ಕನ್ನಡಪ್ರಭ ವಾರ್ತೆ ಚಾಮರಾಜನಗರ
ಇದು ರಾಜ್ಯಕ್ಕೆ ಮಾದರಿಯಾಗಿದ್ದು ಡಿ.೭ರಂದು ಬೆಳಗ್ಗೆ ೧೦ ಕ್ಕೆ ಸಿಎಂ ಸಿದ್ದರಾಮಯ್ಯ ೧೨ ಕೊಠಡಿಗಳನ್ನು ಉದ್ಘಾಟಿಸಲಿದ್ದು ನಂತರ ಸಾರ್ವಜನಿಕ ಸಮಾರಂಭ ನಡೆಯಲಿದ್ದು ಜಿಲ್ಲಾ ಉಸ್ತುವಾರಿ ಸಚಿವ ಕೆ.ವೆಂಕಟೇಶ್, ಸಮಾಜ ಕಲ್ಯಾಣ ಸಚಿವ ಎಚ್.ಸಿ. ಮಹದೇವಪ್ಪ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್, ಶಿಕ್ಷಣ ಸಚಿವ ಮಧು ಬಂಗಾರಪ್ಪ, ಸಂಸದ ಸುನೀಲ್ಬೋಸ್, ಶಾಸಕ ಎಂ.ಆರ್.ಮಂಜುನಾಥ್ ಇತರರು ಭಾಗವಹಿಸಲಿದ್ದಾರೆ ಎಂದರು.
ಮಧ್ಯಾಹ್ನದ ಬಳಿಕ ಯಳಂದೂರು ಪಟ್ಟಣಕ್ಕೆ ಭೇಟಿ ಕೊಡಲಿರುವ ಮುಖ್ಯಮಂತ್ರಿ ನಮ್ಮ ಬಹುದಿನದ ಕನಸಾದ ಸೂಪರ್ ಸ್ಪೆಷಾಲಿಟಿ ೧೦೦ ಹಾಸಿಗೆಗಳ ಆಸ್ಪತ್ರೆ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ ಎಂದರು. ಯಳಂದೂರು ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಮೈದಾನದಲ್ಲಿ ಸಮಾರಂಭ ನಡೆಯಲಿದ್ದು ಆರೋಗ್ಯ ಮತ್ತು ಕುಟುಂಬಕಲ್ಯಾಣ ಸಚಿವ ದಿನೇಶ್ ಗುಂಡೂರಾವ್, ಜಿಲ್ಲಾ ಉಸ್ತುವಾರಿ ಸಚಿವ ಕೆ.ವೆಂಕಟೇಶ್, ಸಮಾಜ ಕಲ್ಯಾಣ ಸಚಿವ ಎಚ್.ಸಿ. ಮಹದೇವಪ್ಪ, ಸಂಸದ ಸುನೀಲ್ಬೋಸ್, ಜಿಲ್ಲೆಯ ಶಾಸಕರು, ಮಾಜಿ ಶಾಸಕರು, ಇತರ ಜನಪ್ರತಿನಿಧಿಗಳು ಭಾಗವಹಿಸಲಿದ್ದಾರೆ ಎಂದರು.ಸಮಾವೇಶಕ್ಕೆ ೨೦ ಸಾವಿರ ಮಂದಿ:ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಪಿ.ಮರಿಸ್ವಾಮಿ ಮಾತನಾಡಿ, ಡಿ.೫ ರಂದು ಹಾಸನದಲ್ಲಿ ನಡೆಯುವ ಜನಕಲ್ಯಾಣ ಸಮಾವೇಶಕ್ಕೆ ಜಿಲ್ಲೆಯಿಂದ ೧೫-೨೦ ಸಾವಿರ ಜನರು ೩೦೦ಕ್ಕೂ ಹೆಚ್ಚು ಬಸ್ಗಳ ಮೂಲಕ ಸಮಾವೇಶಕ್ಕೆ ತೆರಳಲಿದ್ದಾರೆ ಎಂದರು. ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಬಿ.ಕೆ. ರವಿಕುಮಾರ್, ಪ್ರಧಾನ ಕಾರ್ಯದರ್ಶಿ ಆರ್. ಮಹದೇವ್, ಕೊಳ್ಳೇಗಾಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ತೋಟೇಶ್, ಮುಖಂಡರ ನಂಜುಂಡಸ್ವಾಮಿ, ರಾಜಗುರು ಇದ್ದರು.