ಶ್ರೀ ರಾಮಮಂದಿರ ಉದ್ಘಾಟನೆ ಭಾರತದ ಹಬ್ಬ: ಕುಮಾರಸ್ವಾಮಿ

KannadaprabhaNewsNetwork |  
Published : Jan 12, 2024, 01:46 AM IST
ಎಚ್.ಡಿ. ಕುಮಾರಸ್ವಾಮಿ | Kannada Prabha

ಸಾರಾಂಶ

ಚಿಕ್ಕಮಗಳೂರು ತಾಲೂಕಿನ ಹೊಸಪೇಟೆ ಸಮೀಪದ ಹನಿ ಡ್ಯೂ ರೆಸಾರ್ಟ್‌ ನಲ್ಲಿ ಮಂಡ್ಯ ಜಿಲ್ಲೆಯ ಜೆಡಿಎಸ್ ಶಾಸಕರು, ಮುಖಂಡರೊಂದಿಗೆ ವಾಸ್ತವ್ಯ ಹೂಡಿ ಗುರುವಾರ ಬೆಂಗಳೂರಿಗೆ ತೆರಳುವ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಸಿಎಂ ಕುಮಾರಸ್ವಾಮಿ ಬಿಜೆಪಿ ಜೊತೆಗಿನ ಮೈತ್ರಿಯಲ್ಲಿ ಕೇಸರಿ ಪಕ್ಷದ ಜೊತೆ ಯಾವುದೇ ವಿಶ್ವಾಸದ ಕೊರತೆ ಇಲ್ಲ. ಖುಷಿ ಇದೆ ಬಿಜೆಪಿ ಜೆಡಿಎಸ್ ನದ್ದು ಒಂದು ರೀತಿ ನ್ಯಾಚುರಲ್ ಅಲಾಯನ್ಸ್ ಎನಿಸುತ್ತಿದೆ ಎಂದಿರುವ ಅವರು, ಬಿಜೆಪಿ ಪಕ್ಷದ ಸ್ನೇಹಿತರ ವಿಶ್ವಾಸ ಪಡೆಯಲು ಸೂಕ್ಷ್ಮವಾಗಿ ಚರ್ಚಿಸಲು ನಮ್ಮ ಪಕ್ಷದ ಕಾರ್ಯಕರ್ತರಿಗೆ ಸಭೆ ಮಾಡುತ್ತಿದ್ದೇವೆ

- ರಾಮಮಂದಿರ ನಿರ್ಮಾಣ ದೇಶದ ಜನರ ನಿರೀಕ್ಷೆಯಾಗಿತ್ತು । ಹೊಸಪೇಟೆಯ ಹನಿ ಡ್ಯೂ ರೆಸಾರ್ಟ್‌ ಬಳಿ ಹೇಳಿಕೆ

ಕನ್ನಡಪ್ರಭ ವಾರ್ತೆ, ಚಿಕ್ಕಮಗಳೂರು

ಶ್ರೀ ರಾಮಮಂದಿರ ಉದ್ಘಾಟನೆ ಭಾರತದ ಹಬ್ಬ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ.

ಚಿಕ್ಕಮಗಳೂರು ತಾಲೂಕಿನ ಹೊಸಪೇಟೆ ಸಮೀಪದ ಹನಿ ಡ್ಯೂ ರೆಸಾರ್ಟ್‌ ನಲ್ಲಿ ಮಂಡ್ಯ ಜಿಲ್ಲೆಯ ಜೆಡಿಎಸ್ ಶಾಸಕರು, ಮುಖಂಡರೊಂದಿಗೆ ವಾಸ್ತವ್ಯ ಹೂಡಿ ಗುರುವಾರ ಬೆಂಗಳೂರಿಗೆ ತೆರಳುವ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದರು.

ನಿಜವಾದ ರಾಮರಾಜ್ಯ ಎಂಬ ಜನಾಭಿಪ್ರಾಯಕ್ಕೆ ನಾನೂ ಧನಿಗೂಡಿಸುತ್ತೇನೆ ಎಂದ ಅವರು, ರಾಮಮಂದಿರ ನಿರ್ಮಾಣ ದೇಶದ ಜನರ ನಿರೀಕ್ಷೆಯಾಗಿತ್ತು ಎಂದು ಹೇಳಿದರು.

ಕಾಂಗ್ರೆಸ್ ನವರು ರಾಮಮಂದಿರ ಉದ್ಘಾಟನೆಗೆ ಹೋಗದಿರುವ ನಿರ್ಧಾರ ಅವರ ಪಕ್ಷದ ತೀರ್ಮಾನವಾಗಿದ್ದು ಹೋಗದಿರು ವುದಕ್ಕೆ ಕಾರಣ ಅವರೇ ಹೇಳಬೇಕು ಎಂದರು.

