ಇಂದು ಶಾಲೆ ಕಟ್ಟಡ ಉದ್ಘಾಟನೆ

KannadaprabhaNewsNetwork |  
Published : Feb 06, 2025, 11:46 PM IST
(ಸಾಂದರ್ಭಿಕ ಚಿತ್ರ) | Kannada Prabha

ಸಾರಾಂಶ

ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ, ಶಾಲಾ ಶಿಕ್ಷಣ ಇಲಾಖೆ ಹಾಗೂ ಪಂಚಾಯತ್‌ರಾಜ್ ಎಂಜಿನಿಯರಿಂಗ್ ಇಲಾಖೆ, ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಹುಚ್ಚಂಗಿಪುರ, ಜಗಳೂರು ತಾಲೂಕು, ಎನ್. ರವಿಕುಮಾರ್ ಶಾಸಕರು ವಿಧಾನ ಪರಿಷತ್ತು, ಸಂಸದರು ಹಾಗೂ ಶಾಸಕರ ಪ್ರದೇಶಾಭಿವೃದ್ಧಿ ನಿಧಿಯಿಂದ ನಿರ್ಮಿಸಲಾದ ನೂತನ ಶಾಲಾ ಕಟ್ಟಡದ ಲೋಕಾರ್ಪಣಾ ಕಾರ್ಯಕ್ರಮ ಫೆ.7ರಂದು ಜಗಳೂರು ತಾಲೂಕು ಹುಚ್ಚಂಗಿಪುರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ಆಯೋಜಿಸಲಾಗಿದೆ.

ಜಗಳೂರು: ದಾವಣಗೆರೆ ಜಿಲ್ಲಾ ಪಂಚಾಯಿತಿ, ಜಗಳೂರು ತಾಲೂಕು ಪಂಚಾಯಿತಿ, ಶಾಲಾ ಶಿಕ್ಷಣ ಇಲಾಖೆ ಹಾಗೂ ಪಂಚಾಯತ್‌ರಾಜ್ ಎಂಜಿನಿಯರಿಂಗ್ ಇಲಾಖೆ, ತಾಲೂಕಿನ ಹುಚ್ಚಂಗಿಪುರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ನೂತನ ಕಟ್ಟಡದ ಲೋಕಾರ್ಪಣೆ ಕಾರ್ಯಕ್ರಮ ಫೆ.7ರಂದು ಹುಚ್ಚಂಗಿಪುರ ಗ್ರಾಮದ ಶಾಲಾ ಆವರಣದಲ್ಲಿ ಆಯೋಜಿಸಲಾಗಿದೆ.

ವಿಪ ಸದಸ್ಯ ಎನ್. ರವಿಕುಮಾರ್, ಸಂಸದರು ಹಾಗೂ ಶಾಸಕರ ಪ್ರದೇಶಾಭಿವೃದ್ಧಿ ನಿಧಿಯಿಂದ ನಿರ್ಮಿಸಲಾದ ಕಟ್ಟಡವನ್ನು ಮಧ್ಯಾಹ್ನ 12.30ಕ್ಕೆ ಗಣಿ ಮತ್ತು ಭೂ ವಿಜ್ಞಾನ, ತೋಟಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಹಾಗೂ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಉದ್ಘಾಟಿಸುವರು. ಜಗಳೂರು ಶಾಸಕ ಬಿ.ದೇವೆಂದ್ರಪ್ಪ ಅಧ್ಯಕ್ಷತೆ ವಹಿಸುವರು. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಉಪಸ್ಥಿತರಿರುವರು. ಮುಖ್ಯ ಅತಿಥಿಗಳಾಗಿ ರಾಜ್ಯಸಭಾ ಸಂಸದರಾದ ಲೆಹರ್ ಸಿಂಗ್ ಸಿರೋಯಾ, ಕೆ.ನಾರಾಯಣ, ವೀರಣ್ಣ ಕಡಾಡಿ, ವಿಧಾನ ಪರಿಷತ್ತು ಶಾಸಕರಾದ ಎನ್.ರವಿಕುಮಾರ್, ಡಾ. ಎಂ.ಜಿ. ಮೂಳೆ, ಡಿ.ಟಿ. ಶ್ರೀನಿವಾಸ್, ಚಿದಾನಂದ ಎಂ. ಗೌಡ, ಕೆ.ಎಸ್. ನವೀನ್, ಮಾಜಿ ರಾಜ್ಯಸಭಾ ಸದಸ್ಯ ಕೆ.ಸಿ.ರಾಮಮೂರ್ತಿ, ದಿದ್ದಿಗಿ ಗ್ರಾಪಂ ಅಧ್ಯಕ್ಷರಾದ ಗುತ್ಯಮ್ಮ ಸಿದ್ದಪ್ಪ, ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರ ಸ್ವಾಮಿ, ಜಿಪಂ ಸಿಇಒ ಸುರೇಶ್ ಬಿ. ಇಟ್ನಾಳ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್, ಎಸ್‌ಡಿಎಂಸಿ ಅಧ್ಯಕ್ಷ ಪಿ.ಟಿ.ರಮೇಶ, ದಾನಿಗಳಾದ ಸ್ಪೇಸ್ ಮ್ಯಾನೇಜ್‌ಮೆಂಟ್ ಸಲ್ಯೂಷನ್ ಲಿಮಿಟೆಡ್‌ನ ಡಾ.ದಿನೇಶ್, ವೋಲ್ವೋ ಗ್ರೂಪ್ ಜಿ.ವಿ.ರಾವ್ ಪಾಲ್ಗೊಳ್ಳುವರು.

- - - (ಸಾಂದರ್ಭಿಕ ಚಿತ್ರ)

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಅನುವಾದಕರು ಸಾಂಸ್ಕೃತಿಕ ರಾಯಭಾರಿಗಳಿದ್ದಂತೆ:ಎಸ್.ಜಿ.ಎಸ್‌
9.5 ಲಕ್ಷ ಲಂಚ ಪಡೆದ ಕೇಂದ್ರ ವಿದ್ಯುತ್‌ಸಂಸ್ಥೆ ಜಂಟಿ ನಿರ್ದೇಶಕ ಸಿಬಿಐ ಬಲೆಗೆ