ಕನ್ನಡಪ್ರಬ ವಾರ್ತೆ ಬೆಳಗಾವಿ
ಕಾಗಿನೆಲೆ ಗುರುಪೀಠದ ನಿರಂಜನಾನಂದಪುರಿ ಸ್ವಾಮೀಜಿ ಸಾನ್ನಿಧ್ಯ ವಹಿಸುವರು. ಸಂಗೊಳ್ಳಿಯ ಹಿರೇಮಠದ ಗುರು ಸಿದ್ಧಲಿಂಗೇಶ್ವರ ಸಂಸ್ಥಾನದ ಗುರುಲಿಂಗ ಶಿವಾಚಾರ್ಯ ಸ್ವಾಮೀಜಿ ಪಾವನ ಸಾನ್ನಿಧ್ಯ ವಹಿಸುವರು. ಮುಖ್ಯಮಂತ್ರಿಗಳು ಹಾಗೂ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರೂ ಆಗಿರುವ ಸಿದ್ಧರಾಮಯ್ಯ ಸಮಾರಂಭ ಉದ್ಘಾಟಿಸುವರು. ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ ತಂಗಡಗಿ, ನಗರಾಭಿವೃದ್ಧಿ ಮತ್ತು ನಗರ ಯೋಜನಾ ಇಲಾಖೆ ಸಚಿವ ಸುರೇಶ ಬಿ.ಎಸ್ ಮುಖ್ಯ ಅತಿಥಿಗಳಾಗಿ ಆಗಮಿಸುವರು. ಬೈಲಹೊಂಗಲ ಶಾಸಕ ಮಹಾಂತೇಶ ಕೌಜಲಗಿ ಅಧ್ಯಕ್ಷತೆ ವಹಿಸುವರು. ರಾಮದುರ್ಗ ಶಾಸಕ ಅಶೋಕ ಪಟ್ಟಣ, ಕರ್ನಾಟಕ ಸರ್ಕಾರದ ಹೊಸದಿಲ್ಲಿ ವಿಶೇಷ ಪ್ರತಿನಿಧಿ ಪ್ರಕಾಶ ಹುಕ್ಕೇರಿ, ಪ್ರತಿಪಕ್ಷದ ಮುಖ್ಯ ಸಚೇತಕ ಹಾಗೂ ಕುಷ್ಟಗಿ ಶಾಸಕ ದೊಡ್ಡನಗೌಡ ಪಾಟೀಲ ವಿಶೇಷ ಆಮಂತ್ರಿತರಾಗಿರುವರು.
ಸಂಸದರಾದ ಅನಂತಕುಮಾರ ಹೆಗಡೆ, ಅಣ್ಣಸಾಹೇಬ್ ಜೊಲ್ಲೆ, ಈರಣ್ಣ ಕಡಾಡಿ, ಮಂಗಲ ಅಂಗಡಿ, ಸಂಗೊಳ್ಳಿ ಗ್ರಾಮ ಪಂಚಾಯತಿ ಅಧ್ಯಕ್ಷ ರೂಪಾ ಚವಡಿ ಹಾಗೂ ಉಪಾಧ್ಯಕ್ಷ ಫಕೀರಪ್ಪ ಗಿರಿಮಲ್ಲಪ್ಪ ಕುರಿ, ಜಿಲ್ಲೆಯ ಶಾಸಕರು ಮತ್ತು ವಿಧಾನ ಪರಿಷತ್ ಸದಸ್ಯರು ಗೌರವ ಉಪಸ್ಥಿತರಿರುವರು ಎಂದು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಆಯುಕ್ತರು ಹಾಗೂ ಮುಖ್ಯಮಂತ್ರಿಗಳ ವಿಶೇಷ ಕರ್ತವ್ಯಾಧಿಕಾರಿಗಳಾದ ಹೊರಪೇಟೆ ಮಲ್ಲೇಶಪ್ಪ ತಿಳಿಸಿದ್ದಾರೆ.ವಿಧಾನ ಪರಿಷತ್ ಸದಸ್ಯ ಅಡಗೂರು ಎಚ್.ವಿಶ್ವನಾಥ, ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಕ್ಷೇತ್ರ ಅಧ್ಯಯನ ಸಮಿತಿ ಅಧ್ಯಕ್ಷರು ಹಾಗೂ ಮಾಜಿ ಸಚಿವ ಎಚ್.ಎಂ.ರೇವಣ್ಣ, ಪರಿಷತ್ ಸದಸ್ಯ ಎಂ.ಟಿ.ಬಿ.ನಾಗರಾಜ, ಶಾಸಕರಾದ ಬಸವರಾಜ ಶಿವಣ್ಣನವರ, ಬೈರತಿ ಬಸವರಾಜ,,ರಘುನಾಥರಾವ್ ಮಲ್ಯಾಪುರೆ, ಬಿ.ಜಿ.ಗೋವಿಂದಪ್ಪ, ರಾಘವೇಂದ್ರ ಹಿಟ್ನಾಳ, ಸಿ.ಬಿ.ಸುರೇಶ ಬಾಬು, ಬಿ.ಎಚ್.ಶ್ರೀನಿವಾಸ ,ಕೆ.ಎ.ತಿಪ್ಪೇಸ್ವಾಮಿ,ಆನಂದ ಕೆ.ಎಸ್, ಮಂಜುನಾಥ, ಡಿ.ರವಿಶಂಕರ್, ಭೀಮಸೇನ ಬಿ.ಚಿಮ್ಮನಕಟ್ಟಿ ವಿಶೇಷ ಆಹ್ವಾನಿತರಾಗಿ ಆಗಮಿಸುವರು.