ಸಂಕ್ರಾಂತಿ ನಂತರ ಸಿಹಿ ಸುದ್ದಿ: ರಾಜ್ಯದಲ್ಲಿ ಬಿಜೆಪಿ ಜೊತೆಗಿನ ಮೈತ್ರಿ ಬಗ್ಗೆ ಎಚ್. ಡಿ, ಕುಮಾರಸ್ವಾಮಿ ಪ್ರತಿಕ್ರಿಯಿಸಿ, ಕಾಂಗ್ರೆಸ್ ಜೊತೆಗಿನ ಮೈತ್ರಿಗಿಂತ ಬಿಜೆಪಿ ಜೊತೆ ಮೈತ್ರಿಗೆ ಅಜಗಜಾಂತರ ವ್ಯತ್ಯಾಸ ಇದೆ ಎಂದು ಹೇಳಿದರು.

ಬಿಜೆಪಿ ಜೊತೆಗಿನ ಮೈತ್ರಿಯಲ್ಲಿ ಕೇಸರಿ ಪಕ್ಷದ ಜೊತೆ ಯಾವುದೇ ವಿಶ್ವಾಸದ ಕೊರತೆ ಇಲ್ಲ. ಖುಷಿ ಇದೆ ಬಿಜೆಪಿ ಜೆಡಿಎಸ್ ನದ್ದು ಒಂದು ರೀತಿ ನ್ಯಾಚುರಲ್ ಅಲಾಯನ್ಸ್ ಎನಿಸುತ್ತಿದೆ ಎಂದಿರುವ ಅವರು, ಬಿಜೆಪಿ ಪಕ್ಷದ ಸ್ನೇಹಿತರ ವಿಶ್ವಾಸ ಪಡೆಯಲು ಸೂಕ್ಷ್ಮವಾಗಿ ಚರ್ಚಿಸಲು ನಮ್ಮ ಪಕ್ಷದ ಕಾರ್ಯಕರ್ತರಿಗೆ ಸಭೆ ಮಾಡುತ್ತಿದ್ದೇವೆ. ಕೆಲವೆಡೆ ಸ್ಥಳೀಯವಾಗಿ ಎರಡೂ ಪಕ್ಷಗಳ ನಾಯಕರ ಜೊತೆಗಿನ ಸಮಸ್ಯೆ ಬಗೆಹರಿಸುತ್ತೇವೆ ಎಂದರು.

ಸಂಕ್ರಾಂತಿ ನಂತರ ಮೈತ್ರಿಯ ಸಿಹಿ ಸುದ್ದಿಗಳು ಶುರುವಾಗಲಿದೆ ಎಂದ ಅವರು, ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಸಾಮಾನ್ಯ ಕಾರ್ಯಕರ್ತ ಸ್ಪರ್ಧಿಸಿದರೂ ಗೆಲ್ಲುವ ಸಾಧ್ಯತೆ ಇದೆ. ಆದರೆ, ಕಳೆದ ಬಾರಿ ಕಾಂಗ್ರೆಸ್ ನಮಗೆ ಕೇವಲ 2-3 ಪರ್ಸೆಂಟ್ ಮಾತ್ರ ಸಹಕಾರ ನೀಡಿತ್ತು ಎಂದು ಆರೋಪಿಸಿದರು.

ಮಂಡ್ಯದಲ್ಲಿ ತಮ್ಮ ಸ್ಪರ್ಧೆ ಬಗ್ಗೆ ಪ್ರತಿಕ್ರಿಯಿಸಿದ ಅವರು, ಮೈತ್ರಿ ನಂತರ ಪರಿಸ್ಥಿತಿ ಏನಾಗುತ್ತೋ ನೋಡೋಣ ಎಂದರು.

ಸುಮಲತಾ ಸ್ಪರ್ಧೆ ಬಗ್ಗೆ ಕೇಳಿದಾಗ ಬಿಜೆಪಿ ಜೊತೆಗಿನ ಹೊಂದಾಣಿಕೆ ಮುಗಿದ ಮೇಲೆ ಚರ್ಚೆ, ತೀರ್ಮಾನ ಆಗಲಿದೆ ಎಂದು ಉತ್ತರಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

5000 ಅಂಗನವಾಡಿಗಳಲ್ಲಿ ಎಲ್‌ಕೆಜಿ, ಯುಕೆಜಿ : ಲಕ್ಷ್ಮೀ
ನಾಯಿಗಳ ಮೇಲೂ ತೆರಿಗೆ ಹೇರಿಕೆಗೆ ಮುಂದಾದ ಸರ್ಕಾರ!