- ಪಂಚಮಸಾಲಿ ಪೀಠದಿಂದ ಎಸ್ಸೆಸ್ಸೆಲ್ಸಿ-ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ, ಗಣ್ಯರಿಗೆ ಸನ್ಮಾನ - - -
ವಿದ್ಯಾರ್ಥಿಗಳು ಓದು, ಕ್ರೀಡೆ ಎನ್ನುತ್ತಾ ನಮ್ಮ ಆಚಾರ, ವಿಚಾರಗಳನ್ನು ಬದಿಗೊತ್ತದೇ, ಸಂಸ್ಕೃತಿ, ಸಂಸ್ಕಾರ, ಆಧ್ಯಾತ್ಮಿಕತೆಯನ್ನು ಮೈಗೂಡಿಸಿಕೊಳ್ಳಬೇಕು ಎಂದು ಹರಿಹರದ ವೀರಶೈವ ಲಿಂಗಾಯತ ಪಂಚಮಸಾಲಿ ಪೀಠದ ಶ್ರೀ ವಚನಾನಂದ ಸ್ವಾಮೀಜಿ ನುಡಿದರು.
ನಗರದ ಶಿವ ಪಾರ್ವತಿ ಕಲ್ಯಾಣ ಮಂಟಪದಲ್ಲಿ ಭಾನುವಾರ ಹರ ಸೇವಾ ಸಂಸ್ಥೆ, ಪಂಚಮಸಾಲಿ ಸಮಾಜದ ಜಿಲ್ಲಾ ಘಟಕ, ಹರಿಹರ ಪಂಚಮಸಾಲಿ ಪೀಠದಿಂದ ಹಮ್ಮಿಕೊಂಡಿದ್ದ ಎಸ್ಸೆಸ್ಸೆಲ್ಸಿ-ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ, ಸಮಾಜದ ಗಣ್ಯರಿಗೆ ಸನ್ಮಾನ ಸಮಾರಂಭದ ಸಾನ್ನಿಧ್ಯ ವಹಿಸಿ ಅವರು ಮಾತನಾಡಿದರು.ಆಧ್ಯಾತ್ಮಿಕವಾಗಿ ಶ್ರೀಮಂತರಾದಷ್ಟೂ ನಿಮ್ಮ ಜೀವನವೂ ಉನ್ನತ ಮಟ್ಟಕ್ಕೇರುತ್ತದೆ. ಶ್ರೀಮಂತವಾಗುತ್ತದೆ. ನಿತ್ಯ ಬೆಳಗ್ಗೆ ಎದ್ದು ಯೋಗ, ಧ್ಯಾನ, ಲಿಂಗಪೂಜೆ ಮಾಡಬೇಕು. ನಮ್ಮ ಸಂಸ್ಕಾರ, ಸಂಸ್ಕೃತಿ, ತತ್ವ ಪಾಲನೆ ಅನುಸರಿಸಬೇಕು. ಆಧ್ಯಾತ್ಮಿಕತೆ ಅಳವಡಿಸಿಕೊಂಡಷ್ಟೂ ಜೀವನದಲ್ಲಿ ನೆಮ್ಮದಿ, ಶಾಂತಿ, ಯಶಸ್ಸು ದೊರೆಯುತ್ತದೆ ಎಂದು ತಿಳಿಸಿದರು.
ಮಕ್ಕಳಿಗೆ ಉತ್ತಮ ಬದುಕನ್ನು ಕಟ್ಟಿಕೊಡಲು ಹೆತ್ತವರು ಸಾಲ ಮಾಡಿ ಅವರನ್ನು ಓದಿಸುತ್ತಾರೆ. ವೈದ್ಯಕೀಯ, ಎಂಜಿನಿಯರಿಂಗ್ ಸೇರಿದಂತೆ ಉನ್ನತ ಶಿಕ್ಷಣ ಕೊಡಿಸಲು ಹಗಲಿರುಳು ಶ್ರಮಿಸುತ್ತಾರೆ. ನೀವು ಉನ್ನತ ಹುದ್ದೆಗೆ ಏರಿದಾಗ, ಬದುಕನ್ನು ಕಟ್ಟಿಕೊಂಡಾಗ ಅದಕ್ಕೆ ಕಾರಣರಾದ ಹೆತ್ತವರನ್ನು ನಿಮ್ಮೊಂದಿಗೆ ಇಟ್ಟುಕೊಂಡು ಸಲಹಬೇಕು. ಆಗ ಮಾತ್ರ ನಿಮ್ಮ ಹೆತ್ತವರ ತ್ಯಾಗಕ್ಕೆ ನೀವು ಗೌರವ ನೀಡಿದಂತಾಗುತ್ತದೆ ಎಂದು ಸಲಹೆ ನೀಡಿದರು.
ಸಮಾಜದ ರಾಜ್ಯ ಪ್ರಧಾನ ಕಾರ್ಯದರ್ಶಿ ಪರಮೇಶ ಪಟ್ಟಣಶೆಟ್ಟಿ ಮಾತನಾಡಿ, ಪ್ರತಿ ವರ್ಷವೂ ನಮ್ಮ ಸಮಾಜದಿಂದ ಪ್ರತಿಭಾ ಪುರಸ್ಕಾರ, ಸಮಾಜದ ವಧು-ವರರ ಸಮಾವೇಶ ಸೇರಿದಂತೆ ಅನೇಕ ಸಮಾಜಮುಖಿ ಕಾರ್ಯಗಳನ್ನು ನಡೆಸಲಾಗುತ್ತಿದೆ. ಇದರಿಂದ ಸಮಾಜ ಬಾಂಧವರಿಗೆ ಸಾಕಷ್ಟು ಅನುಕೂಲವಾಗುತ್ತದೆ. ಪ್ರತಿಭಾ ಪುರಸ್ಕಾರಕ್ಕೆ ಪಾತ್ರರಾದ ವಿದ್ಯಾರ್ಥಿಗಳು ಐಎಎಸ್, ಐಪಿಎಸ್, ಕೆಎಎಸ್ನಂತಹ ಉನ್ನತ, ಸ್ಪರ್ಧಾತ್ಮಕ ಪರೀಕ್ಷೆಯನ್ನೂ ಬರೆದು, ಉನ್ನತ ಸ್ಥಾನ ಅಲಂಕರಿಸಬೇಕು ಎಂದರು.
- - -
- ಶ್ರೀ ವಚನಾನಂದ ಸ್ವಾಮೀಜಿ, ಪಂಚಮಸಾಲಿ ಪೀಠ, ಹರಿಹರ
-20ಕೆಡಿವಿಜಿ3, 4.ಜೆಪಿಜಿ: