)
ಕನ್ನಡಪ್ರಭ ವಾರ್ತೆ ಪೀಣ್ಯ ದಾಸರಹಳ್ಳಿ ಪೀಣ್ಯ ದಾಸರಹಳ್ಳಿ ಎಂಟನೇ ಮೈಲಿಯ ಪ್ರಕ್ರಿಯಾ ಹಾಸ್ಪಿಟಲ್ಸ್, ತನ್ನ ಸಮಗ್ರ ಕ್ಯಾನ್ಸರ್ ಕೇಂದ್ರವಾದ ‘ಪ್ರಕ್ರಿಯಾ ಕ್ಯಾನ್ಸರ್ ಕೇರ್’ ಮತ್ತು ವಿಕಿರಣ ಚಿಕಿತ್ಸಾ (ರೇಡಿಯೋಥೆರಪಿ) ವಿಭಾಗವನ್ನು ಉದ್ಘಾಟಿಸುವ ಮೂಲಕ ಆರೋಗ್ಯ ಸೇವೆಯಲ್ಲಿ ಮಹತ್ವದ ಮೈಲಿಗಲ್ಲನ್ನು ಸ್ಥಾಪಿಸಿದೆ. ಸುಧಾರಿತ ಮತ್ತು ಕರುಣಾಭರಿತ ಕ್ಯಾನ್ಸರ್ ಚಿಕಿತ್ಸೆಯನ್ನು ಒಂದೇ ಸೂರಿನಡಿ ಒದಗಿಸುವ ನಿಟ್ಟಿನಲ್ಲಿ ಈ ನೂತನ ಕೇಂದ್ರವನ್ನು ವಿನ್ಯಾಸಗೊಳಿಸಲಾಗಿದೆ.ಈ ವೇಳೆ ಮಾತನಾಡಿದ ಶಾಸಕ ಎಸ್ ಮುನಿರಾಜು, ಇಂತಹ ಸಮಗ್ರ ಕ್ಯಾನ್ಸರ್ ಕೇರ್ ಸೌಲಭ್ಯದ ಪ್ರಾರಂಭವು ವಿಶೇಷ ಆರೋಗ್ಯ ಸೇವೆಯ ಲಭ್ಯತೆಯನ್ನು ಬಲಪಡಿಸುವಲ್ಲಿ ಪ್ರಮುಖ ಹೆಜ್ಜೆಯಾಗಿದೆ. ಸುಧಾರಿತ ಮತ್ತು ರೋಗಿ-ಕೇಂದ್ರಿತ ಸಮಗ್ರ ಕ್ಯಾನ್ಸರ್ ಚಿಕಿತ್ಸಾ ಸೇವೆಗಳ ಅಗತ್ಯತೆಯನ್ನು ಇದು ಪ್ರತಿಬಿಂಬಿಸುತ್ತದೆ. ಈ ಅರ್ಥಪೂರ್ಣ ಉಪಕ್ರಮಕ್ಕಾಗಿ ನಾನು ಪ್ರಕ್ರಿಯಾ ಹಾಸ್ಪಿಟಲ್ಸ್ ಅನ್ನು ಅಭಿನಂದಿಸುತ್ತೇನೆ'''''''' ಎಂದರು.
ಈ ವೇಳೆ ಸಿನಿಮಾ ನಿರ್ದೇಶಕ ಯೋಗರಾಜ್ ಭಟ್, ನಿರ್ಮಾಪಕ ಈ ಕೃಷ್ಣಪ್ಪ , ಮಾಜಿ ಶಾಸಕ ಶ್ರೀನಿವಾಸ್ ಮೂರ್ತಿ ಪ್ರಕ್ರಿಯ ಆಸ್ಪತ್ರೆಯ ಸಿಇಒ ಶ್ರೀನಿವಾಸ್ ಚಿರುಕುರಿ, ಯಲಹಂಕ ಶಾಸಕ ಎಸ್.ಆರ್.ವಿಶ್ವನಾಥ್ ಜೆಡಿಎಸ್ ಮುಖಂಡ ಮುನೇಗೌಡ ಎಂ. ಮತ್ತಿತರರಿದ್ದರು.