ಆಯುಸ್ಸು, ಆರೋಗ್ಯ ವೃದ್ಧಿಸುವ ಯೋಗ ಜೀವನದಲ್ಲಿ ಅಳವಡಿಸಿಕೊಳ್ಳಿ: ಶಿವಮೂರ್ತಿ

KannadaprabhaNewsNetwork |  
Published : Oct 07, 2024, 01:35 AM IST
6ಕೆಎಂಎನ್ ಡಿ15 | Kannada Prabha

ಸಾರಾಂಶ

ಯೋಗ ಭಾರತ ದೇಶದಲ್ಲಿ ಹುಟ್ಟಿ ಇಂದು ಪ್ರಪಂಚದಾದ್ಯಂತ ಮಹತ್ವ ಪಸರಿಸಿದೆ. ಯೋಗವು ಒಂದು ದಿನಕ್ಕೆ ಸೀಮೀತವಾಗದೆ. ಪ್ರತಿದಿನ 40 ರಿಂದ 45 ನಿಮಿಷಗಳ ಕಾಲ ಯೋಗ ಮಾಡುವುದರಿಂದ ಆರೋಗ್ಯ ವೃದ್ಧಿಯಾಗುತ್ತದೆ.

ಕನ್ನಡಪ್ರಭ ವಾರ್ತೆ ಶ್ರೀರಂಗಪಟ್ಟಣ

ಆಯಸ್ಸು, ಆರೋಗ್ಯ ವೃದ್ಧಿಸುವ ಯೋಗವನ್ನು ಪ್ರತಿಯೊಬ್ಬರೂ ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಉಪವಿಭಾಗಾಧಿಕಾರಿ ಶಿವಮೂರ್ತಿ ತಿಳಿಸಿದರು.

ಪಟ್ಟಣದ ಶ್ರೀರಂಗನಾಥ ಸ್ವಾಮಿ ದೇವಾಲಯದ ಮುಂಭಾಗ ಶ್ರೀರಂಗಪಟ್ಟಣ ದಸರಾ ಅಂಗವಾಗಿ ನಡೆದ ಯೋಗ ದಸರಾ ಸಾಮೂಹಿಕ ಸೂರ್ಯ ನಮಸ್ಕಾರ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಮನುಷ್ಯ ಎಷ್ಟೇ ಹಣ, ಆಸ್ತಿ, ಹೆಸರು ಸಂಪಾದಿಸಿದರೂ ಆರೋಗ್ಯ ಇಲ್ಲವೆಂದರೆ ಎಲ್ಲವೂ ಶೂನ್ಯ. ಹಾಗಾಗಿ ಆರೋಗ್ಯ ವೃದ್ಧಿಸಿಕೊಳ್ಳಲು ವ್ಯಾಯಾಮ, ಯೋಗದಂತಹ ಚಟುವಟಿಕೆಯನ್ನು ಜೀವನದಲ್ಲಿ ಪ್ರತಿನಿತ್ಯ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದರು.

ಯೋಗ ಭಾರತ ದೇಶದಲ್ಲಿ ಹುಟ್ಟಿ ಇಂದು ಪ್ರಪಂಚದಾದ್ಯಂತ ಮಹತ್ವ ಪಸರಿಸಿದೆ. ಯೋಗವು ಒಂದು ದಿನಕ್ಕೆ ಸೀಮೀತವಾಗದೆ. ಪ್ರತಿದಿನ 40 ರಿಂದ 45 ನಿಮಿಷಗಳ ಕಾಲ ಯೋಗ ಮಾಡುವುದರಿಂದ ಆರೋಗ್ಯ ವೃದ್ಧಿಯಾಗುತ್ತದೆ ಎಂದರು.

