮೂರ್ತಿ ಮೊದಲಾದವರು ಇದ್ದರು.

----

-- ಬಾಕ್ಸ್--

ಏಕಕಾಲದಲ್ಲಿ 100 ಮಹಿಳೆಯರಿಗೆ ವಾಸ್ತವ್ಯಕ್ಕೆ ಅವಕಾಶ

ಹಂಸ- ಮಹಿಳಾ ವಸತಿನಿಲಯ ಕಟ್ಟಡ ಸಂಕೀರ್ಣ ಕಾಮಗಾರಿಗೆ 2018ರ ನ.30 ರಂದು ಸಚಿವ ಮನೋಜ್ಸಿಂಹ ಭೂಮಿಪೂಜೆ ನೆರವೇರಿಸಿದ್ದರು. ಈ ಕಟ್ಟಡದಲ್ಲಿ 36 ಕೊಠಡಿಗಳಿದ್ದು, ಏಕಕಾಲಕ್ಕೆ 100 ಮಹಿಳೆಯರಿಗೆ ವಾಸ್ತವ್ಯಕ್ಕೆ ಅವಕಾಶ ಕಲ್ಪಿಸಬಹುದಾಗಿದೆ.

ಅಂಚೆ ಇಲಾಖೆಯು ಮೈಸೂರು ಸೇರಿದಂತೆ ದೇಶದ 6 ಕಡೆಗಳಲ್ಲಿ ಪಿಟಿಸಿಗಳನ್ನು ಹೊಂದಿದೆ. ಅವುಗಳಲ್ಲಿ ದೇಶದ ಮೊಟ್ಟ ಮೊದಲ ಮಹಿಳಾ ವಸತಿ ಸಂಕೀರ್ಣ ಇದಾಗಿದೆ. ಸೌರ ವಿದ್ಯುತ್ಬಳಕೆ, ಜೈವಿಕ ಪದಾರ್ಥಗಳ ಮರುಬಳಕೆಗೂ ಆದ್ಯತೆ ನೀಡಲಾಗಿದೆ. 906 ಚ.ಮೀ. ವಿಸ್ತೀರ್ಣವನ್ನು ಹೊಂದಿದೆ.

ದಕ್ಷಿಣ ಭಾರತದ ಕರ್ನಾಟಕ, ಕೇರಳ, ಆಂಧ್ರಪ್ರದೇಶ, ತೆಲಂಗಾಣ ಹಾಗೂ ತಮಿಳುನಾಡು ರಾಜ್ಯಗಳಿಂದ ತರಬೇತಿಗೆ ಬರುವ ಮಹಿಳಾ ಪ್ರಶಿಕ್ಷಣಾರ್ಥಿಗಳಿಗೆ ಇಲ್ಲಿ ವಾಸ್ತವ್ಯಕ್ಕೆ ಅವಕಾಶ ಮಾಡಿಕೊಡಲಾಗುವುದು. ಪಠ್ಯ ಕಲಿಕೆಯೊಂದಿಗೆ ವ್ಯಕ್ತಿತ್ವ ವಿಕಸನಕ್ಕೆ ಅಗತ್ಯವಾದ ವ್ಯವಸ್ಥೆಗಳನ್ನೂ ಕಲ್ಪಿಸಲಾಗಿದೆ. ಅತ್ಯಾಧುನಿಕವಾಗಿ ನಿರ್ಮಿಸಲಾಗಿದ್ದು, ಭದ್ರತೆ ಸಹ ಒದಗಿಸಲಾಗಿದೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ದೇವೇಗೌಡರು ನಮ್ಮ ಪಕ್ಷದಲ್ಲಿದ್ದರು - ಹುಷಾರು ಅಶೋಕ್, ನೀನೇ ಸತ್ತು ಹೋಗ್ತೀಯ : ಸಿಎಂ
ವಸುಂಧರಾ ಭೂಪತಿ ಸೇರಿ ಐವರಿಗೆ ಸಾಹಿತ್ಯ ಅಕಾಡೆಮಿ ಗೌರವ ಪ್ರಶಸ್ತಿ