ಕುಂದಗೋಳ:
ಮಂಗಳವಾರ ತಾಲೂಕು ಪಂಚಾಯಿತಿಯಲ್ಲಿ ವಿವಿಧ ಯೋಜನೆಗಳ ಕುರಿತು ಪ್ರಗತಿ ಪರಿಶೀಲನಾ ಸಭೆ ನಡೆಸಿದ ಅವರು, ಮಳೆಗಾಲ ಆರಂಭವಾಗಿದೆ. ಕುಡಿಯುವ ನೀರಿನಲ್ಲಿ ಕಲಬೇರಿಕೆಯಾಗದಂತೆ ಎಚ್ಚರಿಕೆ ವಹಿಸಿ ನೀರು ಸರಬರಾಜು ಮಾಡಬೇಕು ಎಂದರು.ತಾಲೂಕಿನ ಬಹುತೇಕ ಗ್ರಾಮದಲ್ಲಿ ಜೆಜೆಎಂ ಕಾರ್ಯ ಅಪೂರ್ಣವಾಗಿರುವ ದೂರುಗಳು ಬಂದಿವೆ. ಸಂಬಂಧಿಸಿದ ಗುತ್ತಿಗೆದಾರರು ಕ್ರಮವಹಿಸಿ ಕೆಲಸ ಪೂರ್ಣಗೊಳಿಸಲು ತಿಳಿಸಬೇಕು ಎಂದು ಸೂಚಿಸಿದರು.
ಕೃಷಿ ಇಲಾಖೆ ಅಧಿಕಾರಿ ಭಾರತಿ ಮೆಣಸಿನಕಾಯಿ ಮಾತನಾಡಿ, ಈಗಾಗಲೇ 49% ಬಿತ್ತನೆ ಕಾರ್ಯ ಪೂರ್ಣಗೊಂಡಿದೆ. ಯಾವುದೇ ರೀತಿ ಬಿತ್ತನೆ ಬೀಜ ಹಾಗೂ ರಸಗೊಬ್ಬರದ ಸಮಸ್ಯೆ ಇಲ್ಲ ಎಂದು ಸಭೆಗೆ ಮಾಹಿತಿ ನೀಡಿದರು.ಲೋಕೋಪಯೋಗಿ ಇಲಾಖೆ ಅಧಿಕಾರಿ ಸುಧಾಕರ ಬಾಗೇವಾಡಿ ಮಾತನಾಡಿ, ಪಟ್ಟಣದ ಟಿವಿಎಸ್ ಶೋರೂಂನಿಂದ ಕೋರ್ಟ್ ಸರ್ಕಲ್ ವರೆಗೆ ರಸ್ತೆಗೆ ಸಂಬಂಧಿಸಿದಂತೆ ಕೋರ್ಟ್ನಲ್ಲಿ ತಕರಾರು ಇರುವುದರಿಂದ ಕಾಮಗಾರಿ ಮಾಡಲು ಆಗುತ್ತಿಲ್ಲ. ಗುಡಗೇರಿಯಿಂದ ಪಶುಪತಿಹಾಳ ರಸ್ತೆ ಅಭಿವೃದ್ಧಿಗೆ ರೈತರು ತಕರಾರು ತೆಗೆದಿದ್ದು ಅದು ಸಾಧ್ಯವಾಗುತ್ತಿಲ್ಲ. ಈ ಸಮಸ್ಯೆ ನಿವಾರಿಸುವಂತೆ ಶಾಸಕರಿಗೆ ಮನವಿ ಮಾಡಿದರು.
ಬಿಇಒ ಸಂಜೀವಕುಮಾರ ಬೆಳವಟಗಿ ಇಲಾಖೆ ಮಾಹಿತಿ ನೀಡಿದರು. ಈ ವೇಳೆ ತಾಪಂ ಇಒ ಎಸ್.ಎಸ್. ಕಾದ್ರೋಳ್ಳಿ, ತಹಸೀಲ್ದಾರ್ ಎಚ್. ಪ್ರಾಣೇಶ, ವಿವಿಧ ಇಲಾಖೆಯ ಅಧಿಕಾರಿಗಳು, ಗ್ರಾ ಪಂ ಪಿಡಿಒ, ಕರವೇ ತಾಲೂಕಾಧ್ಯಕ್ಷ ಕಲ್ಲಪ್ಪ ಹರಕುಣಿ ಇದ್ದರು.