ಅರಿವಿನ ಕೊರತೆಯಿಂದ ಕ್ಯಾನ್ಸರ್ ಪ್ರಕರಣ ಹೆಚ್ಚಳ

KannadaprabhaNewsNetwork |  
Published : Mar 01, 2024, 02:17 AM IST
ಪತ್ರಿಕಾಗೋಷ್ಠಿ | Kannada Prabha

ಸಾರಾಂಶ

ಜಾಗತಿಕವಾಗಿ ಪ್ರಮುಖ ಆರೋಗ್ಯ ಸಮಸ್ಯೆಯಾಗಿರುವ ಕ್ಯಾನ್ಸರ್‌ಅನ್ನು ಮುಂಜಾಗ್ರತೆಯ ತಪಾಸಣೆ ಹಾಗೂ ಚಿಕಿತ್ಸೆಯಿಂದ ನಿವಾರಿಸಬಹುದು

ಕನ್ನಡಪ್ರಭ ವಾರ್ತೆ ತುಮಕೂರು

ಜಾಗತಿಕವಾಗಿ ಪ್ರಮುಖ ಆರೋಗ್ಯ ಸಮಸ್ಯೆಯಾಗಿರುವ ಕ್ಯಾನ್ಸರ್‌ಅನ್ನು ಮುಂಜಾಗ್ರತೆಯ ತಪಾಸಣೆ ಹಾಗೂ ಚಿಕಿತ್ಸೆಯಿಂದ ನಿವಾರಿಸಬಹುದು. ಆದರೆ ಜನರಲ್ಲಿ ಅರಿವಿನ ಕೊರತೆಯೇ ಕ್ಯಾನ್ಸರ್‌ನಿಂದ ಸಾವಿನ ಪ್ರಕರಣಗಳು ಹೆಚ್ಚಾಗುತ್ತಿವೆ. ಈ ಬಗ್ಗೆ ಜನರಲ್ಲಿ ಅರಿವು ಮೂಡಬೇಕು ಎಂದು ಬೆಂಗಳೂರು ಯಶವಂತಪುರದ ಮಣಿಪಾಲ್ ಆಸ್ಪತ್ರೆಯ ಕ್ಯಾನ್ಸರ್‌ ತಜ್ಞ ವೈದ್ಯರು ಹೇಳಿದರು.

ಬುಧವಾರ ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಆಸ್ಪತ್ರೆಯ ತಜ್ಞ ವೈದ್ಯ ಡಾ.ಎ. ಸತೀಶ್‌ಕುಮಾರ್‌, ಆರಂಭದ ಹಂತದಲ್ಲೇ ತಪಾಸಣೆ ಮಾಡಿಸಿಕೊಂಡರೆ ಮೊದಲ ಹಂತದ ಕ್ಯಾನ್ಸರ್‌ಅನ್ನು ಗುಣಪಡಿಸಬಹುದು. ಲ್ಯುಕೇಮಿಯಾ, ಲಿಂಫೋಮಾ ಮತ್ತು ಮಲ್ಟಿಪಲ್ ಮೈಲೋಮಾದಂತಹ ರಕ್ತ ಮತ್ತು ಮೂಳೆ ಕ್ಯಾನ್ಸರ್‌ಗಳು ತಮ್ಮ ಸೆಲ್ಯೂಲಾರ್‌ ಹೇಗೆ ಕೆಲಸ ಮಡುತ್ತವೆ ಎಂಬುದರ ಮೇಲೆ ವಿವಿಧ ಕ್ಯಾನ್ಸರ್‌ಗಳು ಭಿನ್ನವಾಗಿರುತ್ತವೆ ಎಂದರು.

ಮಲ್ಟಿಮೋಡಲ್ ಚಿಕಿತ್ಸೆಯೊಂದಿಗೆ ಹೆಚ್ಚಿನ ರಕ್ತದ ಕ್ಯಾನ್ಸರ್‌ಗಳನ್ನು ಗುಣಪಡಿಸಬಹುದು. ಸಮಗ್ರ ರೀತಿಯಲ್ಲಿ ಕ್ಯಾನ್ಸರ್‌ ಚಿಕಿತ್ಸೆ ನೀಡುವಲ್ಲಿ ಯಶವಂತಪುರದ ಮಣಿಪಾಲ್ ಆಸ್ಪತ್ರೆಯಲ್ಲಿ ಎಲ್ಲಾ ಚಿಕಿತ್ಸಾ ಸೌಲಭ್ಯವಿದೆ ಎಂದರು.