ತಹಸೀಲ್ದಾರ್ ಪರಶುರಾಮ ಸತ್ತಿಗೇರಿ ಮಾತನಾಡಿ, ಕಳೆದ ಎರಡು ದಿನಗಳಿಂದ ಶ್ರೀರಂಗಪಟ್ಟಣ ದಸರಾ ಆಚರಿಸುತಿದ್ದೇವೆ. ಅದಕ್ಕೆ ಪೂರಕವಾಗಿ ಇಂದು ಯೋಗ ದಸರಾವನ್ನು ಆಯುಷ್ ಇಲಾಖೆ ಹಾಗೂ ಕ್ರೀಡಾ ಇಲಾಖೆ ಸೇರಿ ಆಯೋಜಿಸಲಾಗಿದೆ ಎಂದರು.

ಸುಮಾರು 800ಕ್ಕೂಹೆಚ್ಚು ಮಂದಿ ಭಾಗವಹಿಸಿ ಸೂರ್ಯ ನಮಸ್ಕಾರ, ಭುಜಂಗಾಸನ, ವಜ್ರಾಸನ, ತಡಾಸನ, ಅರ್ಧಚಕ್ರಾಸನ, ಉಷ್ಟ್ರಾಸನ, ಧನುರಾಸನ, ಶವಾಸನ, ಪ್ರಣಾಯಾಮ, ಧ್ಯಾನ ಸೇರಿದಂತೆ ವಿವಿಧ ಆಸನಗಳನ್ನು ಪ್ರದರ್ಶಿಸಿದರು.

ಈ ವೇಳೆ ಆಯುಷ್ ಫೆಡರೇಶನ್ ಆಫ್ ಇಂಡಿಯಾದ ಅಧ್ಯಕ್ಷ ಡಾ.ಕಲಾದರ್, ಪತಂಜಲಿ ಸಂಸ್ಥೆ ಯೋಗ ಶಿಕ್ಷಕ ರವಿ, ಯೋಗ ಶಿಕ್ಷಕ ಚಂದ್ರು, ಬಂಡೂರಿನ ಸರ್ಕಾರಿ ಆಯುರ್ವೇದ ಚಿಕಿತ್ಸಾಲಯದ ಹಿರಿಯ ವೈದ್ಯೆ ಶೋಭಾ ಆರ್ ಜೆ ಅವರನ್ನು ಸನ್ಮಾನಿಸಲಾುತು.

ಕಾರ್ಯಕ್ರಮದಲ್ಲಿ ಕೈ ಮಗ್ಗ ಮತ್ತು ಜವಳಿ ಇಲಾಖೆ ಉಪ ನಿರ್ದೇಶಕ ರಂಗಸ್ವಾಮಿ, ಪುರಸಭೆ ಮುಖ್ಯಾಧಿಕಾರಿ ರಾಜಣ್ಣ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಹಾಯಕ ನಿರ್ದೇಶಕಿ ನಿರ್ಮಲ ಎಸ್.ಎಚ್, ಎಸ್.ಪಿ.ವೈ. ಎಸ್.ಎಸ್ ನ ಜಿಲ್ಲಾ ಸಂಚಾಲಕ ಶಂಕರ್ ನಾರಾಯಣ ಶಾಸ್ತ್ರಿ, ಮಂಡ್ಯ ವಿವೇಕಾನಂದ ಯೋಗ ಕೇಂದ್ರದ ಚಂದ್ರು, ಕೆ. ಶೆಟ್ಟಹಳ್ಳಿ ವಿವೇಕಾನಂದ ಯೋಗ ಕಿಶೋರ ಕೇಂದ್ರದ ಯೋಗ ಗುರು ಅಪ್ಪಾಜಿ ಸೇರಿದಂತೆ ಇತರರು ಇದ್ದರು.

PREV

Recommended Stories

KAPPEC ಮೌನ ಕ್ರಾಂತಿ : ಸಾಲ ಪಡೆದವರಲ್ಲಿ ಶೇ.85 ಉದ್ದಿಮೆಗಳು ಯಶಸ್ಸು
ಆಹಾರೋದ್ಯಮಿಯಾಗಲು ಹಣಕಾಸು ನೆರವು ಸಿಗೋದೆಲ್ಲಿ? ಪಡೆಯೋದು ಹೇಗೆ?