ಆಂಕೋಲಾಜಿಸ್ಟ್ ಡಾ. ರಾಹುಲ್ ಎಸ್. ಕನಕ ಮಾತನಾಡಿ, ಕ್ಯಾನ್ಸರ್‌ ರೋಗ ಲಕ್ಷಣಗಳು ಆರಂಭಿಕ ಹಂತದ ಪತ್ತೆ ಮತ್ತು ಅವುಗಳನ್ನು ಸಂಬಂಧಪಟ್ಟ ತಜ್ಞರಿಗೆ ವರದಿ ಮಾಡುವುದು ಕ್ಯಾನ್ಸರ್‌ ಚಿಕಿತ್ಸೆಯಲ್ಲಿ ನಿರ್ಣಾಯಕವಾಗಿದೆ. ಆರಂಭಿಕ ಚಿಕಿತ್ಸೆಗಳು ಪಾಸಿಟಿವ್ ಫಲಿತಾಂಶಗಳ ಸಾಧ್ಯತೆಯನ್ನು ಹೆಚ್ಚಿಸುತ್ತವೆ. ಮೂರು ವಾರಗಳಿಗೆ ಮೀರಿದ ಯಾವುದೇ ವಿವರಿಸಲಾಗದ ಅಸ್ಪಷ್ಟ ರೋಗ ಲಕ್ಷಣಗಳಿದ್ದರೆ ವೈದ್ಯರನ್ನು ಭೇಟಿ ಮಾಡುವುದು ಉತ್ತಮ ಎಂದು ಹೇಳಿದರು.

ಹತ್ತು ಕೆಜಿ ಅಥವಾ ಅದಕ್ಕಿಂಥಾ ಹೆಚ್ಚಿನ ಹಠಾತ್ ಅಥವಾ ಉದ್ದೇಶಪೂರ್ವಕವಲ್ಲದ ತೂಕ ನಷ್ಟ, ಆಹಾರ ನುಂಗಲು ತೊಂದರೆ, ಹೊಟ್ಟೆ ಅಸ್ವಸ್ಥತೆ, ಅಜೀರ್ಣದಿಂದಾಗಿ ಹಸಿವಿನಲ್ಲಿ ಬದಲಾವಣೆ, ಮಲದಲ್ಲಿ ರಕ್ತದಂತಹ ಜೀರ್ಣಾಂಗ ವ್ಯೂಹದ ಲಕ್ಷಣಗಳು, ವಾಸಿಯಾಗದೇ ಇರುವ ಹುಣ್ಣು ಮುಂತಾದವು ಕ್ಯಾನ್ಸರ್‌ ಲಕ್ಷಣಗಳು ಎಂದರು.

ವಯಸ್ಸಿಗೆ ಅನುಗುಣವಾಗಿ ಕ್ಯಾನ್ಸರ್‌ ಸ್ಕ್ರೀನಿಂಗ್ ಪರೀಕ್ಷೆ ಮಡುವುದು ಕೂಡಾ ಮುಖ್ಯವಾಗಿದೆ. ಸ್ಕ್ರೀನಿಂಗ್ ಪರೀಕ್ಷೆಗಳು ಕ್ಯಾನ್ಸರ್‌ಅನ್ನು ಅರಂಭದ ಹಂತದಲ್ಲಿ ಗುರುತಿಸಲು ಸಹಾಯವಾಗುತ್ತದೆ ಎಂದರು.

ಮತ್ತೊಬ್ಬ ತಜ್ಞ ವೈದ್ಯರಾದ ಡಾ. ವಿನಯ್ ಮುನಿಕೋಟಿ ವೆಂಕಟೇಶ್ ಅವರು ಮಣಿಪಾಲ್ ಆಸ್ಪತ್ರೆಯ ಬಿಎಂಟಿ ಘಟಕದಲ್ಲಿನ ಸೌಲಭ್ಯಗಳ ಬಗ್ಗೆ ಮಾತನಾಡಿ, ಆಫ್ ಮ್ಯಾಚ್ ಆಗಿರುವ ಅಲೋಜೆನಿಕ್ ಸ್ಟೆಮ್ ಸೆಲ್ ಟ್ರಾನ್ಸಪಾಂಟೇಶನ್ ಸೇರಿದಂತೆ ಎಲ್ಲಾ ರೀತಿಯ ಸ್ಟೆಮ್ ಸೆಲ್ ಟ್ರಾನ್ಸ್‌ಪಾಟೇಶನ್ ಮಾಡಲಾಗುತ್ತದೆ. ಬೋನ್ ಮ್ಯಾರೋ ಟ್ರಾನ್ಸ್‌ಪಾಟೇಶನ್‌ಗೆ ಒಳಗಾಗುವ ರೋಗಿಗಳಿಗೆ ಉತ್ತಮ ಅರೈಕೆ ಮಾಡಲಾಗುತ್ತದೆ. ಇದರ ಜೊತೆಗೆ ಅತ್ಯಾಧುನಿಕ ಸೌಲಭ್ಯ, ಸುಧಾರಿತ ತಂತ್ರಜ್ಞಾನಗಳನ್ನು ಆಸ್ಪತ್ರೆ ಹೊಂದಿದೆ ಎಂದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಹಾವೇರಿ 33 ಹಳ್ಳಿಗಳಲ್ಲಿ ಪ್ರತಿ ದಿನ ಸಂಜೆ 7- 9 ಗಂಟೆವರೆಗೆ ಮೊಬೈಲ್‌, ಟಿವಿ ಬಂದ್‌
ಗೃಹಲಕ್ಷ್ಮೀಯರಿಗೆ ಗುಡ್ ನ್ಯೂಸ್ ಕೊಟ್ರು ಸಚಿವೆ ಲಕ್ಷ್ಮೀ